ರಾಜ್ಯದ ಅಂಗನವಾಡಿಗಳಿಗೆ ಫಿಲ್ಟರ್ ನೀರು, ಶೌಚಾಲಯ ವ್ಯವಸ್ಥೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ –ಕಹಳೆ ನ್ಯೂಸ್
ಬೆಂಗಳೂರು: ರಾಜ್ಯದ ಅಂಗನವಾಡಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅವರಿಗೆ ಫಿಲ್ಟರ್ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಕರ್ನಾಟಕ ವಿಧಾನ ಸಭೆಯಲ್ಲಿ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಕೆ.ಎಂ. ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬರುವ ಬಜೆಟ್ ನಲ್ಲಿ ಈ ಯೋಜನೆ ಅಳವಡಿಸಿಕೊಳ್ಳಲು ಮುಖ್ಯಮಂತ್ರಿಗೆ ಈಗಾಗಲೇ ಮನವಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು....







