ಇಂದು ಮತ್ತೆ ಸಾರಿಗೆ ಸಿಬ್ಬಂದಿಗಳಿಂದ ಪ್ರತಿಭಟನೆ-ಕಹಳೆ ನ್ಯೂಸ್
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಇಂದು ಮಧ್ಯಾಹ್ನ ಮತ್ತೆ ಬಿಎಂಟಿಸಿ ಕೇಂದ್ರ ಕಚೇರಿ ಎದುರು ಸಿಐಟಿಯು ಸಂಘಟನೆ ನೇತೃತ್ವದಲ್ಲಿ ಸಾರಿಗೆ ಸಿಬ್ಬಂದಿಗಳು ಪ್ರತಿಭಟನೆಯನ್ನು ನಡೆಸಲಿದ್ದಾರೆ. ಹಾಗೂ ವೇತನ ಪಾವತಿ, ಅಧಿಕಾರಿಗಳ ಕಿರುಕುಳ, ರಜೆಗಳ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಯಲಿದೆ. ಆದರೆ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಾಯ ಇರುವುದಿಲ್ಲ....







