Friday, July 24, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ನೆಲಮಂಗಲದಲ್ಲಿ ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ : ಮೂರು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಮಾರಪ್ಪನಪಾಳ್ಯದಲ್ಲಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ನಡೆದ ಮೂರು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. 20 ವರ್ಷದ ಉದಯ್ ಮೃತ ವಿದ್ಯಾರ್ಥಿ. ಕೆಸಿ ಜನರಲ್ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಉದಯ್, ಓದಿನ ಜೊತೆಗೆ ಬಾಟಾ ಶೋರೂಂನಲ್ಲೂ ಪಾರ್ಟ್‌ ಟೈಂ ಕೆಲಸ ಮಾಡುತ್ತಿದ್ದ. ಉದಯ್‌ಗಾಗಿ ಪೋಷಕರಾದ ಸುರೇಶ್ ಹಾಗೂ ಪ್ರೇಮಲತಾ ದಂಪತಿ...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಮತ್ತೆ ಹೆಚ್ಚಿದ ಕೊರೋನಾ ಭೀತಿ : 32 ಜನರಲ್ಲಿ ಸೋಂಕು ದೃಢ- ಕಹಳೆ ನ್ಯೂಸ್

ಬೆಂಗಳೂರು: ನೆರೆರಾಜ್ಯವಾದ ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದು ಇದೀಗ ಕರ್ನಾಟಕದಲ್ಲಿಯೂ ಆತಂಕ ಮೂಡಿಸಿದೆ. ರಾಜ್ಯದಲ್ಲಿ ಈಗಾಗಲೇ 32ಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಸಾರ್ವಜನಿಕರಲ್ಲಿ ಭಯ ಮೂಡಿಸಿದೆ. ಕೆಲ ವರ್ಷಗಳ ಹಿಂದೆ ಜಗತ್ತನ್ನೇ ನಡುಗಿಸಿದ್ದ ವೈರಸ್ ರೂಪಾಂತರದ ಭೀತಿ ಇದೀಗ ಮತ್ತೆ ಮುಂಚೂಣಿಗೆ ಬಂದಿದೆ. ಆಂಧ್ರಪ್ರದೇಶದ ಪರಿಸ್ಥಿತಿಗೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ನಡುವೆಯೇ, ಇತ್ತ ಕರ್ನಾಟಕದಲ್ಲೂ ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಜುಲೈ ತಿಂಗಳಿನಲ್ಲಿ ಪ್ರಕರಣಗಳ ದಿಢೀರ್ ಏರಿಕೆ:...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಶಿಕ್ಷಕರಿಂದ ಕಿರುಕುಳ ಆರೋಪ – ಬಿಲ್ಡಿಂಗ್‌ನಿಂದ ಹಾರಿ 7ನೇ ಕ್ಲಾಸ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ! -ಕಹಳೆ ನ್ಯೂಸ್

ಬೆಂಗಳೂರು: ಶಾಲೆಯಲ್ಲಿ ಶಿಕ್ಷಕರು ನೀಡಿದ ಅತಿಯಾದ ಮಾನಸಿಕ ಹಾಗೂ ದೈಹಿಕ ಕಿರುಕುಳವನ್ನು ತಾಳಲಾರದೆ ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಬಿಲ್ಡಿಂಗ್ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ  ಆಘಾತಕಾರಿ ಘಟನೆ ರಾಜಧಾನಿಯ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮರಿಯಪ್ಪನಪಾಳ್ಯದಲ್ಲಿರುವ 13 ವರ್ಷದ ವಿದ್ಯಾರ್ಥಿ ಸ್ಥಳೀಯ ಖಾಸಗಿ ಶಾಲೆಯೊಂದರಲ್ಲಿ ಏಳನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಶಾಲೆಯಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಶಿಕ್ಷಕರ ಈ ಕ್ರೂರ...
ಕ್ರೈಮ್ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಶಿಕ್ಷಕರಿಂದ ಕಿರುಕುಳ ಆರೋಪ : ಬಿಲ್ಡಿಂಗ್‌ನಿಂದ ಹಾರಿ 7ನೇ ಕ್ಲಾಸ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ!- ಕಹಳೆ ನ್ಯೂಸ್

ಬೆಂಗಳೂರು: ಶಾಲೆಯಲ್ಲಿ ಶಿಕ್ಷಕರು ನೀಡಿದ ಅತಿಯಾದ ಮಾನಸಿಕ ಹಾಗೂ ದೈಹಿಕ ಕಿರುಕುಳವನ್ನು ತಾಳಲಾರದೆ ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಬಿಲ್ಡಿಂಗ್ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ರಾಜಧಾನಿಯ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮರಿಯಪ್ಪನಪಾಳ್ಯದಲ್ಲಿರುವ 13 ವರ್ಷದ ವಿದ್ಯಾರ್ಥಿ ಸ್ಥಳೀಯ ಖಾಸಗಿ ಶಾಲೆಯೊಂದರಲ್ಲಿ ಏಳನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಶಾಲೆಯಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಶಿಕ್ಷಕರ ಈ ಕ್ರೂರ...
ಬೆಂಗಳೂರುಸುದ್ದಿ

30 ವರ್ಷದಿಂದ ಏಕಪಥ ಕೊಂಕಣ ರೈಲ್ವೆ ಅಭಿವೃದ್ಧಿಗೆ ಸಿಎಂ ಗೆ ಸಂಸದ ಕೋಟ ಹಾಗೂ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ-ಕಹಳೆ ನ್ಯೂಸ್

ಬೆಂಗಳೂರು: ಕಳೆದ ಸುಮಾರು 30 ವರ್ಷಗಳಿಂದ ಏಕಪಥದಲ್ಲೇ ಸಂಚರಿಸುತ್ತಿರುವ ಕೊಂಕಣ ರೈಲ್ವೆಯನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಸಹಕಾರ ನೀಡಬೇಕೆಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ನಡೆದ ಭೇಟಿಯಲ್ಲಿ ಸಂಸದರೊಂದಿಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಉಪಸ್ಥಿತರಿದ್ದರು. ಕೊಂಕಣ ರೈಲ್ವೆ ಪ್ರದೇಶವನ್ನು ಅಭಿವೃದ್ಧಿಪಡಿಸಲು ಮತ್ತು ಹಳಿಗಳನ್ನು ದ್ವಿಪಥಗೊಳಿಸಲು ಮೂಲಭೂತ ಸೌಕರ್ಯ ಕಲ್ಪಿಸುವ ಸಲುವಾಗಿ...
ಬೆಂಗಳೂರುರಾಜ್ಯಸುದ್ದಿ

ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ನಿಧನ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಬಿಜೆಪಿಯ (BJP) ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ರಾಮಚಂದ್ರೇಗೌಡ (88) ಅವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಮುಂಜಾನೆ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ರಾಮಚಂದ್ರೇಗೌಡ ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್....
ಬೆಂಗಳೂರುರಾಜ್ಯಸುದ್ದಿ

ಮದುವೆಯಾದ ನಾಲ್ಕೇ ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು – ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ದಾರುಣ ಘಟನೆ ಸಂಭವಿಸಿದ್ದು, ಮದುವೆಯಾಗಿ(Marriage) ಕೇವಲ ನಾಲ್ಕು ತಿಂಗಳಾಗಿದ್ದ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಮೂಲದ ಶ್ವೇತಾ (25) ಮೃತಪಟ್ಟ ದುರ್ದೈವಿ. ಇವರು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ವಾಸವಾಗಿದ್ದರು ಹಾಗೂ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತ ಶ್ವೇತಾ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿದ ಯುವಕನ ಕೈಹಿಡಿದು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, ವೈವಾಹಿಕ...
ಬೆಂಗಳೂರುರಾಜ್ಯಸುದ್ದಿ

ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಪಂಚಾಯತ್‌ ಚುನಾವಣೆ: ಈಶ್ವರ ಖಂಡ್ರೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯತ್‌ಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಪಂಚಾಯತ್‌ಗಳ ಮೇಲ್ದರ್ಜೆಯಿಂದಾಗಿ ಕ್ಷೇತ್ರ ಪುನರ್ ವಿಂಗಡಣೆ ಮಾಡಬೇಕಾಗಿ ಬಂದಿದ್ದು, ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳಲ್ಲಿ ಈ ಪ್ರಕ್ರಿಯೆ ಮುಗಿಸಿ, ಮೀಸಲಾತಿ ನಿರ್ಧರಿಸಿ ರಾಜ್ಯ ಚುನಾವಣೆ ಆಯೋಗಕ್ಕೆ ಸಲ್ಲಿಸಲಾಗುವುದು. ಆಯೋಗವು 45...
1 2 3 4 234
Page 2 of 234