Sunday, June 14, 2026

ಬೆಂಗಳೂರು

ಬೆಂಗಳೂರು

ರಾಸಲೀಲೆ ಪ್ರಕರಣ; ರಮೇಶ್ ಜಾರಕಿಹೊಳಿ ರಾಜೀನಾಮೆ-ಕಹಳೆ ನ್ಯೂಸ್

ಬೆಂಗಳೂರು : ಕೆಲಸದ ಕೊಡಿಸುವ ನೆಪದಲ್ಲಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾನು ಯಾವ ತಪ್ಪನ್ನು ಮಾಡಿಲ್ಲ, ನಾನೇಕೆ ರಾಜೀನಾಮೆ ಕೊಡಲಿ ಎಂದಿದ್ದ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ಬುಧವಾರ ರಾಜೀನಾಮೆ ನೀಡಿದ್ದಾರೆ. ಸಚಿವರು ಯುವತಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪ ಮಾಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿಯ ದಿನೇಶ್ ಕಲ್ಲಹಳ್ಳಿ ಅವರು ಸಚಿವ...
ಬೆಂಗಳೂರು

ರಮೇಶ್ ಜಾರಕಿಹೊಳಿ ವಿರುದ್ಧ ರಾಜೀನಾಮೆಗೆ ಒತ್ತಾಯಿಸಿ ಶಿವಮೊಗ್ಗ, ಬೆಂಗಳೂರಿನಲ್ಲಿ, ಕೈ ಪ್ರತಿಭಟನೆ-ಕಹಳೆ ನ್ಯೂಸ್

ಬೆಂಗಳೂರು : ಸೆಕ್ಷ್ ಸಿಡಿಯಲ್ಲಿ ಕಾಣಿಸಿಕೊಂಡ ರಾಜ್ಯದ ಪ್ರಭಾವಿ ನಾಯಕ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಬೆಂಗಳೂರು ಹಾಗೂ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಕೆಲಸದ ಆಮಿಷವೊಡ್ಡಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಕಾರಣದಿಂದ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗ, ಬೆಂಗಳೂರಿನಲ್ಲಿ ಕಾಂಗ್ರೆಸ್...
ಬೆಂಗಳೂರು

ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ತನಿಖೆಗೆ ಆದೇಶ; ಗೃಹ ಸಚಿವ ಬಸವರಾಜು ಬೊಮ್ಮಾಯಿ-ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕ ಗೃಹ ಸಚಿವ ಬಸವರಾಜು ಬೊಮ್ಮಾಯಿ ಅವರು, ರಾಜ್ಯದ ಪ್ರಭಾವಿ ನಾಯಕ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ. ಹಾಗೆಯೇ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡುವ ವಿಷಯಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಈ ಎಲ್ಲಾ ವಿಚಾರವೂ ಚರ್ಚೆ ಇದೆ. ಪಕ್ಷವು ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು. ಈ ಬಗ್ಗೆ ಮಾಧ್ಯಮಕ್ಕೆ...
ಬೆಂಗಳೂರು

ಇದು ಕೇವಲ ಟ್ರೇಲರ್ ‘ಪಿಚ್ಚರ್ ಅಭಿ ಬಾಕಿ ಹೈ’ ; ರಮೇಶ್ ಜಾರಕಿಹೊಳಿ ಸಿಡಿ ಬಗ್ಗೆ ಕಾಂಗ್ರೆಸ್ ವ್ಯಂಗ್ಯ-ಕಹಳೆ ನ್ಯೂಸ್

ಬೆಂಗಳೂರು : ಸರ್ಕಾರವನ್ನೇ ಬುಡಮೇಲು ಮಾಡುವಷ್ಟು ತಾಕತ್ತಿದ್ದ, ಮೈತ್ರಿ ಸರ್ಕಾರದ ಕ್ಷಿಪ್ರ ಕ್ರಾಂತಿ ಸರದಾರ , ರಾಜ್ಯದ ಪ್ರಭಾವಿ ನಾಯಕ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಬಾಂಬ್ ಸ್ಫೋಟ ರಾಜ್ಯ ಸರ್ಕಾರದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಬಿಜೆಪಿಯ ಆಂತರಿಕ ಜಗಳದ ಫಲವಾಗಿ ಮೊದಲ ಒಂದು ಸಿಡಿ ಹೊರಬಿದ್ದಿದೆ. 'ನೋಡಿದವರು' ಮಾಡಿದವರನ್ನ ಬೆತ್ತಲಾಗಿಸಿದ್ದಾರೆ! ಇದು ಕೇವಲ ಟ್ರೇಲರ್ 'ಪಿಚ್ಚರ್ ಅಭಿ...
ಬೆಂಗಳೂರು

ತೆರೆ ಮೇಲೆ ಬರಲಿದೆ ಕಂಬಳ ಕುರಿತ ಸಿನಿಮಾ-ಕಹಳೆ ನ್ಯೂಸ್

ಬೆಂಗಳೂರು : ಉಡುಪಿ ಹಾಗೂ ದಕ್ಷಿಣಕನ್ನಡ ಭಾಗದಲ್ಲಿ ಹೆಚ್ಚು ಜನಪ್ರಿಯವಾದ ಕ್ರೀಡೆ ಕಂಬಳದ ಕುರಿತು ಸ್ಯಾಂಡಲ್‍ವುಡ್ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಸಿನಿಮಾ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಕೆಸರುಗದ್ದೆಯಲ್ಲಿ ಉಸೈನ್ ಬೋಲ್ಟ್‍ಗಿಂತಲೂ ವೇಗವಾಗಿ ಓಡಿ ದಾಖಲೆ ನಿರ್ಮಿಸಿ ಕಂಬಳದ ಓಟಗಾರ ಶ್ರೀನಿವಾಸ ಗೌಡ ಅವರ ಕುರಿತು ಸಿನಿಮಾ ಮಾಡುವುದಾಗಿ ಕಳೆದ ವರ್ಷ ನಿರ್ಮಾಪಕ ನಿಖಿಲ್ ಮಂಜು ಹೇಳಿದ್ದರು, ಆದರೆ ಇದೀಗ ರಾಜೇಂದ್ರ ಸಿಂಗ್ ಬಾಬು ಕಂಬಳದ ವಿಷಯವನ್ನು...
ಬೆಂಗಳೂರು

ಸಿಡಿಯಿಂದ ಆನೆಬಲ ಬಂದಿದೆ, ರಾಜೀನಾಮೆ ಕೊಡಲ್ಲ; ಶಾಸಕ ಬಾಲಚಂದ್ರ ಜಾರಕಿಹೊಳಿ ಸಹೋದರನ ಪರ ಬ್ಯಾಟಿಂಗ್-ಕಹಳೆ ನ್ಯೂಸ್

ಬೆಂಗಳೂರು : ಶಾಸಕ ಬಾಲಚಂದ್ರ ಜಾರಕಿಹೊಳಿ , ಸಿಡಿಯಿಂದ ಆನೆಬಲ ಬಂದಿದೆ, ರಾಜೀನಾಮೆ ಕೊಡಲ್ಲ ಎಂದು ಸಹೋದರನ ಪರ ಬ್ಯಾಟಿಂಗ್ ಮಾಡಿದ್ದಾರೆ. ಸಹೋದರನನ್ನು ರಾಜಕೀಯವಾಗಿ ಕುಗ್ಗಿಸಲು ಈ ರೀತಿಯಾದ ಬಲೆ ಹೆಣೆಯಲಾಗಿದೆ. ಇದೊಂದು ಫೇಕ್ ವಿಡಿಯೋ ಆಗಿದೆ. ಒಂದುವೇಳೆ ಸಿಡಿ ನಿಜವಾಗಿದ್ದರೆ ನಾನೇ ಖುದ್ದು ರಾಜೀನಾಮೆ ನೀಡಲು ಹೇಳುತ್ತೇನೆ ಎಂದು ಹೇಳಿದ್ದಾರೆ. ಅದೊಂದು ಫೇಕ್ ವಿಡಿಯೋ ಆಗಿದ್ದು, 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲಾಗುವುದು. ವಿಡಿಯೋವನ್ನು ಯೂಟ್ಯೂಬ್‍ನಲ್ಲಿ ಅಪ್‍ಲೋಡ್...
ಬೆಂಗಳೂರು

ಹೆಗ್ಗನಹಳ್ಳಿಯ ರಾಜಗೋಪಾಲನಗರದಲ್ಲಿ ಪುತ್ರಿಯರ ಮೇಲೆಯೇ ಕೆಟ್ಟ ಕಣ್ಣಿಟ್ಟಿದ್ದ ಪತಿಯನ್ನು ಸುಪಾರಿ ನೀಡಿ ಕೊಲ್ಲಿಸಿದ ಪತ್ನಿ-ಕಹಳೆ ನ್ಯೂಸ್

ಬೆಂಗಳೂರು : ಹೆಗ್ಗನಹಳ್ಳಿಯ ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತನ್ನ ಪುತ್ರಿಯರೊಂದಿಗೆಯೇ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಆತನ ಪತ್ನಿ ಮತ್ತು ಪುತ್ರ ಸೇರಿ ಸುಪಾರಿ ನೀಡಿ ಕೊಲ್ಲಿಸಿದ ಘಟನೆ ನಡೆದಿದೆ. ತನ್ನ ಪತಿಯ ವರ್ತನೆಯಿಂದ ಬೇಸತ್ತು ಸುಪಾರಿ ಕೊಟ್ಟು ತನ್ನ ಪತಿಯನ್ನೇ ಕೊಲ್ಲಿಸಿದ ಪತ್ನಿ ಮತ್ತು ಆಕೆಯ ಪುತ್ರ ಸೇರಿ ಐವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹತ್ಯೆಯಾದ ವ್ಯಕ್ತಿ ಹೆಗ್ಗನಹಳ್ಳಿ ನಿವಾಸಿ 52 ವರ್ಷದ ಮೊಹಮ್ಮದ್ ಹಂಜಲ ಎಂದು...
ಬೆಂಗಳೂರು

ಸಾರ್ವಜನಿಕ ಉದ್ಯಮಗಳ ಖಾಸಗೀಕರಣ ವಿರೋಧಿಸಿ ಮಾರ್ಚ್ 16 ರಂದು ಒಗ್ಗಟ್ಟಿನ ಬೃಹತ್ ಪ್ರತಿಭಟನೆ; ಖಾಸಗೀಕರಣ ವಿರೋಧಿ ವೇದಿಕೆಯಿಂದ ಬೆಂಗಳೂರಿನಲ್ಲಿ ದುಂಡುಮೇಜಿನ ಸಭೆ-ಕಹಳೆ ನ್ಯೂಸ್

ಬೆಂಗಳೂರು : ದೇಶದ ಸಾರ್ವಜನಿಕ ಉದ್ಯಮಗಳನ್ನು ಖಾಸಗೀಕರಣಗೊಳಿಸುವುದರ ವಿರುದ್ದ ಸಂಘಟಿತರಾಗಿ ಹೋರಾಟ ಮಾಡುವ ಉದ್ದೇಶದಿಂದ ಮಾರ್ಚ್ 16 ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟವನ್ನು ಆಯೋಜಿಸುವುದಾಗಿ ಖಾಸಗೀಕರಣ ವಿರೋಧಿ ವೇದಿಕೆಯ ವತಿಯಿಂದ ಇಂದು ನಡೆದ ಸಭೆಯಲ್ಲಿ ತಿರ್ಮಾನಿಸಲಾಗಿದೆ. ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಸಂಘಟನೆಗಳ ಮುಖಂಡರುಗಳ ಮಾತುಗಳನ್ನು ಕೇಳಿದ ನಂತರ ಮಾತನಾಡಿದ ಖಾಸಗೀಕರಣ ವಿರೋಧಿ ಸಮಿತಿಯ ಸಂಚಾಲಕಿ ಎಸ್ ವರಲಕ್ಷ್ಮಿ, ಖಾಸಗೀಕರಣದ ವಿರುದ್ದ ಎಲ್ಲಾ ಸಂಘಟನೆಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ವಿರೋಧ ವ್ಯಕ್ತಪಡಿಸುತ್ತಲೇ...
1 210 211 212 213 214 229
Page 212 of 229