Sunday, June 14, 2026

ಬೆಂಗಳೂರು

ಬೆಂಗಳೂರು

ಮೆಡಿಕಲ್ ಕಾಲೇಜು ಮಾಲಿಕರ ಬಳಿ ಬರೋಬರಿ 81 ಕಿಲೋ ಚಿನ್ನ ಪತ್ತೆ-ಕಹಳೆ ನ್ಯೂಸ್

ಬೆಂಗಳೂರು : ಕೇರಳ ಮತ್ತು ಕರ್ನಾಟಕದ ಪ್ರತಿಷ್ಠಿತ ಆಸ್ವತ್ರೆ ಹಾಗೂ ಮೆಡಿಕಲ್ ಕಾಲೇಜಿನಲ್ಲಿ ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ದಾಳಿ ವೇಳೆ ಬರೋಬರಿ 81 ಕಿಲೋ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ ಸುಮಾರು 30 ಕೋಟಿ ರೂಪಾಯಿಗಳಾಗಿದ್ದುಮ, ಇದು ಆದಾಯ ತೆರಿಗೆ ಅಧಿಕಾರಿಗಳಿಗೆ ಅಚ್ಚರಿ ಮೂಡಿಸಿದೆ. ಇವುಗಳಿಗೆ ಸಂಬಂಧಿಸಿದಂತೆ ಸಮರ್ಪಕ ಮಾಹಿತಿ ನೀಡಲು ಮಾಲೀಕರು ವಿಫಲರಾಗಿದ್ದು, ಅತ್ಯಂತ ವ್ಯವಸ್ಥಿತವಾಗಿ ಕಾನೂನು ದುರುಪಯೋಗ ಪಡಿಸಿಕೊಂಡು ಮೆಡಿಕಲ್ ಕಾಲೇಜು ಮಾಲೀಕರು ತೆರಿಗೆ ವಂಚಿಸುತ್ತಿರುವುದನ್ನು...
ಬೆಂಗಳೂರು

ರಾಜಮಾರ್ತಾಂಡ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ಜೂನಿಯರ್ ಚಿರು ಮತ್ತು ಮೇಘನಾರಾಜ್-ಕಹಳೆ ನ್ಯೂಸ್

ಬೆಂಗಳೂರು : ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಟ್ರೈಲರ್ ರಿಲೀಸ್ ಆಗಿದ್ದು, ಜೂನಿಯರ್ ಚಿರು ಮತ್ತು ಮೇಘನಾರಾಜ್ ಸಿನಿಮಾ ಟ್ರೈಲರ್ ಲಾಂಚ್ ಮಾಡಿದ್ದಾರೆ. ಇದು ಪೊಗರು ಸಿನಿಮಾ ರಿಲೀಸ್ ಆದ ದಿನವೇ ರಾಜಮಾರ್ತಾಂಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಈ ಸಿನೆಮಾವನ್ನು ರಾಮ್ ನಾರಾಯಣ್ ನಿರ್ದೇಶನ ಮಾಡಿದ್ದಾರೆ. ಸಿನಿಮಾ ಟ್ರೈಲರ್ ಇಂದು ಬಿಡುಗಡೆಯಾಗಿದ್ದು, ಈ ಚಿತ್ರ ಚಿರಂಜೀವಿ ಸರ್ಜಾ ಅವರ ಕೊನೆಯ ಚಿತ್ರವಾಗಿದೆ. ಚಿರು ಸಿನಿಮಾದ ಟ್ರೈಲರ್ ಗೆ ಧ್ರುವ ಸರ್ಜಾ...
ಬೆಂಗಳೂರು

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ಪಡಿತರದ ಮೂಲಕ ನೀಡುತ್ತಿರುವ ಅಕ್ಕಿಯ ಸಮಸ್ಯೆಯ ಬಗ್ಗೆ ಮನವಿ-ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾಗಿ ಪಡಿತರದ ಮೂಲಕ ನೀಡುತ್ತಿರುವ ಅಕ್ಕಿಯ ಸಮಸ್ಯೆಯ ಬಗ್ಗೆ ಮನವಿ ಸಲ್ಲಿಸಲಾಯಿತು. ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಪಡಿತರ ಅಕ್ಕಿಯ ಸಮಸ್ಯೆ ಬಗ್ಗೆ ಮನವಿ ಮಾಡಿ ಪ್ರಸ್ತುತ ನೀಡುತ್ತಿರುವ ಕೊಚ್ಚಿಗೆ ಅಕ್ಕಿ ಅತ್ಯಂತ ಕಳಪೆ ಮಟ್ಟದ್ದಾಗಿದೆ. ಹೀಗಾಗಿ ಜನಸಾಮಾನ್ಯರು ಅದರಲ್ಲೂ ಬಡವರು ಅಕ್ಕಿಯನ್ನು ಉಪಯೋಗಿಸಲಾರದೆ ಕಡಿಮೆ ದರಕ್ಕೆ ಮಾರಾಟ ಮಾಡಿ, ಹೆಚ್ಚು ದರದ ಅಕ್ಕಿಯನ್ನು ಪಡೆಯುತ್ತಿದ್ದಾರೆ. ಕೆಲವು ಕಡೆ ಪಡಿತರ ಅಕ್ಕಿಯನ್ನು...
ಬೆಂಗಳೂರು

ಜನ ಸ್ವಯಂ ಪ್ರೇರಿತವಾಗಿ ರಾಮ ಮಂದಿರ ಆಗಬೇಕು ಎಂದು ಹಣ ನೀಡುತ್ತಿದ್ದಾರೆ ಇದು ಕೇವಲ ಬಿಜೆಪಿಯ ಮಂದಿರವಲ್ಲ, ಇದು ರಾಷ್ಟ್ರೀಯ ಸ್ಮಾರಕ; ರೇಣುಕಾಚಾರ್ಯ-ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು, ಜನ ಸ್ವಯಂ ಪ್ರೇರಿತವಾಗಿ ರಾಮ ಮಂದಿರ ಆಗಬೇಕು ಎಂದು ಹಣ ನೀಡುತ್ತಿದ್ದಾರೆ. ಇದು ಕೇವಲ ಬಿಜೆಪಿಯ ಮಂದಿರವಲ್ಲ, ಇದು ರಾಷ್ಟ್ರೀಯ ಸ್ಮಾರಕ ಎಂದು ಹೇಳಿದ್ದಾರೆ. ಇದುವರೆಗೂ ಎಲ್ಲಿಯೂ ಹಣವನ್ನು ಬಲವಂತವಾಗಿ ವಸೂಲಿ ಮಾಡಿರುವ ಉದಾಹರಣೆ ಇಲ್ಲ. ಯಾರು ಆ ರೀತಿ ನಕಲಿಯಾಗಿ ಮಾಡುತ್ತಾರೋ ಅವರ ಮೇಲೆ ಕೇಸು ನೀಡಿ ಎಂದು ಅವರು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿಕೆಗೆ...
ಬೆಂಗಳೂರು

ವರನಟ ಡಾ.ರಾಜ್ ಕುಮಾರ್ ಅವರ ಪ್ರತಿಮೆ ವಿಚಾರಕ್ಕೆ ನಾಲಿಗೆ ಹರಿಬಿಟ್ಟ ಶಾಂತಿನಗರ ಶಾಸಕ ಹ್ಯಾರಿಸ್-ಕಹಳೆ ನ್ಯೂಸ್

ಬೆಂಗಳೂರು : ಶಾಂತಿನಗರ ಶಾಸಕ ಎನ್ .ಎ.ಹ್ಯಾರಿಸ್ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ವರನಟ ಡಾ.ರಾಜ್ ಕುಮಾರ್ ಅವರ ಪ್ರತಿಮೆ ವಿಚಾರಕ್ಕೆ ನಾಲಿಗೆ ಹರಿಬಿಟ್ಟಿದ್ದು, ಡಾ.ರಾಜ್ ಪ್ರತಿಮೆ ವಿಚಾರವಾಗಿ ಕಾಮಕಾರಿ ವೀಕ್ಷಣೆಗೆ ತೆರಳಿದ್ದ ಶಾಸಕ ಹ್ಯಾರಿಸ್, ಪ್ರತಿಮೆ ಮಾಡೋದೆ ದೊಡ್ಡ ಕಥೆ, ಅದಕ್ಕೆ ಆಫೀಸ್ ಬೇರೆ ಕಟ್ಟೋಕಾಗುತ್ತಾ ? ಅವರ್ಯಾರೋ ಪ್ರತಿಮೆ ಅಂತ ಮಾಡಿರ್ತಾರೆ, ಅದಕ್ಕೆ ಕವರ್ ಬೇರೆ ಮಾಡ್ಬೇಕಾ? ಹಾಗೆ ಕವರ್ ಮಾಡಬೇಕು ಪ್ರೊಟೆಕ್ಷನ್ ಗೆ ಅನ್ನುವುದಾದರೆ ಪ್ರತಿಮೆಯನ್ನು...
ಬೆಂಗಳೂರು

ಸ್ಯಾಂಡಲ್‍ವುಡ್ ನಟ ಚೇತನ್ ಅಭಿನಯದ ‘100 ಕ್ರೋರ್ಸ್’ ಸಿನಿಮಾದ ಪೋಸ್ಟರ್ ಬಿಡುಗಡೆ-ಕಹಳೆ ನ್ಯೂಸ್

ಬೆಂಗಳೂರು : ಸ್ಯಾಂಡಲ್‍ವುಡ್ ನಟ ಚೇತನ್ ಟಾಲಿವುಡ್ ಅತ್ತ ಹೊರಟಿದ್ದು, ಅವರ "100 ಕ್ರೋರ್ಸ್' ಸಿನಿಮಾ ಕನ್ನಡ ಹಾಗೂ ತೆಲುಗಿನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚೇತನ್ ಅವರು, ನನ್ನ ಹೊಸ ಕನ್ನಡ-ತೆಲುಗು ಸಿನಿಮಾ 100 ಕ್ರೋರ್ಸ್‍ನ ಪೋಸ್ಟರ್‌ಗಳನ್ನು ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಗಿದ್ದು, ಹೈದರಾಬಾದ್‍ನಲ್ಲಿ ಶೂಟಿಂಗ್ ಪೂರ್ಣಗೊಳಿಸಿದ್ದೇವೆ ಎಂದು ಟ್ವೀಟ್ ಮಾಡಿರುತ್ತಾರೆ. ಈ ಸಿನಿಮಾದಲ್ಲಿ ಚೇತನ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಸಿನಿಮಾದ ಫಸ್ಟ್ ಲುಕ್ ಅನ್ನು ನಿರ್ದೇಶಕ ಸುನಿ ಬಿಡುಗಡೆಗೊಳಿಸಿದ್ದಾರೆ. ಇನ್ನು...
ಬೆಂಗಳೂರು

ಚಿನ್ನಪ್ರಿಯರ ಚಿನ್ನ ಖರೀದಿಯಲ್ಲಿ 340 ರೂ. ಇಳಿಕೆಯಾಗಿದೆ-ಕಹಳೆ ನ್ಯೂಸ್

ಬೆಂಗಳೂರು: ಆಭರಣ ಪ್ರಿಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ. 22 ಕ್ಯಾರೆಟ್‌ನ 10 ಗ್ರಾಂ. ಚಿನ್ನದ ಬೆಲೆಯಲ್ಲಿ 340 ರೂಪಾಯಿ ಇಳಿಕೆಯಾಗುವ ಮೂಲಕ 46,000 ರೂ. ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 47000 ರೂಪಾಯಿ ಆಗಿದೆ. ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 800 ರೂಪಾಯಿ ಹೆಚ್ಚಳವಾಗಿದ್ದು, ಈ ಮೂಲಕ 69, 500 ಇದ್ದ 1 ಕೆಜಿ ಬೆಳ್ಳಿಯ ಬೆಲೆ ಸದ್ಯ 70,300 ರೂಪಾಯಿಗೆ ಏರಿಕೆ...
ಬೆಂಗಳೂರು

5 ಎಕರೆಗಿಂತ ಹೆಚ್ಚು ಜಮೀನು ಇರುವ ಮತ್ತು ಸರ್ಕಾರಿ ವರಮಾನ ಪಡೆಯುವವರ ಬಿಪಿಎಲ್ ಕಾರ್ಡ್ ಕ್ಯಾನ್ಸಲ್: ಉಮೇಶ್ ಕತ್ತಿ-ಕಹಳೆ ನ್ಯೂಸ್

ಬೆಂಗಳೂರು: ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ, ಈ ಹಿಂದೆ ಮಾನದಂಡಗಳೇ ಮುಂದುವರಿಸಲಾಗುವುದು ಎಂದು ಉಮೇಶ್ ಕತ್ತಿ ಯೂಟರ್ನ್ ಹೊಡೆದಿದ್ದಾರೆ. ಮನೆಯಲ್ಲಿ ಟಿವಿ, ಬೈಕ್, ಫ್ರಿಡ್ಜ್ ಇದ್ದರೆ ಅವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗುವುದು ಎಂದು ಹೇಳಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು, ಸಾರ್ವಜನಿಕರಿಂದ ಹಾಗೂ ಸ್ವಪಕ್ಷದ ಶಾಸಕರಿಂದಲೇ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡ್ ಮೊದಲಿದ್ದ ನಿಯಮವೇ ಅನ್ವಯವಾಗುತ್ತದೆ ಎಂದರು. ಈ...
1 212 213 214 215 216 229
Page 214 of 229