Thursday, March 12, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ: ಗೃಹ ಸಚಿವ ಪರಮೇಶ್ವರ್ -ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಇಂದು ಪೊಲೀಸ್ ಅಧಿಕಾರಿಗಳ ಹಾಗೂ ಜೈಲಾಧಿಕಾರಿಗಳ ಮಹತ್ವದ ಸಭೆ ನಡೆಯಲಿದೆ. ಇಂದು ನಡೆಯಲಿರುವ ಸಭೆಯಲ್ಲಿ ರಾಜ್ಯದ ಎಲ್ಲಾ ಜೈಲಿನ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಜೈಲಿನಲ್ಲಿ ಕಾನೂನು ಬಾಹಿರಚಟುವಟಿಕೆ ನಡೆಯುತ್ತಿದೆ ಎಂಬ ಬಗ್ಗೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ನ.15ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ : ರಾಜ್ಯ ನಾಯಕತ್ವ ಬದಲಾವಣೆ ಸಾಧ್ಯತೆ?! – ಕಹಳೆ ನ್ಯೂಸ್

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಭಾರಿ ಚರ್ಚೆ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಸಂಸದ ರಾಜಶೇಖರ ಹಿಟ್ನಾಳ ದೆಹಲಿಯಲ್ಲಿ ಔತಣಕೂಟ ಏರ್ಪಡಿಸಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರುಗಳಿಗೆ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನವೆಂಬರ್ 15ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಹೌದು ನವೆಂಬರ್ ಕ್ರಾಂತಿ ಚರ್ಚೆ ಮಧ್ಯ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಳ್ಳಲಿದ್ದು ಕಾಂಗ್ರೆಸ್ ಮನೆಯಲ್ಲಿ ದೆಹಲಿ ದಂಡಯಾತ್ರೆ ಜೋರಾಗಿದೆ. ನವೆಂಬರ್...
ಬೆಂಗಳೂರುರಾಜ್ಯಸುದ್ದಿ

ಸಮಾಜ ಒಗ್ಗೂಡಿಸುವುದೇ ಸಂಘದ ಗುರಿ, ಆರ್‌ಎಸ್‌ಎಸ್‌ ಯಾರ ವಿರುದ್ಧವೂ ಇಲ್ಲ: ಮೋಹನ್ ಭಾಗವತ್‌ – ಕಹಳೆ ನ್ಯೂಸ್

ಬೆಂಗಳೂರು: ಸಂಘವು ಸಮಾಜದಲ್ಲಿ ಒಗ್ಗೂಡಿಸುವ ಉದ್ದೇಶವನ್ನು ಹೊಂದಿದೆಯೇ ಹೊರತು ನಾಶ ಮಾಡುವ ಅಥವಾ ವಿರೋಧಿಸುವುದಕ್ಕಾಗಿ ರಚನೆಯಾಗಿಲ್ಲ. ನಮ್ಮ ಪೂರ್ವಿಕರು ಸಮಾಜದಲ್ಲಿ ಒಗ್ಗಟ್ಟು ಮೂಡಿಸಲು ಬಳಸಿದ ದಾರಿಗಳನ್ನೇ ಅಳವಡಿಸಿಕೊಂಡು, ಸಮಾಜದಲ್ಲಿನ ನ್ಯೂನತೆಗಳನ್ನು ಹೋಗಲಾಡಿಸುವುದು ಸಂಘದ ಉದ್ದೇಶ. ಉತ್ತಮ ವ್ಯಕ್ತಿಗಳನ್ನು ಸೃಷ್ಟಿಸುವ ಮೂಲಕ ಸಮಾಜ ಕಟ್ಟುವುದು ಸಂಘದ ಸಂಕಲ್ಪ ಎಂದು ಆರ್‌ಎಸ್‌ಎಸ್‌ ಸರ ಸಂಘಚಾಲಕ ಮೋಹನ್ ಭಾಗವತ್‌ ಹೇಳಿದ್ದಾರೆ. ನಗರದ ಪಿಇಎಸ್ ಕಾಲೇಜಿನಲ್ಲಿ ಆರ್‌ಎಸ್‌ಎಸ್‌ಗೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಉಪನ್ಯಾಸ 'ನವ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು-ಎರ್ನಾಕುಲಂ ಸೇರಿ 4 ವಂದೇ ಭಾರತ್‌ ರೈಲುಗಳಿಗೆ ಪಿಎಂ ಮೋದಿ ಚಾಲನೆ – ಕಹಳೆ ನ್ಯೂಸ್

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ್ದಾರೆ. ಇದು ಭಾರತದ ವಿಸ್ತರಿಸುತ್ತಿರುವ ಅರೆ-ಹೈ-ಸ್ಪೀಡ್ ರೈಲುಗಳ ಜಾಲದಲ್ಲಿ ಮತ್ತೊಂದು ಮೈಲಿಗಲ್ಲಾಗಿದೆ. ಈ ರೈಲುಗಳು ವಾರಣಾಸಿ-ಖಜುರಾಹೊ, ಲಕ್ನೋ-ಸಹಾರನ್‌ಪುರ, ಫಿರೋಜ್‌ಪುರ-ದೆಹಲಿ ಮತ್ತು ಎರ್ನಾಕುಲಂ-ಬೆಂಗಳೂರು ಮಾರ್ಗಗಳಲ್ಲಿ ಕಾರ್ಯನಿರ್ವಹಿಸಲಿದ್ದು, ದೇಶದ ಹಲವಾರು ಪ್ರದೇಶಗಳಲ್ಲಿ ವೇಗದ ಪ್ರಯಾಣ ಮತ್ತು ಸುಧಾರಿತ ಸಂಪರ್ಕವನ್ನು ಭರವಸೆ ನೀಡುತ್ತವೆ. ವಾರಣಾಸಿ-ಖಜುರಾಹೊ ವಂದೇ ಭಾರತ್ ವಾರಣಾಸಿ,...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸಂತಾಪಸಿನಿಮಾಸುದ್ದಿ

KGF ಚಾಚಾ ಖ್ಯಾತಿಯ ಹರೀಶ್ ರಾಯ್ ಇನ್ನಿಲ್ಲ – ಕಹಳೆ ನ್ಯೂಸ್

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಇಂದು ನಿಧನ ಹೊಂದಿದ್ದಾರೆ. ಹಲವು ವರ್ಷಗಳಿಂದ ಕ್ಯಾನ್ಸರ್‌ನೊಂದಿಗೆ ಹೋರಾಟ ನಡೆಸುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ‘ಓಂ, ನಲ್ಲ, ಕೆಜಿಎಫ್, ಕೆಜಿಎಫ್ 2’ ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಹರೀಶ್ ರಾಯ್ ಅವರಿಗೆ ಥೈರಾಯ್ಡ್ ಕ್ಯಾನ್ಸರ್ ಇತ್ತು. ಇತ್ತೀಚಿನ ದಿನಗಳಲ್ಲಿ ಅವರ ಆರೋಗ್ಯ ಹದಗೆಟ್ಟಿತ್ತು. ಕಳೆದ ಕೆಲ ದಿನಗಳ...
ಬೆಂಗಳೂರುಸಿನಿಮಾಸುದ್ದಿ

ಆ್ಯಕ್ಷನ್, ಡ್ರಾಮಾ ‘ಉಗ್ರ ತಾಂಡವ’ ಟೀಸರ್ ಬಿಡುಗಡೆ ; ಮಲೆನಾಡ ಸೊಗಡಿನ ಚಿತ್ರ ನಿರ್ಮಿಸುತ್ತಿದ್ದಾರೆ ಸಮಾಜ ಸೇವಕ, ಡಾ||ಎನ್. ನರಸಿಂಹಮೂರ್ತಿ – ಕಹಳೆ ನ್ಯೂಸ್

ಸಮಾಜ ಸೇವಕ, ರಿಯಲ್ ಎಸ್ಟೇಟ್ ಉದ್ಯಮಿ ಡಾ|| ಎನ್. ನರಸಿಂಹಮೂರ್ತಿ ಸುರಭಿ ಫಿಲಂಸ್ ಬ್ಯಾನರ್ ನಲ್ಲಿ 'ಉಗ್ರ ತಾಂಡವ' ಸಿನಿಮಾ ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆ ಆಗಿದೆ. ಗೌತಮ ಸೂರ್ಯ ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕನಾಗಿ ಚಿರಂತ ನಟಿಸುತ್ತಿದ್ದಾರೆ. ಮಲೆನಾಡ ಸೊಗಡಿನಲ್ಲಿ ತಯಾರಾಗುತ್ತಿರುವ ಈ ಸಿನಿಮಾದ ಶೂಟಿಂಗ್ ಇನ್ನಷ್ಟೇ ಶುರುವಾಗಬೇಕಾಗಿದೆ. ಕರಾವಳಿಯಲ್ಲಿ ನಡೆಯುವ ರಾಜಕೀಯ, ಮಾಫಿಯಾ ಹಾಗೂ ಜಮೀನ್ದಾರ-ಕಾರ್ಮಿಕರ ಸುತ್ತ ಈ ಚಿತ್ರದ ಕಥೆ ಸಾಗುತ್ತದೆ. ಟೀಸರ್...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ : ಮಹಿಳಾ ಟೆಕ್ಕಿ ಅರೆಸ್ಟ್.. – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ಸೇರಿದಂತೆ ದೇಶದ ಹಲವು ಕಡೆ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಮಹಿಳಾ ಟೆಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಗುಜರಾತ್ ಮೂಲದ ರೆನೆ ಜೋಶಿಲ್ದಾ ಎಂದು ಗುರುತಿಸಲಾಗಿದೆ. ಈಕೆ ಗುಜರಾತ್ ಮೂಲದ ಟೆಕ್ಕಿ ಆಗಿದ್ದು, ಬೆಂಗಳೂರಿನ 7 ಶಾಲೆ ಸೇರಿ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಳು. ಬೆಂಗಳೂರು ಮಾತ್ರವಲ್ಲದೇ ಚೆನ್ನೈ, ಗುಜರಾತ್, ಹೈದರಾಬಾದ್ ಸೇರಿದಂತೆ ಹಲವು ಕಡೆ ಶಾಲೆಗಳಿಗೆ ಈಕೆ ಬೆದರಿಕೆ...
ಬೆಂಗಳೂರುರಾಜ್ಯಸುದ್ದಿ

ಕುಡಿದು ಬರುತ್ತಿದ್ದ ಡ್ರೈವರ್‌ಗಳ ಬಳಿ ಲಂಚ ಪಡೆದು ಡ್ಯೂಟಿ : ‘BMTC’ ಡಿಪೋ ಮ್ಯಾನೇಜರ್ ಸೇರಿ 9 ಮಂದಿ ಸಸ್ಪೆಂಡ್ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಡ್ರೈವರ್ ಗಳು ಕುಡಿದು ಬಂದು ಕರ್ತವ್ಯಕ್ಕೆ ಹಾಜರಾಗುತ್ತಿದ್ದರು. ಕುಡಿದು ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಡ್ರೈವರ್‌ಗಳ ಬಳಿ ಲಂಚ ಪಡೆದು ಡ್ಯೂಟಿ ನೀಡಿದ್ದಕ್ಕೆ ಬಿಎಂಟಿಸಿ ಅಧಿಕಾರಿ ಸೇರಿ 9 ಮಂದಿಯನ್ನು ಅಮಾನತು ಮಾಡಲಾಗಿದೆ. ಹೌದು ಬಿಎಂಟಿಸಿ ಚಾಲಕರು ಕುಡಿದು ಡ್ರೈವ್‌ ಮಾಡುತ್ತಿರುವ ವೀಡಿಯೋ ವೈರಲ್ ಆಗಿತ್ತು. ಕುಡಿದು ಬರುತ್ತಿದ್ದ ಬಸ್ ಡ್ರೈವರ್‌ಗಳಿಗೆ ಲಂಚ ಪಡೆದು ಅಧಿಕಾರಿಗಳು ಡ್ಯೂಟಿ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಡಿಪೋ ಮ್ಯಾನೇಜರ್...
1 25 26 27 28 29 212
Page 27 of 212