ಧರ್ಮಸ್ಥಳ, ಚಾಮುಂಡೇಶ್ವರಿ ಆಯ್ತು ಈಗ ಮದ್ದೂರು; ಅಶೋಕ್ ಕಿಡಿ-ಕಹಳೆ ನ್ಯೂಸ್
ಬೆಂಗಳೂರು: ಧರ್ಮಸ್ಥಳ ಆಯ್ತು, ಚಾಮುಂಡೇಶ್ವರಿ ಆಯ್ತು, ಈಗ ಮದ್ದೂರು. ಈ ಘಟನೆಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮದ್ದೂರು ಕಲ್ಲೆಸೆತ ಮತ್ತು ಲಾಠಿಚಾರ್ಜ್ ಹೇಯಕೃತ್ಯ. ಕಲ್ಲೆಸೆತಕ್ಕೆ ಸರ್ಕಾರದ ಕುಮ್ಮಕ್ಕಿದೆ. ಈ ಘಟನೆಗೆ ನೇರ ಕಾರಣ ಪೊಲೀಸ್ ಅವರು ಅಲ್ಲ, ಸರ್ಕಾರದ ಕುಮ್ಮಕ್ಕಿಲ್ಲದೇ...







