ಜನರಿಗೆ ನಿರಾಶೆ ಮಾಡಬಾರದು, ಅದಕ್ಕೆ ಚಿನ್ನಸ್ವಾಮಿಯಲ್ಲಿ IPL ಆಡೋದಕ್ಕೆ ಷರತ್ತುಬದ್ಧ ಅನುಮತಿ : ಪರಮೇಶ್ವರ್ – ಕಹಳೆ ನ್ಯೂಸ್
ಬೆಂಗಳೂರು: ಜನರಿಗೆ ನಿರಾಶೆ ಮಾಡಬಾರದು, ಅದಕ್ಕೆ ಚಿನ್ನಸ್ವಾಮಿಯಲ್ಲಿ ಐಪಿಎಲ್ ಆಡೋದಕ್ಕೆ ಷರತ್ತುಬದ್ಧ ಅನುಮತಿ ನೀಡಿದ್ದೇವೆ ಎಂದು ಗೃಹ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಆಡೋದಕ್ಕೆ ಅನುಮತಿ ನೀಡಿದ ವಿಚಾರವಾಗಿ ಮಾತನಾಡಿ, ಕುನ್ಹಾ ಸಮಿತಿ ಕೆಲವೊಂದು ಶಿಫಾರಸ್ಸು ಮಾಡಿತ್ತು. ಅದರನ್ವಯ ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡಿ, ಜಿಬಿಎ ಕಮಿಷನರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ವಿ. ನಾವು ಕುನ್ಹಾ ಅವರ ಶಿಫಾರಸ್ಸು ಕೆಎಸ್ಸಿಎಗೆ ಕಳಿಸಿ, ಇದನ್ನ ಸರಿಮಾಡಿ ಎಂದಿದ್ದೆವು. ಬಳಿಕ ಕೆಎಸ್ಸಿಎನವರು...







