Saturday, June 20, 2026

ರಾಷ್ಟ್ರೀಯ

ಜಿಲ್ಲೆದೆಹಲಿರಾಷ್ಟ್ರೀಯಸುದ್ದಿ

ಸೈನಿಕರ ಅಂಗವೈಕಲ್ಯ ಪಿಂಚಣಿ ಪಡೆಯುವ ಸಮಸ್ಯೆಗಳ ಬಗ್ಗೆ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಸಂಸದ ಕ್ಯಾ. ಚೌಟ- ಕಹಳೆ ನ್ಯೂಸ್

ನವದೆಹಲಿ: ಕರ್ತವ್ಯ ನಿರತರಾಗಿದ್ದ ವೇಳೆ ಅಂಗವಿಕಲತೆಗೆ ಒಳಗಾಗಿರುವ ನಮ್ಮ ಮಾಜಿ ಸೈನಿಕರು ಪಿಂಚಣಿ ಪಡೆಯುವುದಕ್ಕೆ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವುದಕ್ಕೆ ಪ್ರಸ್ತುತವಿರುವ ವ್ಯವಸ್ಥೆ ಸರಳೀಕೃತಗೊಳಿಸುವ ಮೂಲಕ ಸಿಂಗಲ್ ವಿಂಡೋ ಮಾದರಿ ವ್ಯವಸ್ಥೆ ಜಾರಿಗೊಳಿಸಬೇಕು. ಜೊತೆಗೆ ಈ ವಿಚಾರದಲ್ಲಿ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ಹಾಗೂ ಬದ್ಧತೆ ಪ್ರದರ್ಶಿಸಬೇಕು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸತ್ತಿನಲ್ಲಿ ಆಗ್ರಹಿಸಿದ್ದಾರೆ.ಲೋಕಸಭೆಯಲ್ಲಿ ಇಂದು ಶೂನ್ಯವೇಳೆಯಲ್ಲಿ ನಿವೃತ್ತ ಯೋಧರು ಅಂಗವೈಕಲ್ಯ ಪಿಂಚಣಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಂಗಳೂರುರಾಜ್ಯಸುದ್ದಿ

ಉಪ್ಪಿನಂಗಡಿ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ; ಓರ್ವ ಮೃತ್ಯು, ಹತ್ತಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ – ಕಹಳೆ ನ್ಯೂಸ್

ಉಪ್ಪಿನಂಗಡಿ ಏ.04  : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, ಹತ್ತಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೀರಕಟ್ಟೆ ಎಂಬಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ ನೀರಕಟ್ಟೆಯ ಅಪಾಯಕಾರಿ ತಿರುವನ್ನು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಬಸ್ಸಿನಡಿ ಸಿಲುಕಿ ಮೃತಪಟ್ಟಿದ್ದು, ಹತ್ತಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ....
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ, ಕಾರಿಗೆ ಐರಾವತ ಬಸ್ ಡಿಕ್ಕಿ, ನಾಲ್ವರ ಸಾವು -ಕಹಳೆ ನ್ಯೂಸ್

ಬೆಂಗಳೂರು :ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯ ಮಂಡ್ಯ ಸಮೀಪದ ತೂಬಿನಕೆರೆ ಬಳಿ ಅತೀ ವೇಗವಾಗಿ ಬರುತ್ತಿದ್ದ ಐರಾವತ ಬಸ್ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಗರದ ನಾಲ್ವರು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತರು ಬೆಂಗಳೂರಿನ ಜೆಪಿ ನಗರದ ನಿವಾಸಿಗಳೆಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ. ಬೆಂಗಳೂರಿನಿಂದ ಪಿರಿಯಾಪಟ್ಟಣಕ್ಕೆ ಕಾರಿನಲ್ಲಿ ಈ ನಾಲ್ವರು ಹೋಗುತ್ತಿದ್ದಾಗ ಎಕ್ಸ್‌ಪ್ರೆಸ್ ಹೆದ್ದಾರಿಯ ಮಂಡ್ಯ ಸಮೀಪದ ತೂಬಿನಕೆರೆ ಬಳಿ ಸರ್ವಿಸ್ ರಸ್ತೆಗೆ ಹೋಗುವ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ಬೆಂಗಳೂರು ಮೆಟ್ರೋ ನಿಯಮ ಉಲ್ಲಂಘಿಸಿದ 27000 ಪ್ರಕರಣ -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ನಮ್ಮ ಮೆಟ್ರೋದಲ್ಲಿ ನಿಯಮ ಆಗಾಗ ಉಲ್ಲಂಘನೆ ಆಗುತ್ತಲೇ ಇವೆ. ಟಿಕೆಟ್ ರಹಿತ ಪ್ರಯಾಣ, ಮೆಟ್ರೋ ರೈಲಿನಲ್ಲಿ ಆಹಾರ ತಿನ್ನುವುದು, ಮದ್ಯಪಾನ, ಅಹಿತಕರ ನಡವಳಿಕೆ ಸೇರಿದಂತೆ ಅನೇಕ ಪ್ರಕರಣಗಳು ಕೇಳಿ ಬಂದಿದ್ದವು. ಸದ್ಯ ನಮ್ಮ ಮೆಟ್ರೋ ವ್ಯಾಪ್ತಿಯಲ್ಲಿ 27000 ಪ್ರಕರಣಗಳು ದಾಖಲಾಗಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRLC) ತಿಳಿಸಿದೆ. ಸೆಪ್ಟೆಂಬರ್ 2024 ರಿಂದ ಮಾರ್ಚ್ 2025ರ ನಡುವೆ ಕಳೆದ ಆರು ತಿಂಗಳ ಅವಧಿಯಲ್ಲಿ ಸಂಚಾರ...
ದಕ್ಷಿಣ ಕನ್ನಡದೆಹಲಿಮಂಗಳೂರುರಾಜಕೀಯಸುದ್ದಿ

ಪ್ರಧಾನಿ ಮೋದಿಯನ್ನು ಭೇಟಿಯಾದ ಕಟುಂಬ ಸಮೇತರಾಗಿ ಕ್ಯಾ. ಬ್ರಿಜೇಶ್ ಚೌಟ ; ತುಳುನಾಡಿನ ಹೆಮ್ಮೆ ಹುಲಿ ಕುಣಿತದ ‘ಪಿಲಿ ಮಂಡೆ’ ನೀಡಿ ಗೌರವ – ಕಹಳೆ ನ್ಯೂಸ್

ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಕಟುಂಬ ಸಮೇತರಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಪ್ರಸಾದ ಹಾಗೂ ತುಳುನಾಡಿನ ಹೆಮ್ಮೆ ಹುಲಿ ಕುಣಿತದ ‘ಪಿಲಿ ಮಂಡೆ’ ಯನ್ನು ಪ್ರಧಾನಿ ಮೋದಿಯವರಿಗೆ ನೀಡಿ ಗೌರವಿಸಿದ್ದಾರೆ....
ಅಂಕಣಬೆಂಗಳೂರುಸಿನಿಮಾಸುದ್ದಿ

ವೈದ್ಯೆಯಾಗಿ ಜನರ ಸೇವೆ ಮಾಡೋದ್ರಲ್ಲೂ ಸೈ, ನಟನೆಯಲ್ಲಿ ಎತ್ತಿದ ಕೈ ಡಾ. ರೂಪಶ್ರೀ ಗುರುನಾಥ್ ಮುನ್ನೋಳಿ..!! – ಕಹಳೆ ನ್ಯೂಸ್

ಆಕೆಗೆ ಚಿಕ್ಕ ವಯಸ್ಸಿನಲ್ಲೇ ವೈದ್ಯೆಯಾಗಬೇಕೆಂಬ ಕನಸು. ಕ್ಲಾಸ್‌ನಲ್ಲೂ ಟಾಪರ್ ಆಗಿದ್ದ ಈಕೆಗೆ ಸಂಗೀತದಲ್ಲೂ ಅಪಾರ ಆಸಕ್ತಿ. ಅಷ್ಟೇ ಅಲ್ಲ ದೊಡ್ಡ ಪರದೆಯಲ್ಲಿ ಬರುವುದು ಆಕೆಯ ಮತ್ತೊಂದು ಕನಸು. ಕೊನೆಗೂ ತನ್ನ ಕನಸನ್ನು ನನಸಾಗಿಸಿಕೊಂಡಿದ್ದಾರೆ ರೂಪಶ್ರೀ ಗುರುನಾಥ್ ಮುನ್ನೋಳಿ. ಹೌದು. ಮನಸ್ಸೊಂದಿದ್ದರೆ ಮಾರ್ಗ ಎಂಬಂತೆ ಕಂಡ ಕನಸಿಗಾಗಿ ಹಾತೊರೆದು ಕೊನೆಗೂ ಕನಸು ನನಸಾಗಿಸಕೊಂಡ ವೈದ್ಯೆಯ ಕಥೆಯಿದು. ಹುಟ್ಟಿದ್ದು, ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಪಶ್ಚಿಮ ಕಲ್ವಿಯಲ್ಲಿ. ಶಿಕ್ಷಕಿ ಗಿರಿಜಮ್ಮ ಹಾಗೂ...
ಕ್ರೀಡೆಬೆಂಗಳೂರುಸುದ್ದಿ

IPL 2025: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಆರ್ ಸಿಬಿ vs ಗುಜರಾತ್ ಟೈಟನ್ಸ್ ಸೆಣಸಾಟ..! – ಕಹಳೆ ನ್ಯೂಸ್

ಬೆಂಗಳೂರು: ಇಂದು ಸಂಜೆ ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2025 ಟೂರ್ನಿಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದೆ. ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್ ಸಿಬಿ, ಐಪಿಎಲ್ ನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಹೆಚ್ಚು ಬಾರಿ ಗೆದ್ದ ದಾಖಲೆಯನ್ನು ಹೊಂದಿದೆ. ಇಲ್ಲಿಯವರೆಗೂ ಉಭಯ ತಂಡಗಳು ಐದು ಬಾರಿ ಸ್ಪರ್ಧಿಸಿದ್ದು, ಈ ಪೈಕಿ ಮೂರು ಪಂದ್ಯಗಳಲ್ಲಿ ಆರ್ ಸಿಬಿ...
ಅಂಕಣಕಾಸರಗೋಡುದಕ್ಷಿಣ ಕನ್ನಡಬೆಂಗಳೂರುಸಿನಿಮಾಸುದ್ದಿ

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಪ್ರಕಾಶ್ ತೂಮಿನಾಡು ಈಗ ಕರುನಾಡೇ ಕೊಂಡಾಡುವ ಅದ್ಭುತ ಕಲಾವಿದ – ಕಹಳೆ ನ್ಯೂಸ್

ಅವರು ರಿಕ್ಷಾ ಡ್ರೈವರ್ ಆಗಿ ತಮ್ಮ ಜೀವನದ ರಥ ಸಾರಥಿಯನ್ನು ಸಾಗಿಸುತ್ತಿದ್ದವರು. ಜೊತೆಗೆ ಫ್ಲೈವುಡ್ ಫ್ಯಾಕ್ಟರಿಯಲ್ಲಿ, ಫರ್ನೀಚರ್ ಅಂಗಡಿಯಲ್ಲಿ ಹಾಗೂ ಗಾರೆ ಕೆಲಸ ಜೊತೆಗೆ ಸಾಕಷ್ಟು ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದವರು. ಆದ್ರೆ ಈಗ ಕರ್ನಾಟಕವೇ ಹೆಮ್ಮೆ ಪಡುವಂತಹ ಕೊಂಡಾಡುವಂತಹ ಖ್ಯಾತ ಕಲಾವಿದ. ಅವರೇ ಪ್ರಕಾಶ್ ತೂಮಿನಾಡು ಎಂಬ ಅದ್ಭುತ ಕಲಾವಿದ. ಹೌದು. ಪ್ರಕಾಶ್ ತೂಮಿನಾಡು ಅವರು ಕನ್ನಡ ಹಾಗೂ ತುಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಪ್ರಮುಖ ಪೋಷಕ ಹಾಗೂ...
1 153 154 155 156 157 347
Page 155 of 347