Saturday, April 25, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಉದ್ಯಮಿ ಅಪಹರಣ ಕೇಸ್‌ ; ಸಿಸಿಬಿಯಿಂದ ರೌಡಿ ಶೀಟರ್‌ ಯಶಸ್ವಿನಿ ಗೌಡ ಅರೆಸ್ಟ್‌ – ಕಹಳೆ ನ್ಯೂಸ್

ಬೆಂಗಳೂರು: ನಿರ್ದೇಶಕ ನಂದಕಿಶೋರ್‌ ಅವರಿಗೆ ಸಾಲ ನೀಡಿದ್ದ ಉದ್ಯಮಿಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಯಶಸ್ವಿನಿ ಗೌಡಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋದಿ ಆಸ್ಪತ್ರೆ ರಸ್ತೆಯಲ್ಲಿ ಸೆ.26ರಂದು ಸಂಜೆ 6: 30ರ ಸುಮಾರಿಗೆ ರಿಯಲ್‌ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಮನೋಜ್ ಅವರನ್ನು ರೌಡಿಗಳ ಗುಂಪು ಅಪಹರಿಸಿತ್ತು. ಈ ಪ್ರಕರಣದಲ್ಲಿ ಬೇಕರಿ ರಘು, ರಾಜೇಶ್, ವೆಂಕಟೇಶ್ ಸೇರಿದಂತೆ ಹಲವರನ್ನು ಬಂಧನ ಮಾಡಲಾಗಿತ್ತು. ಮಂಡ್ಯದಲ್ಲಿ ಬೇಕರಿ ರಘು...
ಬೆಂಗಳೂರುರಾಜ್ಯಸುದ್ದಿ

ನೆಲಮಂಗಲದಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌ : ತಪ್ಪಿದ ಭಾರೀ ಅನಾಹುತ- ಕಹಳೆ ನ್ಯೂಸ್

ನೆಲಮಂಗಲ: ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಖಾಸಗಿ ಬಸ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ (Bus Fire) ಆಹುತಿಯಾಗಿರುವ ಘಟನೆ ನಡೆದಿದೆ. ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ  ಹನುಮಂತಪುರ ಗೇಟ್ ಬಳಿ ಸಂಜನಾ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್‌ ಹೊತ್ತಿ ಉರಿದಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ನೆಲಮಂಗಲ ಸಂಚಾರ ಪೊಲೀಸರು  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೆಲ...
ಅಂತಾರಾಷ್ಟ್ರೀಯರಾಷ್ಟ್ರೀಯವಾಣಿಜ್ಯಸುದ್ದಿ

ಕಚ್ಚಾತೈಲ ಖರೀದಿಯಲ್ಲಿ ಭಾರತ ಸಂಪೂರ್ಣ ಸ್ವತಂತ್ರ : ರಷ್ಯಾ ಸ್ಪಷ್ಟನೆ – ಕಹಳೆ ನ್ಯೂಸ್

ಭಾರತವು ಯಾವುದೇ ದೇಶದಿಂದ ಕಚ್ಚಾತೈಲವನ್ನು ಖರೀದಿಸಲು ಸಂಪೂರ್ಣವಾಗಿ ಸ್ವತಂತ್ರವಾಗಿದೆ ಎಂದು ರಷ್ಯಾ ಸ್ಪಷ್ಟಪಡಿಸಿದೆ. ರಷ್ಯಾ ಎಂದಿಗೂ ಭಾರತದ ಏಕೈಕ ಇಂಧನ ಪಾಲುದಾರನಾಗಿರಲಿಲ್ಲ ಮತ್ತು ತೈಲ ಖರೀದಿಯ ಮೂಲಗಳಲ್ಲಿ ಬದಲಾವಣೆ ಆಗುವುದು ಅಸಾಮಾನ್ಯವಲ್ಲ ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಪೆಸ್ಕೋವ್, “ಇತರ ಎಲ್ಲಾ ಅಂತಾರಾಷ್ಟ್ರೀಯ ಇಂಧನ ತಜ್ಞರಂತೆ ನಮಗೂ ತಿಳಿದಿದೆ- ಭಾರತಕ್ಕೆ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳನ್ನು ಪೂರೈಸುವ ಏಕೈಕ ದೇಶ ರಷ್ಯಾ ಅಲ್ಲ....
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ – ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಸದ್ದು ಮಾಡುತ್ತಿದೆ. ಹಲಸೂರು ಬಳಿ ಇರುವ ಇಟಲಿ ರಾಯಭಾರಿ ಕಚೇರಿಗೆ ಇ-ಮೇಲ್ ಮೂಲಕ ಕಿಡಿಗೇಡಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಜನವರಿ 30ರಂದು ಬಂದಿದ್ದ ಬೆದರಿಕೆ ಮೇಲ್ ತಡವಾಗಿ ಬೆಳಕಿಗೆ ಬಂದಿದೆ. 5 ಆರ್‌ಡಿಎಕ್ಸ್ ಬಾಂಬ್ ಬ್ಲಾಸ್ಟ್ ಮಾಡುತ್ತೇವೆ ಎಂದು ಇ-ಮೇಲ್ ಮೂಲಕ ಬೆದರಿಕೆ ಒಡ್ಡಿದ್ದಾರೆ. ಇಟಾಲಿಯನ್ ಕಾನ್ಸುಲೇಟ್‌ನ ಸೆಕ್ಯೂರಿಟಿ ಮ್ಯಾನೇಜರ್ ಜಿಯೋಡೊಮೆನಿಕ್ ಒ ಮಿಲಾನೋ ಎಂಬವರು ಹಲಸೂರು ಪೊಲೀಸರಿಗೆ...
ಬೆಂಗಳೂರುರಾಜ್ಯಸುದ್ದಿ

ಫೆ.9 ರಿಂದ ಮೆಟ್ರೋ ಪ್ರಯಾಣ ದರ 5% ಏರಿಕೆ – ಕಹಳೆ ನ್ಯೂಸ್

ಬೆಂಗಳೂರು: ಮತ್ತೆ ನಮ್ಮ ಮೆಟ್ರೋ ಪ್ರಯಾಣ ದರ ದುಬಾರಿಯಾಗಲಿದೆ. ಒಂದು ವರ್ಷದ ಹಿಂದಷ್ಟೇ ಪ್ರಯಾಣ ದರವನ್ನು 71.5% ರಷ್ಟು ಹೆಚ್ಚಳ ಮಾಡಿದ್ದ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್‌ ಲಿಮಿಟೆಡ್‌ (BMRCL) ಈಗ 5% ಹೆಚ್ಚಳ ಮಾಡಲು ನಿರ್ಧರಿಸಿದೆ. ಬಿಎಂಆರ್‌ಸಿಎಲ್‌ ಪ್ರತಿ ವರ್ಷ 5% ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬಹುದು ಎಂದು ದರ ನಿಗದಿ ಸಮಿತಿ (FFC) 2025ರಲ್ಲಿ ಶಿಫಾರಸು ಮಾಡಿತ್ತು. ಈ ಬಗ್ಗೆ ಎರಡು ದಿನಗಳ ಹಿಂದೆ ನಡೆದ...
ಜಿಲ್ಲೆದೆಹಲಿರಾಜ್ಯಸುದ್ದಿ

ಬೆಂಗಳೂರು ಮತ್ತು ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್‌ಗೆ ಕೇಂದ್ರದಿಂದ ಸಕರಾತ್ಮಕ ಸ್ಪಂದನೆ – ಕಹಳೆ ನ್ಯೂಸ್

ನವದೆಹಲಿ: ಇತ್ತಿಚೀನ ಕೇಂದ್ರ ಬಜೆಟ್‌ನಲ್ಲಿ ದೇಶದಲ್ಲಿ ಒಟ್ಟು ಏಳು ಹೈಸ್ಪೀಡ್ ರೈಲು ಕಾರಿಡಾರ್ ಅನ್ನು ಕೇಂದ್ರ ಸರ್ಕಾರ ಘೋಷಿಸಿತ್ತು. ಇದರ ಬೆನ್ನಲ್ಲೇ ಬೆಂಗಳೂರು ಮತ್ತು ಪುಣೆ ನಡುವೆ ಮತ್ತೊಂದು ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ. ಸಂಸತ್ ಭವನದಲ್ಲಿ ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜೋಶಿ ಅವರು, ಬೆಂಗಳೂರು-ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್...
ಬೆಂಗಳೂರುಸುದ್ದಿ

ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ಹಗರಣ ನಡೆದಿದೆ – ವಿಜಯೇಂದ್ರ, ಆರ್‌. ಅಶೋಕ್‌ ಬಾಂಬ್‌ – ಕಹಳೆ ನ್ಯೂಸ್

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಬರೋಬ್ಬರಿ 6 ಸಾವಿರ ಕೋಟಿ ಹಗರಣ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್‌. ಅಶೋಕ್‌  ಆರೋಪಿಸಿದರು. ವಿಧಾನಸೌಧದ ಕೆಂಗಲ್‌ ಗೇಟ್‌ ಬಳಿ ಮಾತನಾಡಿದ ಶಾಸಕ ವಿಜಯೇಂದ್ರ, ಸಿದ್ದರಾಮಯ್ಯ ಸರ್ಕಾರ ಬಹಳ ಬಂಡತನದಿಂದ ನಡೆದುಕೊಳ್ಳುತ್ತಿದೆ. ಹಗರಣಗಳ ಅಲೆಯಲ್ಲಿ ಸಿಲುಕಿಕೊಂಡಿದೆ. ಅಬಕಾರಿ ಇಲಾಖೆವರೆಗೂ (Excise Department) ಬಂದು ತಲುಪಿದೆ. ಮನಸೋ ಇಚ್ಛೆ ಬೇಕಾಬಿಟ್ಟಿ ಲಿಕ್ಕರ್ ಲೆಸೆನ್ಸ್ ಕೊಡ್ತಾ ಇದ್ದಾರೆ. ಇಷ್ಟು ಭ್ರಷ್ಟಾಚಾರ...
ಬೆಂಗಳೂರುರಾಜ್ಯಸುದ್ದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಪಂಚಾಕ್ಷರಿ ಲೈಟಿಂಗ್ಸ್ ಮಾಲಕ ಗಣೇಶ್ ಗೌಡ ನಿಧನ -ಕಹಳೆ ನ್ಯೂಸ್

ಪುತ್ತೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪಂಚಾಕ್ಷರಿ ಲೈಟಿಂಗ್ಸ್ ಮಾಲಕ, ಯುವ ಉದ್ಯಮಿ ಗಣೇಶ್ ಗೌಡ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ....
1 14 15 16 17 18 329
Page 16 of 329