Wednesday, March 18, 2026

ರಾಷ್ಟ್ರೀಯ

ರಾಷ್ಟ್ರೀಯಸುದ್ದಿ

ಮಗುವಿಗೆ ಜನ್ಮ ನೀಡಿದ ತೃತೀಯಲಿಂಗಿ ದಂಪತಿಗೆ ಎದುರಾಯ್ತು ಮೊದಲ ಅಡ್ಡಿ! ಕಾನೂನು ಹೋರಾಟಕ್ಕೂ ಸೈ ಎಂದ ಜಹಾದ್ ಫಾಜಿಲ್ – ಕಹಳೆ ನ್ಯೂಸ್

ಕೊಚ್ಚಿ: ಸಾಕಷ್ಟು ಅಡಚಣೆಗಳನ್ನು ಮೆಟ್ಟಿನಿಂತು ಮೊನ್ನೆಯಷ್ಟೇ (ಫೆ.8) ಮಗುವಿಗೆ ಜನ್ಮ ನೀಡಿದ ಕೇರಳ ಮೂಲದ ತೃತೀಯಲಿಂಗಿ ದಂಪತಿಗೆ ಮತ್ತೊಂದು ಅಡ್ಡಿ ಮತ್ತು ಗೊಂದಲ ಎದುರಾಗಿದೆ. ಅದೇನೆಂದರೆ, ಸರ್ಕಾರಿ ದಾಖಲೆಗಳಲ್ಲಿ ಮಗುವಿನ ತಂದೆ ಮತ್ತು ತಾಯಿ ಯಾರಾಗಬೇಕು ಎಂಬುದು. ಇಂದು ಜಿಯಾ ಪೊವೆಲ್, ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಕಾಲೇಜಿನ ತಾಯಿ ಮತ್ತು ಮಕ್ಕಳ ಆರೋಗ್ಯ ಸಂಸ್ಥೆಯ ಅಧೀಕ್ಷಕರಿಗೆ ಅರ್ಜಿ ಸಲ್ಲಿಸಲಿದ್ದು, ಮಗುವಿಗೆ ಜನ್ಮ ನೀಡಿದ ಜಹಾದ್ ಫಾಜಿಲ್​ ಅವರನ್ನು ತಂದೆಯನ್ನಾಗಿ...
ಬೆಂಗಳೂರುರಾಜ್ಯಸುದ್ದಿ

ಮೂರು ದಿನಗಳ ಭಾರತ ಇಂಧನ ಸಪ್ತಾಹಕ್ಕೆ ಚಾಲನೆ – ಗ್ರೀನ್ ಮೊಬಿಲಿಟಿ ರ‍್ಯಾಲಿಗೆ ಹಸಿರು ನಿಶಾನೆ ; ವಿಶ್ವದಲ್ಲಿ ಭಾರತ ಮುಂಚೂಣಿಯಲ್ಲಿರುವ ಮತ್ತೊಂದು ಕ್ಷೇತ್ರವೆಂದರೆ ಗ್ರೀನ್​ ಹೈಡ್ರೋಜನ್ : ಪ್ರಧಾನಿ ಮೋದಿ ಭಾಷಣ – ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಗ್ರೀನ್ ಮೊಬಿಲಿಟಿ ರ‍್ಯಾಲಿಗೆ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಈ ರ‍್ಯಾಲಿಯ ಮೂಲಕ ಹಸಿರು ಇಂಧನಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಉದ್ಧೇಶಿಸಲಾಗುತ್ತಿದೆ. ಹೀಗಾಗಿ ಗ್ರೀನ್ ಮೊಬಿಲಿಟಿ ರ‍್ಯಾಲಿಯಲ್ಲಿ ಹಸಿರು ಇಂಧನ ಬಳಸಿಕೊಂಡು ಸಂಚರಿಸುವ ವಾಹನಗಳು ಭಾಗವಹಿಸುತ್ತಿವೆ. ರ‍್ಯಾಲಿಯು 42 ಕಿ.ಮೀ ಸಂಚರಿಸಲಿದ್ದು, ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಿಂದ ಆರಂಭವಾಗಿ ಮಾದಾವರ ನೀಲಕಂಠ ಪಾರ್ಕಿಂಗ್ ಮೈದಾನದಲ್ಲಿ ಮುಕ್ತಾಯವಾಗಲಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಮೂರು ದಿನಗಳ...
ಬೆಂಗಳೂರುರಾಜ್ಯಸುದ್ದಿ

ಪತ್ರಕರ್ತರ ರಾಜ್ಯ ಮಟ್ಟದ 37ನೇ ಸಮ್ಮೇಳನ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ ; ಬೇಡಿಕೆಗಳಿಗೆ ಬಜೆಟ್​ನಲ್ಲಿ ಅನುಮೋದನೆ – ಕಹಳೆ ನ್ಯೂಸ್

ವಿಜಯಪುರ: ಪತ್ರಿಕೋದ್ಯಮದ ಹರಿಕಾರ ಖ್ಯಾತಿಯ ಮೊಹರೆ ಹನುಮಂತರಾಯರ ತವರಿನಲ್ಲಿ ಪ್ರಪ್ರಥಮ ಬಾರಿಗೆ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡಿರುವ ಎರಡು ದಿನಗಳ ಪತ್ರಕರ್ತರ 37 ನೇ ರಾಜ್ಯಮಟ್ಟದ ಸಮ್ಮೇಳನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ವಿದ್ಯುಕ್ತ ಚಾಲನೆ ನೀಡಿದರು. ಇಲ್ಲಿನ ಕಂದಗಲ್ಲ ಹನುಮಂತರಾಯ ರಂಗಮಂದಿರದ ಮೊಹರೆ ಹನುಮಂತರಾಯ ವೇದಿಕೆಯಲ್ಲಿ ಶನಿವಾರ ಆಯೋಜಿಸಿದ್ದ ಸಮ್ಮೇಳನವನ್ನು ಸಿಎಂ ಬೊಮ್ಮಾಯಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶತಮಾನದ ಸಂತ ಪರಮ ಪೂಜ್ಯ ಲಿಂ. ಸಿದ್ಧೇಶ್ವರ ಶ್ರೀ ಹಾಗೂ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿನ ತ್ಯಾಜ್ಯ ನಿರ್ವಹಣೆ ಸಮಸ್ಯೆ ಪರಿಹಾರಕ್ಕೆ ‘ಸ್ವಚ್ಛ ಮಂದಿರ ಅಭಿಯಾನ’ : ಫೆ.10ರಂದು ಉದ್ಘಾಟನೆ – ರೋಹಿಣಿ ಸಿಂಧೂರಿ- ಕಹಳೆ ನ್ಯೂಸ್

ಬೆಂಗಳೂರು: ಭಕ್ತಾದಿಗಳಿಗೆ ದೇವಾಲಯಗಳಲ್ಲಿ ನೈರ್ಮಲ್ಯದ ವಾತಾವರಣ ಮತ್ತು ಸ್ವಚ್ಚ ಪರಿಸರವನ್ನು ನೀಡುವ ಉದ್ದೇಶವನ್ನು ಹೊಂದಿರುವ ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಮಂದಿರ ಅಭಿಯಾನ ಉದ್ಘಾಟನೆಗೆ ಸಿದ್ದವಾಗಿದೆ. ಫೆ. 10 ರಂದು ನಿಮಿಷಾಂಭ ದೇವಸ್ಥಾನದಿಂದ ಉದ್ಘಾಟನೆ ಮಾಡಲಾಗುವುದು ಎಂದು ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ನೀಡಿರುವ...
ಬೆಂಗಳೂರುರಾಜಕೀಯರಾಜ್ಯ

ಚುನಾವಣಾ ಸಿದ್ಧತೆ : ಇಂದು ಸಂಜೆ 6 ಗಂಟೆಗೆ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಉಪಸ್ಥಿತಿಯಲ್ಲಿ ಬಿಜೆಪಿ ಮಹತ್ವದ ಕೋರ್‌ ಕಮಿಟಿ ಸಭೆ – ಕಹಳೆ ನ್ಯೂಸ್

ಬೆಂಗಳೂರು: ಚುನಾವಣಾ ಸಿದ್ಧತೆ ದೃಷ್ಟಿಯಿಂದ ಬಿಜೆಪಿಯ ಮಹತ್ವದ ಕೋರ್‌ ಕಮಿಟಿ ಸಭೆ ಶುಕ್ರವಾರ ನಡೆಯಲಿದ್ದು, ತಂತ್ರಗಾರಿಕೆ ದೃಷ್ಟಿಯಿಂದ ನಡೆಯುವ ರಾಜ್ಯಮಟ್ಟದ ಮೊದಲ ಉನ್ನತ ಹಂತದ ಸಭೆ ಇದಾಗಲಿದೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ 6 ಗಂಟೆಗೆ ಸಭೆ ಪ್ರಾರಂಭವಾಗಲಿದ್ದು, ಐದು ಪ್ರಮುಖ ವಿಚಾರಗಳ ಬಗ್ಗೆ ನಿರ್ಧಾರ ಪ್ರಕಟವಾಗಲಿದೆ. ಚುನಾವಣೆ ಸಿದ್ಧತೆ, ರಾಜ್ಯದ ನಾಲ್ಕು ದಿಕ್ಕುಗಳಿಂದ ನಡೆಯುವ ರಥಯಾತ್ರೆಯ ದಿನಾಂಕ, ಪಕ್ಷ ಹಾಗೂ ಸರ್ಕಾರದ ಮಟ್ಟದ ಸಮನ್ವಯತೆ, ಬಜೆಟ್‌ನಲ್ಲಿ ಇರಬೇಕಾದ ಪಕ್ಷದ...
ಕಾಸರಗೋಡುದಕ್ಷಿಣ ಕನ್ನಡಬೆಂಗಳೂರುಸುದ್ದಿ

ಕಾಸರಗೋಡು ಕನ್ನಡದ ಅಸ್ಮಿತೆಯ ಸಂಕೇತವಾಗಿರುವ ಎಡನೀರು ಮಠಕ್ಕೆ ರಾಜ್ಯ ಸರಕಾರದ ಪ್ರತಿಷ್ಠಿತ ಗಡಿನಾಡ ಚೇತನ ಪ್ರಶಸ್ತಿ ; ಬೆಂಗಳೂರಿನ ಗಾಂಧಿಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈ ಅವರ ಹೆಸರಲ್ಲಿ ಕೊಡಮಾಡುವ ಗಡಿನಾಡ ಚೇತನ ಪ್ರಶಸ್ತಿ ಈ ಬಾರಿ ಕಾಸರಗೋಡು ಎಡನೀರು ಮಠಕ್ಕೆ ಲಭಿಸಿದೆ. ಶ್ರೀ ಎಡನೀರು ಮಠವು ಧಾರ್ಮಿಕ ಪೀಠವಾದರೂ ಗಡಿನಾಡಿನಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಕನ್ನಡಪರ ಹೋರಾಟಗಳಲ್ಲಿ ನಿರತವಾಗಿರುವ ಸಾಂಸ್ಕೃತಿಕ ಪೀಠವಾಗಿದೆ. ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರವು ಗುರುವಾರ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ 2022-23ನೇ ಸಾಲಿನ 'ಗಡಿನಾಡ ಚೇತನ' ಪ್ರಶಸ್ತಿ ವಿತರಿಸಿ...
ರಾಷ್ಟ್ರೀಯಸುದ್ದಿ

ಭಾರತವನ್ನು ಜ್ಞಾನಿಗಳ ದೇಶವನ್ನಾಗಿ ಮಾಡಿ: ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್ – ಕಹಳೆ ನ್ಯೂಸ್

ಜೈಪುರ: ಭಾರತವನ್ನು ಜ್ಞಾನವುಳ್ಳ ಜನರ ದೇಶವನ್ನಾಗಿ ಮಾಡಲು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಕರೆ ನೀಡಿದ್ದಾರೆ. ಜೈಪುರ ಸಮೀಪದ ಜಾಮ್ಡೋಲಿಯ ಕೇಶವ ವಿಧಾಯಪೀಠದಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಭಾಗವತ್, ರಾಷ್ಟ್ರಧ್ವಜದಲ್ಲಿ ಮೂರು ಬಣ್ಣಗಳ ಮಹತ್ವವನ್ನು ವಿವರಿಸಿದರು ಮತ್ತು ಜನರು ಮುಂದೆ ಸಾಗಲು ಸಂಕಲ್ಪವನ್ನು ತೆಗೆದುಕೊಂಡು ಅದನ್ನು ಪೂರೈಸಲು ಪ್ರಯತ್ನಿಸಬೇಕು ಎಂದರು. “ನಾವು ನಮ್ಮ ಸಾರ್ವಭೌಮತ್ವದ ಸಂಕೇತವಾದ ತ್ರಿವರ್ಣ ಧ್ವಜವನ್ನು ಉತ್ಸಾಹ, ಸಂತೋಷ ಮತ್ತು ಹೆಮ್ಮೆಯಿಂದ ಹಾರಿಸುತ್ತೇವೆ. ನಮ್ಮ ಗಮ್ಯಸ್ಥಾನವು...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಅವಳಿ ಮಕ್ಕಳೊಂದಿಗೆ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ ಅಮೂಲ್ಯ ಜಗದೀಶ್ – ಕಹಳೆ ನ್ಯೂಸ್

ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಅವರು ಅವಳಿ ಮಕ್ಕಳೊಂದಿಗೆ ರಾಜ್ಯದ ಜನತೆಗೆ 74ನೇ ವರ್ಷದ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.  ಅಮೂಲ್ಯ ಮತ್ತು ಇಬ್ಬರು ಮಕ್ಕಳು ವೈಟ್ ಡ್ರೆಸ್ ಹಾಕಿಕೊಂಡಿದ್ದಾರೆ. ಇಬ್ಬರನ್ನು ಕಾಲ ಮೇಲೆ ಕೂರಿಸಿಕೊಂಡು ಅಮೂಲ್ಯ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ನಟಿ ಅಮೂಲ್ಯ ಅವರು ಜಗದೀಶ್ ಅವರನ್ನು ಮದುವೆ ಆದ ನಂತರ ಸಿನಿಮಾ ರಂಗದಿಂದ ದೂರ ಉಳಿದಿದ್ದಾರೆ. ಈಗ ಅವಳಿ ಮಕ್ಕಳ ಲಾಲನೆ ಪಾಲನೆಯಲ್ಲಿ ಬ್ಯುಸಿ ಆಗಿದ್ದಾರೆ. ನಟಿ ಅಮೂಲ್ಯ ಮತ್ತು...
1 231 232 233 234 235 320
Page 233 of 320