ಮಥುರಾ ಶ್ರೀಕೃಷ್ಣ ಜನ್ಮಸ್ಥಾನ ದೇಗುಲದ ಜಾಗವನ್ನು ಅತಿಕ್ರಮಿಸಿಕೊಂಡು ಮಸೀದಿ ನಿರ್ಮಾಣ ಮಾಡಿದ್ದ ಶಾಹಿ ಈದ್ಗಾ ಮಸೀದಿಯೊಳಗೆ ಸರ್ವೆಗೆ ಕೋರ್ಟ್ ಆದೇಶ ; ಜ.2ರಂದು ಸಮೀಕ್ಷೆ ಆರಂಭ – ಕಹಳೆ ನ್ಯೂಸ್
ನವದೆಹಲಿ: ಹಿಂದುಗಳ ಶ್ರದ್ಧಾ ಕೇಂದ್ರ ಉತ್ತರ ಪ್ರದೇಶದ ಮಥುರಾದಲ್ಲಿ ಶ್ರೀಕೃಷ್ಣ ಜನ್ಮಸ್ಥಾನ ದೇಗುಲದ ಜಾಗವನ್ನು ಒತ್ತುವರಿ ಮಾಡಿ ನಿರ್ವಿುಸಲಾಗಿದೆ ಎನ್ನಲಾದ ಶಾಹಿ ಈದ್ಗಾ ಮಸೀದಿಯೊಳಗೆ ಸಮೀಕ್ಷೆ ನಡೆಸಲು ಮಥುರಾ ಸ್ಥಳೀಯ ನ್ಯಾಯಾಲಯ ಶನಿವಾರ ಮಹತ್ವದ ಆದೇಶ ನೀಡಿದೆ. ರಾಜ್ಯದ ವಾರಾಣಸಿಯಲ್ಲಿ ಕಾಶಿ ವಿಶ್ವನಾಥ ದೇಗುಲಕ್ಕೆ ಹೊಂದಿಕೊಂಡಿರುವ ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಅಲ್ಲಿನ ಸ್ಥಳೀಯ ಕೋರ್ಟ್ ಆದೇಶ ನೀಡಿದ್ದ ಕೆಲ ತಿಂಗಳುಗಳ ಬಳಿಕ ಮಥುರಾ ನ್ಯಾಯಾಲಯದಿಂದ ಈ ಆದೇಶ ಬಂದಿದೆ. ಶ್ರೀಕೃಷ್ಣ...







