Thursday, March 12, 2026

ರಾಷ್ಟ್ರೀಯ

ಅಂಕಣದೆಹಲಿಸುದ್ದಿ

ಭಾರತದಲ್ಲಿ ಖರೀದಿಸುವ ಎಲ್ಲಾ ಫೋನ್‌ಗಳಿಗೆ ‘ಸಂಚಾರ್ ಸಾಥಿ’ ಕಡ್ಡಾಯ-ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ಮಾರಾಟವಾಗುವ ಎಲ್ಲಾ ಹೊಸ ಮೊಬೈಲ್ ಫೋನ್‌ಗಳಲ್ಲಿ ಸಂಚಾರ್ ಸಾಥಿ ಆಪ್‌  ಕಡ್ಡಾಯವಾಗಿ ಇರಬೇಕೆಂದು ದೂರಸಂಪರ್ಕ ಇಲಾಖೆ ಹ್ಯಾಂಡ್‌ಸೆಟ್‌ ತಯಾರಕರಿಗೆ ಸೂಚಿಸಿದೆ. ಆ್ಯಪ್ ಇನ್‌ಸ್ಟಾಲ್ ಮಾಡಲು 90 ದಿನಗಳ ಗಡುವು ನೀಡಲಾಗಿದ್ದು ಅದನ್ನು ಅನ್‌ ಇನ್‌ಸ್ಟಾಲ್ ಮಾಡಲು ಆಯ್ಕೆ ನೀಡಬಾರದು. ಈಗಾಗಲೇ ಬಳಕೆಯಲ್ಲಿರುವ ಮೊಬೈಲ್‌ಗಳಿಗೆ ಸಾಫ್ಟ್‌ವೇರ್ ಅಪ್‌ಡೇಟ್‌ ನೀಡುವಾಗ ಈ ಆ್ಯಪ್ ಲಭ್ಯವಾಗುವಂತೆ ಮಾಡಬೇಕು ಎಂದು ಕೇಂದ್ರ ಸೂಚನೆ ನೀಡಿದೆ. ನವೆಂಬರ್ 28, 2025 ರಂದು ಹೊರಡಿಸಲಾದ ಆದೇಶದ ಪ್ರಕಾರ,...
ಮುಂಬೈರಾಜ್ಯಹೆಚ್ಚಿನ ಸುದ್ದಿ

ಬಾಂಬ್ ಬೆದರಿಕೆ: ಮುಂಬೈಯಲ್ಲಿ ಇಂಡಿಗೊ ವಿಮಾನ ತುರ್ತು ಭೂಸ್ಪರ್ಶ – ಕಹಳೆ ನ್ಯೂಸ್

ಮುಂಬೈ: ಹೈದರಾಬಾದ್‌ನಿಂದ ಕುವೈತ್‌ಗೆ ತೆರಳುತ್ತಿದ್ದ ಇಂಡಿಗೊ ವಿಮಾನಕ್ಕೆ ಮಂಗಳವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆ ವಿಮಾನ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನವನ್ನು ಮುಂಬೈನಲ್ಲಿ ಸುರಕ್ಷಿತವಾಗಿ ಕೆಳಕ್ಕಿಳಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಸಿಬ್ಬಂದಿ ಭದ್ರತಾ ತಪಾಸಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಚೆಗೆ ಬಹರೇನ್‌ನಿಂದ ಹೈದರಾಬಾದ್‌ಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್‌ ಇರಿಸಲಾಗಿದೆ ಎಂದು ರಾಜೀವ್‌ ಗಾಂಧಿ ಅಂತರರಾಷ್ಟ್ರೀಯ ವಿಮಾನ...
ದೆಹಲಿಸುದ್ದಿ

ಮೊಬೈಲ್ ನಲ್ಲಿ `ಸಿಮ್’ ಇಲ್ಲದಿದ್ದರೆ `ವಾಟ್ಸಪ್’ ನಿಷೇಧ : ಕೇಂದ್ರ ಸರ್ಕಾರ ಆದೇಶ.! – ಕಹಳೆ ನ್ಯೂಸ್

ನವದೆಹಲಿ : ವಾಟ್ಸಾಪ್, ಟೆಲಿಗ್ರಾಮ್, ಸಿಗ್ನಲ್, ಸ್ನ್ಯಾಪ್ಚಾಟ್, ಶೇರ್ಚಾಟ್, ಜಿಯೋಚಾಟ್, ಅರಟ್ಟೈ ಮತ್ತು ಜೋಶ್ ನಂತಹ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ಗಳನ್ನು ಲಕ್ಷಾಂತರ ಜನರು ಹೇಗೆ ಬಳಸುತ್ತಾರೆ ಎಂಬುದನ್ನು ಬದಲಾಯಿಸುವ ಪ್ರಮುಖ ನಿರ್ದೇಶನವನ್ನು ಭಾರತ ಸರ್ಕಾರ ಹೊರಡಿಸಿದೆ. ಹೌದು, ದೇಶದಲ್ಲಿ ಇನ್ನು ಮುಂದೆ ಸಿಮ್ ಕಾರ್ಡ್ ಇಲ್ಲದೇ ವಾಟ್ಸಪ್ ಬಳಕೆ ಅಸಾಧ್ಯ. ಕೇಂದ್ರ ಸರ್ಕಾರ ಸೈಬರ್ ಭದ್ರತಾ ಕಾರ್ಯಚೌಕಟ್ಟನ್ನು ಬಿಗಿಗೊಳಿಸುತ್ತಿದ್ದು ಅವುಗಳ ನಿಯಮ ಈಗ ವಾಟ್ಸಪ್ ಮತ್ತು ಇತರ ಮೆಸೆಜಿಂಗ್ ಅಪ್ಲಿಕೇಶನ್‌ಗಳಿಗೂ...
ಬೆಂಗಳೂರುರಾಜ್ಯಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಚಾರ್ಲಿ’ ಚಿತ್ರದ ನಿರ್ದೇಶಕ ಕಿರಣ್ ರಾಜ್.! – ಕಹಳೆ ನ್ಯೂಸ್

ಬೆಂಗಳೂರು : 'ಚಾರ್ಲಿ' ಚಿತ್ರದ ನಿರ್ದೇಶಕ ಕಿರಣ್ ರಾಜ್ ಭಾನುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಿರಣ್ ರಾಜ್ ಅವರು ಕಾಸರಗೋಡಿನ ನಾರಂಪಾಡಿ ದೇವಾಲಯದಲ್ಲಿ ಅನಯಾ ವಸುಧಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಾಸರಗೋಡು ಮೂಲದ ಕಿರಣ್ ರಾಜ್ ಹಾಗೂ ಅನಯಾ ವಸುಧಾ ಕಳೆದ ಜನವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಭಾನುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಕ್ಷಿತ್ ಶೆಟ್ಟಿ ಕೂಡ ಹೊಸ ಜೋಡಿಗೆ ಶುಭ ಹಾರೈಸಿದ್ದಾರೆ. ಕಿರಣ್ ರಾಜ್ ನಿರ್ದೇಶನದ ಚಾರ್ಲಿ ಸಿನಿಮಾ...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಮದ್ಯ ಪ್ರಿಯರಿಗೆ ಗುಡ್‌ನ್ಯೂಸ್: ಬಾರ್‌ಗಳಲ್ಲಿ ದುಬಾರಿ ಮದ್ಯ ಮಾರಾಟಕ್ಕೆ ಬ್ರೇಕ್.! – ಕಹಳೆ ನ್ಯೂಸ್

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಕಳೆದ ಎರಡೂವರೆ ವರ್ಷದ ಅವಧಿಯಲ್ಲಿ ಮದ್ಯದ ಬೆಲೆಯು ಭರ್ಜರಿ ಹೆಚ್ಚಳವಾಗಿದೆ. ಇದರಿಂದ ಮದ್ಯ ಪ್ರಿಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಈ ವಿಚಾರದಲ್ಲಿ ಪರಿಹಾರ ಕಂಡುಕೊಳ್ಳುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಮದ್ಯ ಪ್ರಿಯರಿಗೆ ಒಂದು ಕಡೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದರೆ ಮತ್ತೊಂದು ಕಡೆ ಮದ್ಯದಂಗಡಿಗಳಲ್ಲಿ ಗರಿಷ್ಠ ಚಿಲ್ಲರೆ ಬೆಲೆಯ (ಎಂಆರ್‌ಪಿ) ನಿಯಮ ಉಲ್ಲಂಘನೆ ಸಹ ನಡೆದಿತ್ತು. ಇದೀಗ ಇದಕ್ಕೆ ಬ್ರೇಕ್ ಹಾಕುವುದಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ....
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಇಳಿಕೆ! ಮನೆ ಗ್ಯಾಸ್ ಬೆಲೆ ಎಷ್ಟಿದೆ ಗೊತ್ತಾ..? – ಕಹಳೆ ನ್ಯೂಸ್

ಡಿಸೆಂಬರ್ ತಿಂಗಳು ಆರಂಭವಾಗುತ್ತಿದ್ದಂತೆಯೇ ತೈಲ ಮಾರಾಟ ಕಂಪನಿಗಳು ಸಾರ್ವಜನಿಕರಿಗೆ ಹೊಸ ದರಗಳನ್ನು ಪ್ರಕಟಿಸಿದೆ. ಈ ಬಾರಿ ಗೃಹಬಳಕೆ ಸಿಲಿಂಡರ್‌ಗೆ ಬದಲಾವಣೆ ಮಾಡದೇ, ಕೇವಲ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ದರವನ್ನು ಮಾತ್ರ ಕಡಿತ ಮಾಡಲಾಗಿದೆ. ಹೊಸ ದರಗಳು ಡಿಸೆಂಬರ್ 1ರಿಂದ ಜಾರಿಯಲ್ಲಿವೆ. ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ದರದಲ್ಲಿ ರೂ.10 ಇಳಿಕೆ: ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಬೇಕರಿಗಳು ಮತ್ತು ಸಣ್ಣ ವ್ಯಾಪಾರಸ್ಥರು ಬಳಸುವ 19 ಕೆ.ಜಿ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ರೂ.10...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ತಂಬಾಕಿನ ಮೇಲೆ ಅಬಕಾರಿ ಸುಂಕ ವಿಧಿಸುವ 2 ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಿದ ನಿರ್ಮಲಾ ಸೀತಾರಾಮನ್ -ಕಹಳೆ ನ್ಯೂಸ್

ನವದೆಹಲಿ: ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಮೇಲೆ ಅಬಕಾರಿ ಸುಂಕವನ್ನು ವಿಧಿಸಲು ಮತ್ತು ಪಾನ್ ಮಸಾಲಾ ತಯಾರಿಕೆಯ ಮೇಲೆ ಹೊಸ ಸೆಸ್ ವಿಧಿಸುವ ಎರಡು ಮಸೂದೆಗಳನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಲೋಕಸಭೆಯಲ್ಲಿ ಮಂಡಿಸಿದರು. ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ, 2025, ಪ್ರಸ್ತುತ ಸಿಗರೇಟ್, ಜಗಿಯುವ ತಂಬಾಕು, ಸಿಗಾರ್, ಹುಕ್ಕಾಗಳು, ಜರ್ದಾ ಮತ್ತು ಪರಿಮಳಯುಕ್ತ ತಂಬಾಕುಗಳಂತಹ ಎಲ್ಲಾ ತಂಬಾಕು ಉತ್ಪನ್ನಗಳ ಮೇಲೆ ವಿಧಿಸಲಾಗುತ್ತಿರುವ ಜಿಎಸ್ಟಿ ಪರಿಹಾರ ಸೆಸ್ ಅನ್ನು...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಜನಸಾಮಾನ್ಯರಿಗೆ ಬಿಗ್ ಶಾಕ್ : ಮಾರುಕಟ್ಟೆಯಲ್ಲಿ ಸೊಪ್ಪು, ತರಕಾರಿಗಳ ಮೇಲೆ ಬೆಲೆ ಭಾರಿ ಏರಿಕೆ – ಕಹಳೆ ನ್ಯೂಸ್

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ತರಕಾರಿ ದರ ಕೂಡ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿ ಸೊಪ್ಪು, ತರಕಾರಿಗಳ ತದ ತೀವ್ರ ಏರಿಕೆ ಆಗುತ್ತಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದೆ. ಮುಂಗಾರಿನಲ್ಲಿ ತರಕಾರಿ ಬೆಳೆ ಹೆಚ್ಚಾಗಿದ್ದು, ದರ ಸಾಮಾನ್ಯವಾಗಿತ್ತು. ಈಗ ಮುಂಗಾರು ಮುಕ್ತಾಯವಾಗಿದ್ದು, ಹಿಂಗಾರು ಮಳೆಯ ವಿಳಂಬದಿಂದಾಗಿ ಕಡಿಮೆ ಇಳುವರಿ ಹಾಗೂ ಬೆಳೆಗಳಿಗೆ ರೋಗ ಕಾರಣ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗಳಿಗೆ ತರಕಾರಿ ಪೂರೈಕೆಯಾಗದ ಕಾರಣ ಬೆಲೆ...
1 30 31 32 33 34 319
Page 32 of 319