Recent Posts

Saturday, April 25, 2026

ರಾಷ್ಟ್ರೀಯ

ಕಾಸರಗೋಡುರಾಷ್ಟ್ರೀಯಸುದ್ದಿ

ಲ್ಯಾಂಡಿಂಗ್ ವೇಳೆ ರನ್ ವೇಯಿಂದ ಜಾರಿದ ದುಬೈ – ಕೋಯಿಕ್ಕೋಡ್ ಏರ್ ಇಂಡಿಯಾ ವಿಮಾನ ; ಸಾವು – ನೋವು – ಮಂಗಳೂರು ವಿಮಾನ ದುರಂತ ಮಾದರಿಯ ಘಟನೆ – ಕಹಳೆ ನ್ಯೂಸ್

ಕೊಚ್ಚಿ: ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿದೆ. ಸಂಜೆ 7:45 ಕ್ಕೆ ಈ ಘಟನೆ ನಡೆದಿದ್ದು, 172 ಪ್ರಯಾಣಿಕರಿದ್ದ ವಿಮಾನ ರನ್ ವೇ ಯಿಂದ ಕಣಿವೆge ಜಾರಿದ ಕಣಿಪರಿಣಾಮ ಇಬ್ಭಾಗವಾಗಿದೆ. ಮಂಗಳೂರಿನಲ್ಲಿ ನಡೆದಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ಪತನದ ಮಾದರಿಯಲ್ಲಿ ಈ ಘಟನೆ ನಡೆದಿದೆ....
ರಾಷ್ಟ್ರೀಯಸುದ್ದಿ

ನಾಳೆ ಭಾರತಕ್ಕೆ ಐತಿಹಾಸಿಕ ದಿನ ; ಅಯೋಧ್ಯೆಯಲ್ಲಿ 3 ಗಂಟೆ ಇರಲಿದ್ದಾರೆ ಮೋದಿ – ಕಹಳೆ ನ್ಯೂಸ್

ಲಖನೌ, ಆ 04: ನಾಳೆ ಭಾರತಕ್ಕೆ ಐತಿಹಾಸಿಕ ದಿನವಾಗಿದ್ದು, ಹಲವಾರು ವರ್ಷಗಳ ಕನಸು ನನಸಾಗುತ್ತಿದೆ. ನಾಳೆ ನಡೆಯುವ ರಾಮ ಮಂದಿರ ಭೂಮಿ ಪೂಜೆಗೆ ಪ್ರಧಾನಿ ನರೇಂದ್ರ ಮೋದಿ ಅವರು 3 ಗಂಟೆಗಳ ಕಾಲ ಇರಲಿದ್ದಾರೆ ಎಂದು ತಿಳಿದುಬಂದಿದೆ.   ಇನ್ನು ಮೋದಿ ನಾಳೆ ಬೆಳಗ್ಗೆ ವಿಮಾನದಲ್ಲಿ ಆಗಮಿಸಲಿದ್ದು, ಅವರ ಜತೆಗೆ ಕೆಲವು ಹಿರಿಯ ನಾಯಕರೂ ಪಾಲ್ಗೊಳ್ಳಲಿದ್ದಾರೆ. ರಾಮ ಜನ್ಮಭೂಮಿಯ ತೀರ್ಥ ಕ್ಷೇತ್ರದ ಶಿಲಾನ್ಯಾಸ ಕಾರ್ಯಕ್ರಮಕ್ಕೆ 175 ಅತಿಥಿಗಳನ್ನು ಆಹ್ವಾನಿಸಲಾಗಿದ್ದು, ಅದರಲ್ಲಿ 135...
ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆ ‘ಮನೆಯಲ್ಲಿಯೇ ರಾಮನ ಪೂಜೆ ಮಾಡಿ, ಪಟಾಕಿ ಸಿಡಿಸದಿರಿ, ಸಂಭ್ರಮಾಚರಣೆ ಬೇಡ’ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮನವಿ – ಕಹಳೆ ನ್ಯೂಸ್

ಮಂಗಳೂರು, ಆ. 04  : ''ಬುಧವಾರ ಆಗಸ್ಟ್‌ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆ ನಡೆಯಲಿದ್ದು, ಈ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಮನೆಯಲ್ಲಿಯೇ ಪೂಜೆ ಮಾಡಿ, ಬೀದಿಯಲ್ಲಿ ಪೂಜೆ ಮಾಡಿ, ಪಟಾಕಿ ಸಿಡಿಸಿ, ಮೆರವಣಿಗೆ ಮಾಡುವುದನ್ನು ಮಾಡಬೇಡಿ. ಅಯೋಧ್ಯೆಯಂತಹ ಸೂಕ್ಷ್ಮ ವಿಚಾರದಲ್ಲಿ ಯಾರ ಭಾವನೆಗೂ ಧಕ್ಕೆ ಉಂಟಾಗಬಾರದು'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಬಿಜೆಪಿ ಕಾರ್ಯಕರ್ತರಿಗೆ ತಿಳಿಸಿದ್ದಾರೆ.   ''ಎಲ್ಲಾ ಕಾರ್ಯಕರ್ತರು ಜವಾಬ್ದಾರಿಯಿಂದ ವರ್ತಿಸಬೇಕು. ಗುಂಪು ಸೇರಿ ಸಂಭ್ರಮಾಚರಣೆ ಮಾಡಬೇಡಿ, ಪ್ರತಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿಎಂ ಬಿ.ಎಸ್‌.ಯಡಿಯೂರಪ್ಪ ಪುತ್ರಿ, ಕಾವೇರಿ ನಿವಾಸದ ಆರು ಮಂದಿ ಸಿಬ್ಬಂದಿಗಳಿಗೂ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಂಗಳೂರು, ಆ 03 : ಸಿಎಂ ಬಿಎಸ್‌‌ವೈ ಅವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ, ಸಿಎಂ ಅವರ ಕಾವೇರಿ ಮತ್ತು ಕೃಷ್ಣಾ ನಿವಾಸಗಳ ಎಲ್ಲಾ ಸಿಬ್ಬಂದಿಗಳಿಗೂ ಕೊರೊನಾ ತಪಾಸಣೆ ಮಾಡಲಾಗುತ್ತಿದ್ದು, ಕಾವೇರಿ ನಿವಾಸದ ಆರು ಮಂದಿಗೆ ಕೊರೊನಾ ಸೋಂಕು ಖಚಿತವಾಗಿದೆ.   ಕೊರೊನಾ ತಪಾಸಣೆಯ ಸಂದರ್ಭ ಸಿಎಂ ಅವರ ಕಾವೇರಿ ನಿವಾಸದಲ್ಲಿದ್ದ ಬಾಣಸಿಗ ಮಹಿಳೆ ಸೇರಿ ಗನ್‌‌ ಮ್ಯಾನ್‌‌‌, ವಿಶೇಷ ಕರ್ತವ್ಯಾಧಿಕಾರಿ ಹಾಗೂ ಆರು ಮಂದಿಗೆ ಸೋಂಕು ಪತ್ತೆಯಾಗಿದೆ. ತಮಗೆ ಕೊರೊನಾ ಸೋಂಕು...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಕರೊನಾಗೆ ಆಯುರ್ವೇದ ಔಷಧ ಪ್ರಯೋಗ; ಬಿಎಂಸಿಆರ್​ಐ ನೋಟಿಸ್ ವಿಚಾರಕ್ಕೆ ಡಾ.ಗಿರಿಧರ ಕಜೆ ಹೇಳಿದ್ದೇನು? – ಕಹಳೆ ನ್ಯೂಸ್

ಬೆಂಗಳೂರು: ಕರೊನಾ ರೋಗಿಗಳ ಮೇಲೆ ಆಯುರ್ವೇದ ಔಷಧ ಪ್ರಯೋಗ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ನೋಟಿಸೊಂದು ಹರಿದಾಡುತ್ತಿದೆ. ಇದು ಹಲವು ಗೊಂದಲಗಳಿಗೂ ಕಾರಣವಾಗಿತ್ತು. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್​ಐ) ಎಥಿಕಲ್ ಕಮಿಟಿ ಹೆಸರಲ್ಲಿರುವ ಲೆಟರ್​ ಹೆಡ್​ನಲ್ಲಿ ಆಯುರ್ವೇದ ತಜ್ಞ ಡಾ.ಗಿರಿಧರ ಕಜೆಯವರಿಗೆ ನೋಟಿಸ್ ಎಂದು ಬರೆಯಲಾಗಿದೆ. ಇದರಲ್ಲಿ ಆಯುರ್ವೇದ ಔಷಧದ ಕ್ಲಿನಿಕಲ್​ ಟ್ರಯಲ್​ ಇನ್ನೂ ಜಾರಿಯಲ್ಲಿರುವಾಗಲೇ ಯಶಸ್ವಿಯಾಗಿದೆ ಎಂದು ಸಾರ್ವಜನಿಕವಾಗಿ ಘೋಷಿಸಿದ್ದೀರಿ ಎಂದು...
ಉಡುಪಿರಾಷ್ಟ್ರೀಯ

‘ ರಾಮ ಮಂದಿರ ಭೂಮಿ ಪೂಜೆಯನ್ನು ಹಬ್ಬವಾಗಿ ಆಚರಿಸೋಣ’ ; ಸುದ್ದಿಗೋಷ್ಠಿಯಲ್ಲಿ ಪೇಜಾವರ ಸ್ವಾಮೀಜಿ – ಕಹಳೆ ನ್ಯೂಸ್

ಉಡುಪಿ, ಆ. 02 : ''ಅಯೋಧ್ಯೆಯಲ್ಲಿರುವ ರಾಮ ಮಂದಿರವು ಇಡೀ ಹಿಂದೂ ಸಮಾಜದ ಕನಸಾಗಿದ್ದು ಆಗಸ್ಟ್ 5 ರಂದು ನಡೆಯುವ ಭವ್ಯ ದೇವಾಲಯದ ಭೂಮಿ ಪೂಜೆಯ ಸಮಾರಂಭವನ್ನು ಪ್ರತಿಯೊಬ್ಬರು ಹಬ್ಬವಾಗಿ ಆಚರಿಸಬೇಕು'' ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯ ಕರೆ ನೀಡಿದ್ದಾರೆ.       "ಭಗವಂತ ರಾಮನ ಆರಾಧನೆಯನ್ನು ನಾವು ಮುಂದುವರೆಸಬೇಕು. ಕೊರೊನಾ ಪರಿಸ್ಥಿತಿಯ ಸಂದರ್ಭದಲ್ಲಿಯೂ...
ಕ್ರೈಮ್ರಾಷ್ಟ್ರೀಯ

ಅಮಾರವತಿಯಲ್ಲಿ ಅಟ್ಟಹಾಸ ಮೆರೆದ ಕಾಮುಕ ; ಕೊರೊನಾ ಟೆಸ್ಟ್‌ಗೆ ಬಂದ 24 ವರ್ಷದ ಯುವತಿಯ ಗುಪ್ತಾಂಗದಿಂದ ಸ್ಯಾಂಪಲ್ ಪಡೆದ ಲ್ಯಾಬ್ ಟೆಕ್ನಿಷಿಯನ್ ! – ಕಹಳೆ ನ್ಯೂಸ್

ಮುಂಬೈ: ಕೊರೊನಾ ವೈರಸ್ ಭೀತಿಯ ನಡುವೆ ಮಹಾರಾಷ್ಟ್ರದ ಅಮಾರವತಿಯಲ್ಲಿ ಕಾಮುಕನೊಬ್ಬ ಅಟ್ಟಹಾಸ ಮೆರೆದಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು. ಕೊರೊನಾ ವೈರಸ್ ಭೀತಿಯಿಂದ 24 ವರ್ಷದ ಯುವತಿಯೊಬ್ಬಳು ಟೆಸ್ಟ್ ಗೆ ಎಂದು ಲ್ಯಾಬ್ ಟೆಕ್ನಿಷಿಯನ್ ಬಳಿ ಬಂದಿದ್ದಾಳೆ. ಈ ವೇಳೆ ಕಾಮುಕ, ಕೊರೊನಾ ಟೆಸ್ಟ್ ನಲ್ಲಿ ಗುಪ್ತಾಂಗದಿಂದಲೂ ಸ್ಯಾಂಪಲ್ ತೆಗೆದುಕೊಳ್ಳುವುದು ಮುಖ್ಯವಾಗುತ್ತದೆ ಎಂದು ಹೇಳಿ ಆಕೆಯನ್ನು ಪುಲಾಯಿಸಿದ್ದಾನೆ. ಅಲ್ಲದೆ ಸ್ಯಾಂಪಲ್ ಕೂಡ ಪಡೆದುಕೊಂಡಿದ್ದಾನೆ.   ಯುವತಿ ಸ್ಥಳೀಯ ಮಾಲ್ ಒಂದರಲ್ಲಿ...
ಆರೋಗ್ಯರಾಜ್ಯರಾಷ್ಟ್ರೀಯಸುದ್ದಿ

ಅನ್ ಲಾಕ್ 3.0 : ಆ. 5ರಿಂದ ರಾತ್ರಿ ಕರ್ಫ್ಯೂ ತೆರವು ; ಜಿಮ್, ಯೋಗ ಕೇಂದ್ರಕ್ಕೆ ಅನುಮತಿ – ಕಹಳೆ ನ್ಯೂಸ್

ನವದೆಹಲಿ, ಜು 30 : ಕೊರೊನಾದ ಗಣನೀಯ ಏರಿಕೆಯ ನಡುವೆ ಕೇಂದ್ರ ಸರ್ಕಾರ ಬುಧವಾರ ಅನ್ ಲಾಕ್-3 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಆಗಸ್ಟ್ 5ರಿಂದ ರಾತ್ರಿ ಕರ್ಫ್ಯೂ ತೆರವುಗೊಳಿಸಿ ,ಜಿಮ್, ಯೋಗ ಕೇಂದ್ರ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಈ ಮಾರ್ಗಸೂಚಿ ಪ್ರಕಾರ ಶಾಲಾ- ಕಾಲೇಜು , ಕೋಚಿಂಗ್ ಸೆಂಟರ್ ಗಳು, ಮೆಟ್ರೋ , ಸಿನಿಮಾ ಮಂದಿರಗಳನ್ನು ತೆರೆಯಲು ಆಗಸ್ಟ್ 31ರ ವರೆಗೆ ಅವಕಾಶ ನೀಡಿಲ್ಲ.   ಕಂಟೈನ್​ಮೆಂಟ್​ ಜೋನ್​ಗಳಲ್ಲಿ ಆ.31ರವರೆಗೆ...
1 323 324 325 326 327 329
Page 325 of 329