Breaking News : `ಬಾಬ್ರಿ ಮಸೀದಿ ಧ್ವಂಸ’ ಪ್ರಕರಣ : ಎಲ್.ಕೆ. ಅಡ್ವಾಣಿ ಸೇರಿ ಎಲ್ಲಾ ಆರೋಪಿಗಳು ನಿರ್ದೋಷಿಗಳು ; ಬಾಬ್ರಿ ಅಂತಿಮ ತೀರ್ಪಿನಲ್ಲೇನಿದೆ.? – ಕಹಳೆ ನ್ಯೂಸ್
ನವದೆಹಲಿ:ದೇಶವೇ ಕುತೂಹಲದಿಂದ ಕಾಯುತ್ತಿರುವ 1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳು ನಿರ್ದೋಷಿಗಳು ಎಂದು ಮಹತ್ವದ ತೀರ್ಪು ನೀಡಿದೆ. ಲಕ್ನೋದ ಸಿಸಿಬಿ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಾಪೀಠವು ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಘಟನೆ ಪೂರ್ವ ನಿಯೋಜಿತ ಕೃತ್ಯ ಅಲ್ಲ, ಆಕಸ್ಮಿಕವಾಗಿ ನಡೆದಿರುವಂತದ್ದು, ಆರೋಪ ಸಾಬೀತು...







