Recent Posts

Sunday, September 13, 2026

ರಾಷ್ಟ್ರೀಯ

ಬೆಂಗಳೂರು

ಸ್ಯಾಂಡಲ್ ವುಡ್ ಹಾಸ್ಯನಟ ರಾಕ್ ಲೈನ್ ಸುಧಾಕರ್ ನಿಧನ -ಕಹಳೆ ನ್ಯೂಸ್

ಬೆಂಗಳೂರು, ಸೆ.24 (ಹಿ.ಸ) : ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯನಟ ರಾಕ್‌ಲೈನ್ ಸುಧಾಕರ್ ನಿಧನರಾಗಿದ್ದಾರೆ. ಸಿನಿಮಾ ಒಂದರ ಚಿತ್ರೀಕರಣದ ವೇಳೆ ಸೆಟ್‌ನಲ್ಲಿಯೇ ಅವರು ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಇತ್ತೀಚೆಗಷ್ಟೆ ನಟ ರಾಕ್‍ಲೈನ್ ಸುಧಾಕರ್ ಕೊರೊನಾ ಪರೀಕ್ಷೆ ಮಾಡಿಸಿದ್ದು, ಈ ವೇಳೆ ಪಾಸಿಟಿವ್ ಬಂದಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ನಂತರ ಸಿನಿಮಾ ಕೆಲಸಗಳಲ್ಲಿ ಸುಧಾಕರ್ ಸಕ್ರಿಯರಾಗಿದ್ದರು. ಇಂದು ಸಹ ಸುಧಾಕರ್ ಚಿತ್ರೀಕರಣಕ್ಕೆ ಹಾಜರಾಗಿದ್ದರು....
ರಾಜ್ಯರಾಷ್ಟ್ರೀಯ

Breaking News : ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ – ಕಹಳೆ ನ್ಯೂಸ್

ನವದೆಹಲಿ : ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (55) ನಿಧನರಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ರಾಜ್ಯ ಸಚಿವ ಸುರೇಶ್ ಅಂಗಡಿ (55) ನಿಧನರಾಗಿದ್ದಾರೆ....
ರಾಷ್ಟ್ರೀಯಸುದ್ದಿ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ವಿಚಾರಣೆ ಅಂತ್ಯ ಹಿನ್ನಲೆ : ಸೆ.30ರಂದು ಎಲ್.ಕೆ.ಅಡ್ವಾಣಿ, ಜೋಷಿ, ಉಮಾ ಭಾರತಿ ಸಹಿತ 32 ಮಂದಿಗೆ ನ್ಯಾಯಾಲಯಕ್ಕೆ ಹಾಜರಾಗಲು ಆದೇಶ – ಕಹಳೆ ನ್ಯೂಸ್

ಹೊಸದಿಲ್ಲಿ: 1992ರಲ್ಲಿ ನಡೆದ ಬಾಬ್ರಿ ಮಸೀದಿ ದ್ವಂಸ ಪ್ರಕರಣದ ವಿಚಾರಣೆ ಸೆ.30ರಂದು ಅಂತ್ಯಗೊಳ್ಳಲಿದ್ದು, ಈ ವೇಳೆ ಎಲ್.ಕೆ.ಅಡ್ವಾಣಿ, ಉಮಾ ಭಾರತಿ ಸೇರಿದಂತೆ ಎಲ್ಲಾ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ, ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಮತ್ತು ಬಿಜೆಪಿ ನಾಯಕರು ಸೇರಿ 32 ಆರೋಪಿಗಳಲ್ಲಿ ಮುರ್ಲಿ ಮನೋಹರ್ ಜೋಶಿ, ಉಮಾ ಭಾರತಿ, ವಿನಯ್ ಕಟಿಯಾರ್ ಮತ್ತು ಸಾಕ್ಷಿ ಮಹಾರಾಜ್ ಕೂಡ ಹಾಜರಾಗಲಿದ್ದಾರೆ. ನ್ಯಾಯಾಧೀಶ ಎಸ್.ಕೆ....
ರಾಷ್ಟ್ರೀಯ

ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು, ಏಮ್ಸ್‌ನಲ್ಲಿ ಚಿಕಿತ್ಸೆ – ಕಹಳೆ ನ್ಯೂಸ್

ನವದೆಹಲಿ, ಸೆ.13-ಕೇಂದ್ರ ಗೃಹ ಸಚಿವ ಅಮಿತ್ ಶಾ ಅನಾರೋಗ್ಯದಿಂದಾಗಿ ನಿನ್ನೆತಡರಾತ್ರಿ ಮತ್ತೆದಹೆಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ಆಸ್ಪತ್ರೆಗೆದಾಖಲಾಗಿದ್ದಾರೆ. ಅವರಆರೋಗ್ಯ ಸ್ಥಿರವಾಗಿದೆ ಎಂದುಆಸ್ಪತ್ರೆಯ ಮೂಲಗಳು ತಿಳಿಸಿವೆ. ಕೆಲವು ದಿನಗಳ ಹಿಂದೆಕೊರೊನಾ ವೈರಸ್ ಸೋಂಕಿನಿಂದಾಗಿ ಏಮ್ಸ್‍ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಅಮಿತ್ ಶಾ ಅವರಿಗೆ ನಿನ್ನೆರಾತ್ರಿ 11 ಗಂಟೆಯಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ತಕ್ಷಣ ಅವರನ್ನುಏಮ್ಸ್ ಆಸ್ಪತ್ರೆಗೆಕರೆದೊಯ್ಸುಅತಿಗಣ್ಯ ವ್ಯಕ್ತಿಗಳಿಗೆ ಚಿಕಿತ್ಸೆ ನೀಡುವ ವಿಶೇಷ ವ್ಯವಸ್ಥೆಇರುವ ಸಿಎನ್ ಟವರ್ಸ್ ವಿವಿಐಪಿ ಕೊಠಡಿಯಲ್ಲಿ...
ರಾಷ್ಟ್ರೀಯ

ಕೋವಿಡ್‌ಗೆ ಮದ್ದು ಕಂಡುಹಿಡಿಯುವ ತನಕ ನಿರ್ಲಕ್ಷ್ಯ ತೋರಬೇಡಿ: ಮೋದಿ – ಕಹಳೆ ನ್ಯೂಸ್

ಭೋಪಾಲ್: 'ಕೋವಿಡ್‌ಗೆ ಮದ್ದು ಕಂಡುಹಿಡಿಯುವ ತನಕ, ಸೋಂಕಿನ ಕುರಿತು ನಿರ್ಲಕ್ಷ್ಯ ತೋರಿಸಬೇಡಿ' ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು. ಮಧ್ಯಪ್ರದೇಶದಲ್ಲಿ ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ನಿರ್ಮಿಸಲಾದ ಮನೆಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಈ ವೇಳೆ 'ಜಬ್‌ ತಕ್‌ ದವಾಯಿ ನಹೀ, ತಬ್‌ ತಕ್‌ ಡಿಲಾಯಿ ನಹೀ', 'ದೋ ಗಜ್‌ ಕಿ ದೂರಿ ಮಾಸ್ಕ್‌ ಹೈ ಜರೂರಿ' ಎಂಬ ಘೋಷವಾಕ್ಯಗಳನ್ನು ಹೇಳುವ ಮೂಲಕ ಅವರು ಕೋವಿಡ್‌-19...
ರಾಷ್ಟ್ರೀಯ

ಅಂಕಪಟ್ಟಿಯ ಒತ್ತಡವನ್ನು ತೆಗೆದುಹಾಕುವುದೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಗುರಿ:ಪ್ರಧಾನಿ ಮೋದಿ -ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ-2020 ನವ ಭಾರತದ ಹೊಸ ಆಕಾಂಕ್ಷೆಗಳು ಮತ್ತು ಹೊಸ ಆಶಯಗಳನ್ನು ಈಡೇರಿಸಲು ಇರುವ ಮಾರ್ಗವಾಗಿದೆ. ದೇಶಾದ್ಯಂತ ಎಲ್ಲರೂ ಒಟ್ಟಾಗಿ ಇದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಒತ್ತಿ ಹೇಳಿದ್ದಾರೆ. ಕಳೆದ ನಾಲ್ಕೈದು ವರ್ಷಗಳಲ್ಲಿ ಶಿಕ್ಷಣ ನೀತಿಗೆ ಸಂಬಂಧಪಟ್ಟವರ ಸತತ ಪರಿಶ್ರಮ, ಅವಿರತ ಕಠಿಣ ಕೆಲಸದ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಲಾಗುತ್ತಿದೆ. ಇನ್ನೂ ಇದರ ಕೆಲಸ ಮುಗಿದಿಲ್ಲ. ಇದು ಕೇವಲ...
ಬೆಂಗಳೂರುಸುದ್ದಿ

ಡ್ರಗ್ಸ್ ಮಾಫಿಯಾ ಕೇಸ್; ನಟಿ ರಾಗಿಣಿಗೆ ಇಂದು ಜೈಲಾ.? ಬೇಲಾ.? – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿ ರಾಗಿಣಿ ದ್ವಿವೇದಿಯವರ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದ್ದು, ನ್ಯಾಯಾಧೀಶರ ಮುಂದೆ ಮತ್ತೆ ಹಾಜರಾಗಲಿದ್ದಾರೆ. ಕಳೆದ 8 ದಿನಗಳಿಂದ ಸಿಸಿಬಿ ಕಸ್ಟಡಿಯಲ್ಲಿರುವ ನಟಿ ರಾಗಿಣಿ, ವಿಚಾರಣೆ ವೇಳೆ ಯಾವುದೇ ಮಾಹಿತಿ ನೀಡಿಲ್ಲ. ತನಗೇನೂ ಗೊತ್ತಿಲ್ಲ. ಎಲ್ಲವೂ ಮರೆತು ಹೋಗಿದೆ ಎಂದು ರಾಗಿಣಿ ಹೇಳುತ್ತಿದ್ದಾರೆ ಎನ್ನಲಾಗಿದೆ. ಇಂದಿಗೆ ರಾಗಿಣಿ ಸಿಸಿಬಿ ಕಸ್ಟಡಿ ಮುಗಿಯುವ ಹಿನ್ನಲೆಯಲ್ಲಿ ಮಧ್ಯಾಹ್ನ ರಾಗಿಣಿಯವರನ್ನು ಸಿಸಿಬಿ...
ರಾಷ್ಟ್ರೀಯ

ಬೆಂಗಳೂರಲ್ಲಿ ಅಂಬ್ಯುಲೆನ್ಸ್ ಹತ್ತಿದ ಯುವತಿ ದೆಹಲಿಯಲ್ಲಿ ಪತ್ತೆ! – ಕಹಳೆ ನ್ಯೂಸ್

ಬೆಂಗಳೂರು, ಸೆಪ್ಟೆಂಬರ್ 10: ಕೋವಿಡ್ ಸೋಂಕಿತ ಯುವತಿಯೊಬ್ಬಳು ಬೆಂಗಳೂರಿನಲ್ಲಿ ಅಂಬ್ಯಲೆನ್ಸ್ ಹತ್ತಿದ ಮೇಲೆ ನಾಪತ್ತೆಯಾಗಿದ್ದಳು. ಆಕೆ ದೆಹಲಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬೆಂಗಳೂರಿನ ಬೊಮ್ಮನಹಳ್ಳಿಯ 28 ವರ್ಷದ ಯುವತಿಗೆ ಸೆಪ್ಟೆಂಬರ್ 3ರಂದು ಕೋವಿಡ್ ಸೋಂಕು ತಗುಲಿತ್ತು. ಕೋವಿಡ್ ಕರ್ತವ್ಯದಲ್ಲಿರುವ ಅಂಬ್ಯುಲೆನ್ಸ್‌ ಎಂದು ಸ್ಟಿಕ್ಕರ್ ಹಾಕಿದ್ದ ಅಂಬ್ಯುಲೆನ್ಸ್‌ನಲ್ಲಿ ಯುವತಿಯನ್ನು ಕರೆದುಕೊಂಡು ಹೋಗಲಾಗಿತ್ತು. ಚೆನ್ನೈ ಅಂಬ್ಯುಲೆನ್ಸ್ ಚಾಲಕರಿಗೆ ಸೆಲ್ಯೂಟ್ ಎಂದ ಮಿಜೋರಾಂ ಸರ್ಕಾರ! ಆದರೆ, ಸಮೀಪದ ಖಾಸಗಿ ಆಸ್ಪತ್ರೆಗೆ ಹೋದ ಕುಟುಂಬದವರಿಗೆ...
1 352 353 354 355 356 364
Page 354 of 364