ಜಮ್ಮು-ಕಾಶ್ಮೀರ ಭಾರತ ಅವಿಭಾಜ್ಯ ಅಂಗ, ಮಾನವ ಹಕ್ಕು ಉಲ್ಲಂಘನೆ ಕೊನೆಗೊಳಿಸಿ: ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಗುಡುಗಿದ ಭಾರತ
ನ್ಯೂಯಾರ್ಕ್: ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳಲ್ಲಿ, ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಸುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಕೊನೆಗೊಳಿಸಬೇಕು ಎಂದು ಭಾರತ ಆಗ್ರಹಿಸಿದೆ. 80ನೇ ವಿಶ್ವಸಂಸ್ಥೆಯ ದಿನದಂದು ಆಯೋಜಿಸಲಾದ ಮುಕ್ತ ಚರ್ಚೆಯ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ಉದ್ದೇಶಿಸಿ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ ಅವರು ಮಾತನಾಡಿದರು. ಈ ವೇಳೆ ಪಾಕಿಸ್ತಾನದ ವಿರುದ್ಧ ಗುಡುಗಿದರು. ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆ ದಬ್ಬಾಳಿಕೆ, ಕ್ರೌರ್ಯ ಮತ್ತು...






