Saturday, June 13, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಅಮೆರಿಕ ವಾಯುನೆಲೆ ಮೇಲೆ ಇರಾನ್‌ ಮಿಸೈಲ್‌ ದಾಳಿ : ಅತ್ಯಾಧುನಿಕ MQ-9 ರೀಪರ್ ಡ್ರೋನ್‌ಗಳಿಗೆ ಹಾನಿ -ಕಹಳೆ ನ್ಯೂಸ್

ಟೆಹ್ರಾನ್‌/ವಾಷಿಂಗ್ಟನ್‌: ಶ್ವೇತಭವನದಲ್ಲಿ 2 ಗಂಟೆಗಳ ಕಾಲ ನಡೆದ ಸಭೆಯ ಹೊರತಾಗಿಯೂ, ಇರಾನ್ ಜೊತೆಗಿನ ಮಾತುಕತೆ ವಿಫಲವಾಗಿದೆ. ಇದಾದ ಕೆಲ ಗಂಟೆಗಳಲ್ಲೇ ಇರಾನ್‌ ಅಮೆರಿಕದ ವಾಯುನೆಲೆಯ ಮೇಲೆ ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ  ನಡೆಸಿದೆ. ದಾಳಿಯಲ್ಲಿ ಅಮೆರಿಕದ (America) ಅತ್ಯಾಧುನಿಕ ರೀಪರ್‌ ಡ್ರೋನ್‌ಗಳು (Reaper Drones) ಹಾನಿಯಾಗಿದ್ದು, ನೂರಾರು ಕೋಟಿ ರೂಪಾಯಿ ಸಂಪತ್ತು ನಷ್ಟವಾದಂತಾಗಿದೆ. ಹಲವು ಅಮೆರಿಕನ್ನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಕುವೈತ್‌ನಲ್ಲಿರುವ ಅಮೆರಿಕ ಅಲಿ ಅಲ್ ಸಲೇಂ ವಾಯುನೆಲೆಯ ಮೇಲೆ...
ಬೆಂಗಳೂರುರಾಜ್ಯಸುದ್ದಿ

ಡಿಕೆಶಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ : ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ಸ್ವೀಕಾರ -ಕಹಳೆ ನ್ಯೂಸ್

ಬೆಂಗಳೂರು: ಡಿಕೆ ಶಿವಕುಮಾರ್‌ ಅವರ ಪದಗ್ರಹಣಕ್ಕೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ (ಜೂ.3) ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್‌ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ....
ಮುಂಬೈರಾಜ್ಯಸುದ್ದಿ

2ನೇ ಬಾರಿಗೆ ದರ ಏರಿಕೆ ಬಿಸಿ : ಸಿಎನ್‌ಜಿ ಬೆಲೆ ಮತ್ತೆ 2 ರೂ. ಹೆಚ್ಚಳ – ಕಹಳೆ ನ್ಯೂಸ್

ಮುಂಬೈ: ಪೆಟ್ರೋಲ್‌, ಡೀಸೆಲ್‌  ಬಳಿಕ ಇದೀಗ ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ದರ ಮತ್ತೆ ಪ್ರತಿ ಕೆಜಿಗೆ 2 ರೂ.ಗಳಷ್ಟು ಹೆಚ್ಚಳ ಮಾಡಲಾಗಿದೆ. ಸರ್ಕಾರಿ ಅನಿಲ ವಿತರಕ ಮಹಾನಗರ ಗ್ಯಾಸ್ ಲಿಮಿಟೆಡ್ ಸಂಸ್ಥೆಯು ಮುಂಬೈನಲ್ಲಿ ಇಂದಿನ ಅನ್ವಯವಾಗುವಂತೆ ಹೊಸ ದರ ಘೋಷಿಸಿದೆ. ಪರಿಷ್ಕೃತ ದರದಲ್ಲಿ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 2 ರೂ. ಹೆಚ್ಚಿಸಲಾಗಿದ್ದು, 86 ರೂ.ಗಳಿಗೆ ಏರಿಕೆಯಾಗಿದೆ. ಇನ್ನೂ ಗೃಹ ಬಳಕೆಯ ಪಿಎನ್‌ಜಿ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್‌ಗೆ (SCM)...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯ

ಮುಳಿಯ ಬೆಂಗಳೂರಿನಲ್ಲಿ “ಡೈಮಂಡ್ ಫೆಸ್ಟ್” :  ಅತ್ಯಾಕರ್ಷಕ ಉಡುಗೊರೆಗಳನ್ನು ಗೆಲ್ಲುವ ಅವಕಾಶ-ಕಹಳೆ ನ್ಯೂಸ್

ಬೆಂಗಳೂರು: ಮಣಿಪಾಲ್ ಸೆಂಟರ್‌ನಲ್ಲಿರುವ ಪ್ರತಿಷ್ಠಿತ ಆಭರಣ ಮಳಿಗೆ ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ಇದೇ ಮೇ 28ರಿಂದ “ಡೈಮಂಡ್ ಫೆಸ್ಟ್” ಆರಂಭವಾಗಿದೆ. “Widest Range, Endless Wows!” ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು ವಜ್ರಾಭರಣ ಪ್ರಿಯರಿಗೆ ವಿಶಿಷ್ಟ ಅವಕಾಶಗಳನ್ನು ಒದಗಿಸುತ್ತಿದೆ. ಉತ್ಸವದ ಅಂಗವಾಗಿ ಪ್ರತಿಯೊಂದು ಖರೀದಿಗೂ ಸೀರೆ, ಸ್ಕ್ರಾಚ್ ಕಾರ್ಡ್ ಸೇರಿದಂತೆ ವಿವಿಧ ಉಡುಗೊರೆಗಳನ್ನು ಗೆಲ್ಲುವ ಅವಕಾಶ ನೀಡಲಾಗುತ್ತದೆ. ಜೊತೆಗೆ, ಲಕ್ಕಿ ಡ್ರಾ ಮೂಲಕ ಬಂಪರ್ ಬಹುಮಾನವಾಗಿ...
ದೆಹಲಿರಾಜ್ಯಸುದ್ದಿ

ನಿರ್ಮಾಣ ಹಂತದ ಸೇತುವೆ ಕುಸಿದು 6 ಕಾರ್ಮಿಕರು ಸಾವು : ಹಲವರು ಅವಶೇಷಗಳ ಅಡಿಯಲ್ಲಿ ಲಾಕ್‌ -ಕಹಳೆ ನ್ಯೂಸ್

ಲಕ್ನೋ: ಚಂಡಮಾರುತಕ್ಕೆ ಸಿಕ್ಕಿ ಬೆಟ್ಟಾ ನದಿಯ ಮೇಲೆ‌ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು  6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ  ಹಮೀರ್‌ಪುರದಲ್ಲಿ ನಡೆದಿದೆ. ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲೆಂದು ನಿರ್ಮಿಸಿದ್ದ ಸೇತುವೆಯೇ (Bridge) ಈಗ ಜನರ ಜೀವಕ್ಕೆ ಸಂಚಕಾರ ತಂದಿದೆ. ಘಟನೆಯಲ್ಲಿ ಈವರೆಗೆ 6 ಕಾರ್ಮಿಕರು ಸಾವನ್ನಪ್ಪಿದ್ದು, ಇನ್ನೂ ಅನೇಕರು ಅವಶೇಷಗಳ ಅಡಿಯಲ್ಲೇ ಸಿಲುಕಿರುವ ಶಂಕೆ ಇದೆ. ಹೀಗಾಗಿ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ....
ಬೆಂಗಳೂರುರಾಜ್ಯಸುದ್ದಿ

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್-ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌  ಅವರು ಇಂದು (ಮೇ 29) ಅಂಗೀಕರಿಸಿದ್ದಾರೆ. ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಲೋಕಭವನದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.  ಆದಾಗ್ಯೂ ಹೊಸ ಸರ್ಕಾರ ರಚನೆಯಾಗುವವರೆಗೆ ಇನ್ನೂ 2-3 ದಿನಗಳ ಕಾಲ ಸಿದ್ದರಾಮಯ್ಯ ಅವರು ಹಂಗಾಮಿ ಸಿಎಂ ಆಗಿ ಮುಂದುವರಿಯಲಿದ್ದಾರೆ. ರಾಜ್ಯಪಾಲರು ರಾಜಧಾನಿಯಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ...
ಬೆಂಗಳೂರುರಾಜ್ಯಸುದ್ದಿ

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ -ಕಹಳೆ ನ್ಯೂಸ್

ಬೆಂಗಳೂರು: ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ರಾಜ್ಯಸಭೆಗೆ ಹೋಗಿ ಅಂತ ನನಗೆ ಹೇಳಿದ್ರು. ನಾನು ಬಹಳ ವಿನಮ್ರವಾಗಿ ಆಗಲ್ಲ ಅಂತ ಹೇಳಿದೆ. ರಾಷ್ಟ್ರ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ ಅಂತ ಹೇಳಿದ್ದೇನೆಂದು ತಿಳಿಸಿದರು. ರಾಜ್ಯದ ಜನ ನನ್ನನ್ನು ಐದು ವರ್ಷಗಳ...
ಬೆಂಗಳೂರುರಾಜ್ಯಸುದ್ದಿ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಂತೋಷ್‌ ಲಾಡ್‌ ಕಣ್ಣೀರು -ಕಹಳೆ ನ್ಯೂಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಚಿವ ಸಂತೋಷ್‌ ಲಾಡ್‌  ಕಣ್ಣೀರಿಟ್ಟಿದ್ದಾರೆ. ರಾಜೀನಾಮೆಗೂ ಮುನ್ನ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಇಂದು ಬ್ರೇಕ್‌ಫಾಸ್ಟ್‌ ಸಭೆ ನಡೆಸಿದರು. ಈ ವೇಳೆ ತಮ್ಮ ರಾಜೀನಾಮೆಯನ್ನು ಸಹ ಘೋಷಣೆ ಮಾಡಿದರು. ಮುಂದಿನ ಸಿಎಂ ಡಿ.ಕೆ.ಶಿವಕುಮಾರ್‌ ಎಂದು ಘೋಷಿಸಿ, ಅವರಿಗೆ ಸಹಕಾರ ನೀಡುವಂತೆ ಸಚಿವರಲ್ಲಿ ಸಿದ್ದರಾಮಯ್ಯ ಮನವಿ ಮಾಡಿಕೊಂಡರು. ಸಿದ್ದರಾಮಯ್ಯ ರಾಜೀನಾಮೆ ಘೋಷಣೆ ಕೇಳಿ ಸಭೆಯಲ್ಲೇ ಆಪ್ತ ಸಚಿವರು ಕಣ್ಣೀರಿಟ್ಟರು. ಸಭೆ ಬಳಿಕ ಒಬ್ಬೊಬ್ಬರಾಗಿ ಹೊರಬಂದ ಸಚಿವರ...
1 4 5 6 7 8 345
Page 6 of 345