Monday, September 14, 2026

ರಾಷ್ಟ್ರೀಯ

ದೆಹಲಿರಾಜ್ಯಸುದ್ದಿ

ಗಲ್ಫ್‌ ಉದ್ಯೋಗಕ್ಕಿಂತ ಭಾರತೀಯ ಸೇನೆಯೇ ಉತ್ತಮ : ನೇಪಾಳದಲ್ಲಿ ನೇಮಕಾತಿ ಪುನರಾರಂಭಿಸುವಂತೆ ಬೃಹತ್‌ ಪ್ರತಿಭಟನೆ – ಕಹಳೆ ನ್ಯೂಸ್

ನವದೆಹಲಿ: ಭಾರತೀಯ ಸೇನೆಯಲ್ಲಿ ನೇಪಾಳಿ ಯುವಕರ ನೇಮಕಾತಿಯನ್ನು ಅಗ್ನಿಪಥ್  ಯೋಜನೆಯಡಿಯಲ್ಲಿ ತಕ್ಷಣವೇ ಪುನರಾರಂಭಿಸಬೇಕು ಎಂದು ಆಗ್ರಹಿಸಿ ನೇಪಾಳದ ಪೋಖರಾ ನಗರದಲ್ಲಿ ಮಾಜಿ ಗೂರ್ಖಾ ಸೈನಿಕರು Sಹಾಗೂ ಅವರ ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ನೇಪಾಳಿ ಪೋರ್ಟಲ್ ‘ರಾಟೋಪಾಟಿ’ ವರದಿಯ ಪ್ರಕಾರ, ಪ್ರತಿಭಟನೆಯು ಬುಧವಾರ (ಆಗಸ್ಟ್ 12) ನಡೆದಿದ್ದು, ‘ಇಂಡಿಯನ್ ಎಕ್ಸ್-ಸರ್ವೀಸ್‌ಮೆನ್ ಗೂರ್ಖಾ ಬ್ರಿಗೇಡ್ ನೇಪಾಳ ಪೋಖರಾ’ ಈ ಪ್ರತಿಭಟನೆಯನ್ನು ಆಯೋಜಿಸಿತ್ತು. ಭಾರತದ ಸೇನಾ ಮುಖ್ಯಸ್ಥ ಜನರಲ್ ಧೀರಜ್ ಸೇಥ್ ಅವರ...
ಬೆಂಗಳೂರುರಾಜ್ಯಸುದ್ದಿ

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ – ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – ಕಹಳೆ ನ್ಯೂಸ್

ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆಯಾದ ಕೇಸ್ ಸಂಬಂಧ ಜೈಲಧಿಕಾರಿಯನ್ನು ಸಸ್ಪೆಂಡ್ ಮಾಡಿ ಡಿಜಿಪಿ ಅಲೋಕ್ ಕುಮಾರ್  ಆದೇಶ ಹೊರಡಿಸಿದ್ದಾರೆ. ಕರ್ತವ್ಯ ಲೋಪ ಹಿನ್ನೆಲೆ ಜೈಲಿನ ಅಸಿಸ್ಟೆಂಟ್ ಸೂಪರಿಂಡೆಂಟ್ ಈರಣ್ಣ ರಂಗಾಪುರ ಅನ್ನು ಸಸ್ಪೆಂಡ್ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಖೈದಿಗಳು ಧರಿಸುವ ಬಿಳಿ ಬಟ್ಟೆ ಧರಿಸ್ತಿರಲಿಲ್ಲ. ಇದೀಗ ಅಂಡ್ರಾಯ್ಡ್ ಮೊಬೈಲ್ ಸಹ ಸಿಕ್ಕಿದೆ. ಹೀಗಾಗಿ ಕರ್ತವ್ಯ ಲೋಪದ ಕಾರಣ ಕೇಳಿ ಜೈಲು ಎಸ್‌ಪಿ...
ರಾಷ್ಟ್ರೀಯಸುದ್ದಿ

ಡಿವೈಡರ್ ಹಾರಿ ಕಾರಿಗೆ ಡಿಕ್ಕಿಯಾದ ಪಿಕಪ್ ಟ್ರಕ್ : ಭಾರತೀಯ ಮೂಲದ ಟೆಕ್ಕಿ ಸಾವು -ಕಹಳೆ ನ್ಯೂಸ್

ವಾಷಿಂಗ್ಟನ್: ಡಿವೈಡರ್ ಹಾರಿ ಕಾರಿಗೆ ಪಿಕಪ್ ಟ್ರಕ್ ಡಿಕ್ಕಿಯಾದ ಪರಿಣಾಮ ಭಾರತೀಯ ಮೂಲದ ಟೆಕ್ಕಿ ಸಾವನ್ನಪ್ಪಿರುವ ಘಟನೆ ಅಮೆರಿಕದ ಒಹಾಯೊದಲ್ಲಿ  ನಡೆದಿದೆ. ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶದ  ಜಿಲ್ಲೆಯ ಜೆಟ್ಟಿವಾರಪಲ್ಲಿ ಗ್ರಾಮದವರಾದ ದಿಲೀಪ್ ಕುಮಾರ್ ಬಂಗತವುಲ (26) ಎಂದು ಗುರುತಿಸಲಾಗಿದೆ. ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ದಿಲೀಪ್ ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳಿದ್ದು, ಕೆಂಟ್ ಸ್ಟೇಟ್ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ ಪದವಿ ಪೂರ್ಣಗೊಳಿಸಿದ್ದರು. ಒಹಾಯೊದ ಮಸಿಡೋನಿಯಾ ಪ್ರದೇಶದ ಇಂಟರ್‌ಸ್ಟೇಟ್ 480 ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ....
ದೆಹಲಿರಾಜ್ಯಸುದ್ದಿ

ಕೆಂಪುಕೋಟೆಯಲ್ಲಿ ಫಸ್ಟ್‌ ಟೈಮ್‌ ಮೊಳಗಲಿದೆ ‘ವಂದೇ ಮಾತರಂ’ ಗಾಯನ – ಕಹಳೆ ನ್ಯೂಸ್

ನವದೆಹಲಿ: ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ವಂದೇ ಮಾತರಂ ಗೀತೆಗೆ 150ನೇ ವರ್ಷ ತುಂಬುತ್ತಿರುವ ಹೊತ್ತಲ್ಲೇ ಈ ಬಾರಿಯ 80ನೇ ಸ್ವಾತಂತ್ರ್ಯೋತ್ಸವದಂದು ದೆಹಲಿಯ ಕೆಂಪುಕೋಟೆಯ ಮೇಲೆ `ವಂದೇ ಮಾತರಂ’ ಗೀತೆ ಮೊಳಗಲಿದೆ. ಪ್ರಧಾನಿ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ ಬಳಿಕ ರಾಷ್ಟ್ರಗೀತೆ ಜೊತೆಗೆ ವಂದೇ ಮಾತರಂ ಹಾಡಲಾಗುವುದು ಅಂತ ರಕ್ಷಣಾ ಇಲಾಖೆ ತಿಳಿಸಿದೆ. ಅಂದಹಾಗೆ, ಈ ಬಾರಿ ಮೋದಿ ಅವರ ಭಾಷಣದಲ್ಲಿ ಯುವಶಕ್ತಿ ಮತ್ತು 2047ರ ವಿಕಸಿತ ಭಾರತಕ್ಕೆ ಯಂಗ್...
ಕೃಷಿಬೆಂಗಳೂರುರಾಜಕೀಯರಾಜ್ಯಸುದ್ದಿ

ಬಿಡದಿ ಟೌನ್‌ಶಿಪ್: ಎಕರೆಗೆ ₹3 ಕೋಟಿಗೂ ಹೆಚ್ಚು ಪರಿಹಾರ? ಸಿಎಂ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ ನೀಡಲಾಗುವ ಪರಿಹಾರ ಮೊತ್ತವನ್ನು ಎಕರೆಗೆ ₹3 ಕೋಟಿಗೂ ಹೆಚ್ಚು ಹೆಚ್ಚಿಸುವ ಸಾಧ್ಯತೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ. ಜೆಡಿಎಸ್–ಬಿಜೆಪಿ ಜಂಟಿ ಪಾದಯಾತ್ರೆಯ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಭೂಮಿಗೆ ಬದಲಾಗಿ ಪರಿಹಾರ ಪಡೆಯಲು ಬಯಸುವವರಿಗೆ ಹೆಚ್ಚಿನ ಮೊತ್ತ ನೀಡುವ ಕುರಿತು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಈವರೆಗೆ ರಚಿಸಲಾದ ಸಮಿತಿಯ ಶಿಫಾರಸಿನ ಪ್ರಕಾರ, ಭೂಸ್ವಾಮಿಗಳಿಗೆ ಎಕರೆಗೆ...
ರಾಜಕೀಯರಾಷ್ಟ್ರೀಯಸುದ್ದಿ

‘ನಿಮ್ಮ ತಂದೆಯ ಮನೆಯಿಂದ ಶುದ್ಧ ಪೆಟ್ರೋಲ್ ಬರುತ್ತದೆಯೇ’: ಎಥೆನಾಲ್ ನೀತಿಯನ್ನು ಸಮರ್ಥಿಸಿಕೊಂಡ ಬಿಜೆಪಿ ಸಂಸದ ಜನಾರ್ದನ ಮಿಶ್ರಾ- ಕಹಳೆ ನ್ಯೂಸ್

ರೇವಾ: 'ನಿಮ್ಮ ತಂದೆಯ ಮನೆಯಿಂದ ಶುದ್ಧ ಪೆಟ್ರೋಲ್ ಬರುತ್ತದೆಯೇ': ಎಥೆನಾಲ್ ನೀತಿಯನ್ನು ಸಮರ್ಥಿಸಿಕೊಂಡ ಬಿಜೆಪಿ ಸಂಸದ ಜನಾರ್ದನ ಮಿಶ್ರಾ  ಎಥೆನಾಲ್ ಕೆಲಸ ಮಾಡುವುದಿಲ್ಲ, ಶುದ್ಧ ಪೆಟ್ರೋಲ್ ಕೆಲಸ ಮಾಡುತ್ತದೆ ಎಂದು ಹೇಳುವ ಚಳುವಳಿ ನಡೆಯುತ್ತಿದೆ. ನಿಮ್ಮ ತಂದೆಯ ಮನೆಯಿಂದ ಶುದ್ಧ ಪೆಟ್ರೋಲ್ ಬರುತ್ತದೆಯೇ? ದೇಶದಲ್ಲಿ ಶುದ್ಧ ಪೆಟ್ರೋಲ್ ಇಲ್ಲದಿದ್ದರೆ, ಅದು ಎಲ್ಲಿಂದ ಬರುತ್ತದೆ ಎಂದು ಬಿಜೆಪಿ ಸಂಸದ ಜನಾರ್ದನ ಮಿಶ್ರಾ ಪ್ರಶ್ನಿಸಿದ್ದಾರೆ. ದೇಶದಲ್ಲಿ ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಮಾಡುವ ಬಗ್ಗೆ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್‌ಗೆ ಇಂದು ಬಿಗ್‌ಡೇ : ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ- ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ (Darshan) ಇಂದು ಮಹತ್ವದ ದಿನ. ಪ್ರಕರಣದಲ್ಲಿ ಸಲ್ಲಿಕೆಯಾಗಿರುವ ಮಾಫಿ ಅರ್ಜಿಗಳ ವಿಚಾರವಾಗಿ ಬೆಂಗಳೂರಿನ CCH-59 ಕೋರ್ಟ್ ಇಂದು ಆದೇಶ ನೀಡುವ ಸಾಧ್ಯತೆ ಇದೆ. ಈ ಅರ್ಜಿಗಳ ವಿಚಾರಣೆ ಕೋರ್ಟ್‌ನಲ್ಲಿ ಮುಂದುವರಿಯಲಿದ್ದು, ಆದೇಶದ ಬಗ್ಗೆ ಕುತೂಹಲ ಹೆಚ್ಚಾಗಿದೆ. ಪ್ರಕರಣದಲ್ಲಿ ಆರೋಪಿ ಪ್ರದೋಷ್ ಮಾಫಿ ಅರ್ಜಿ ಸಲ್ಲಿಸಿದ್ದ. ಈ ಅರ್ಜಿಯನ್ನು ಸ್ವೀಕರಿಸುವಂತೆ ಪ್ರಾಸಿಕ್ಯೂಷನ್ ಪರ ವಕೀಲರು ವಾದಿಸಿದ್ದರು. ಆದರೆ, ದರ್ಶನ್ ಪರ ವಕೀಲ ಹಷ್ಮತ್ ಪಾಷಾ...
ಬೆಂಗಳೂರುರಾಜ್ಯಸುದ್ದಿ

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ನಾಪತ್ತೆ : ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌..!- ಕಹಳೆ ನ್ಯೂಸ್

ನೆಲಮಂಗಲ: ಐತಿಹಾಸಿಕ ಶಿವಗಂಗೆ ಬೆಟ್ಟಕ್ಕೆ ಟ್ರಕ್ಕಿಂಗ್ ಬಂದು ನಾಪತ್ತೆಯಾಗಿರುವ ಬೆಂಗಳೂರಿನ ಕಾಡುಗೋಡಿಯ ಟೆಕ್ಕಿ, ಮಧ್ಯಪ್ರದೇಶದ ಇಂದೋರ್ ಮೂಲದ ಅದ್ವೈತ್ ಉಪಾಧ್ಯಾಯ ಆತ್ಮಹತ್ಯೆ ಮಾಡಿಕೊಂಡಿರಬಹುದಾ ಎಂಬ ಶಂಕೆ ವ್ಯಕ್ತವಾಗಿದೆ. ಅದ್ವೈತ್ ಉಪಾಧ್ಯಾಯ ಅವರ ಹುಡುಕಾಟಕ್ಕಾಗಿ ಮೂರನೇ ದಿನವೂ ಕಾರ್ಯಾಚರಣೆ ಮುಂದುವರಿದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ತನಿಖೆಯ ವೇಳೆ ಕೆಲ ಸ್ಫೋಟಕ ವಿಚಾರಗಳು ಹೊರಬರುತ್ತಿದ್ದು, ಇದು ಪೂರ್ವನಿಯೋಜಿತ ಆತ್ಮಹತ್ಯೆ ಎಂಬ ಅನುಮಾನ ಬರತೊಡಗಿದೆ. ಪೋಲಿಸರು ಅದ್ವೈತ್ ಅವರ ಕಾಡುಗೋಡಿಯ ಮನೆಯಲ್ಲಿ ಪರಿಶೀಲನೆ...
1 5 6 7 8 9 364
Page 7 of 364