ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 48 ಗಂಟೆ ರಣಮಳೆ ಎಚ್ಚರಿಕೆ, ಆರೆಂಜ್ ಅಲರ್ಟ್
ಬೆಂಗಳೂರು : ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಲವು ದಿನಗಳಿಂದ ಸುರಿಯುತ್ತಿದ್ದ ಮಳೆಯು ಮುಂದಿನ ಎರಡರಿಂದ ಐದು ದಿನಗಳ ಕಾಲ ಮತ್ತೆ ಅಬ್ಬರಿಸಲಿದೆ. ಮೊಂಥಾ ಚಂಡಮಾರುತ ಇಂದು ಮಂಗಳವಾರ ಆಂಧ್ರಪ್ರದೇಶ ಕರಾವಳಿ ಭಾಗಕ್ಕೆ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದ ವಿವಿಧ ರಾಜ್ಯಗಳ ಜೊತೆಗೆ ಕರ್ನಾಟಕಕ್ಕೆ ಭಾರೀಯಿಂದ ಅತ್ಯಧಿಕ ಮಳೆ ಬರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಕರ್ನಾಟಕ ರಾಜ್ಯದಲ್ಲಿ ಕರಾವಳಿ, ಮಲೆನಾಡು ಹಾಗೂ ಇತರ...






