ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಕಿರುತೆರೆ ನಟ ಶ್ರೀಧರ್ ನಾಯಕ್ ಇನ್ನಿಲ್ಲ –ಕಹಳೆ ನ್ಯೂಸ್
ಬೆಂಗಳೂರು: ಜೀ ಕನ್ನಡದ 'ಪಾರು' ಧಾರಾವಾಹಿ, ಕಿಚ್ಚ ಸುದೀಪ್ ನಟನೆಯ 'ಮ್ಯಾಕ್ಸ್' ಅಂತಹ ಸಿನಿಮಾದಲ್ಲಿ ನಟಿಸಿದ್ದ ಶ್ರೀಧರ್ ನಾಯಕ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿರುತೆರೆ ಹಾಗೂ ಸಿನಿಮಾ ಎರಡರಲ್ಲೂ ನಟಿಸಿದ್ದ ಶ್ರೀಧರ್ ನಾಯಕ್ ಆರ್ಥಿಕ ಪರಿಸ್ಥಿತಿ ಕೂಡ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಹಾಯಕ್ಕಾಗಿ ನೆರವನ್ನು ಕೋರಿದ್ದರು. ಕಿರುತೆರೆ ತಾರೆಯರು ಹಾಗೂ ಜನರು ಇವರ ಪರಿಸ್ಥಿತಿಯನ್ನು ನೋಡಿ ನೆರವನ್ನು ನೀಡಿದ್ದರು. ಬೆಂಗಳೂರಿನ ಬ್ಯಾಪಿಸ್ಟ್ ಆಸ್ಪತ್ರೆಯಲ್ಲಿ ಶ್ರೀಧರ್ ನಾಯಕ್ ಚಿಕಿತ್ಸೆಯನ್ನು ಪಡೆಯುತ್ತಿದ್ದರು....






