ಪದ್ಯಾಣ ಬ್ರಹ್ಮಕಲಶಾಭಿಷೇಕ : ಮಾ. 15 ರಂದು ಶ್ರೀ ರುದ್ರನಮನಂ ಕಾರ್ಯಕ್ರಮ – ಕಹಳೆ ನ್ಯೂಸ್
ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ಪೂರ್ವಭಾವಿಯಾಗಿ ಶ್ರೀದೇವರ ಪ್ರೀತ್ಯರ್ಥ ಮಾರ್ಚ್ 15ರಂದು ಬೆಳಗ್ಗೆ 8 ಗಂಟೆಯಿಂದ ಸಾಮೂಹಿಕ ರುದ್ರ ಪಠಣದೊಂದಿಗೆ ಶ್ರೀರುದ್ರ ನಮನಂ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ . ಇದೇ ಸಂದರ್ಭ ಬೆಳಗ್ಗೆ 11 ಗಂಟೆಯಿಂದ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ, ಶ್ರೀ ಕ್ಷೇತ್ರದ ವೆಬ್ ಸೈಟ್ ಅನಾವರಣ ಕಾರ್ಯಕ್ರಮ ಮತ್ತು ಬ್ರಹ್ಮಕಲಶ...







