ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ ಹೊಂಡ ಕೊರೆದು ಸಲಗ ರಕ್ಷಿಸಿದ ಅರಣ್ಯ ಸಿಬ್ಬಂದಿ, ಎಂಟು ಗಂಟೆಗಳ ನಿರಂತರ ಕಾರ್ಯಾಚರಣೆ ಯಶಸ್ವಿ- ಕಹಳೆ ನ್ಯೂಸ್
ಮಂಗಳೂರು: ಅಕಸ್ಮಾತ್ ಪಾಳು ಬಾವಿಗೆ ಬಿದ್ದ ಒಂಟಿ ಸಲಗವೊಂದನ್ನು ಎಂಟು ಗಂಟೆಗಳ ಕಾರ್ಯಾಚರಣೆಯ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿ ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪೆರಾಜೆ ಗ್ರಾಮದಲ್ಲಿ ನಡೆದಿದೆ. ಪೆರಾಜೆ ಗ್ರಾಮದ ಕಲ್ಲಚರ್ಪ ಎಂಬಲ್ಲಿನ ನಿವಾಸಿ ರಾಮ ನಾಯ್ಕ ಎಂಬವರ ತೋಟದಲ್ಲಿ ಎಪ್ರಿಲ್ 12ರ ಭಾನುವಾರ ರಾತ್ರಿ 11 ಗಂಟೆ ವೇಳೆಗೆ ಆನೆ ಘೀಳಿಡುವ ಶಬ್ದ ಕೇಳಿಸಿತ್ತು. ಈ ಪ್ರದೇಶದಲ್ಲಿ ಆನೆಗಳು ಘೀಳಿಡೋದು ಸಾಮಾನ್ಯ ಎಂದುಕೊಂಡರೂ...







