ಬಪ್ಪಳಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ರಕ್ಷಾಬಂಧನ ಹಾಗೂ ಸಂಸ್ಕೃತೋತ್ಸವ ಬಾಂಧವ್ಯದ ಬೆಸುಗೆ, ಭರವಸೆಯ ಸಂಕೇತ ರಕ್ಷಾಬಂಧನ : ಆರ್. ಸಿ. ನಾರಾಯಣ್- ಕಹಳೆ ನ್ಯೂಸ್
ಪುತ್ತೂರು: ರಕ್ಷಾಬಂಧನವು ಕೇವಲ ರಾಖಿ ಕಟ್ಟುವ ಆಚರಣೆಯಲ್ಲ. ಅದು ಪ್ರೀತಿ, ಬಾಂಧವ್ಯ, ಪರಸ್ಪರ ನಂಬಿಕೆ ಹಾಗೂ ರಕ್ಷಣೆ - ಭರವಸೆಯ ಸಂಕೇತವಾಗಿದೆ. ನಾವು ಮಾಡುವ ಪ್ರತಿಯೊಂದು ಕಾರ್ಯದಲ್ಲೂ ಸಂತೋಷ, ಪ್ರಾಮಾಣಿಕತೆ ಹಾಗೂ ಸಮಾಜದ ಒಳಿತಿನ ಮನೋಭಾವ ಹೊಂದಿರಬೇಕು. ರಾಖಿಯ ದಾರವು ಸಹೋದರ–ಸಹೋದರಿಯರ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವುದರ ಜೊತೆಗೆ, ಕಷ್ಟ–ಸುಖಗಳಲ್ಲಿ ಒಬ್ಬರಿಗೊಬ್ಬರು ಬೆಂಬಲವಾಗಿ ನಿಲ್ಲುವ ಭರವಸೆಯ ಸಂಕೇತವಾಗಿದೆ ಧರ್ಮಾಭ್ಯುದಯ – ಧರ್ಮಶಿಕ್ಷಣ ತಾಲೂಕು ಸಮಿತಿಯ ಕಾರ್ಯದರ್ಶಿಯಾಗಿರುವ ಆರ್. ಸಿ. ನಾರಾಯಣ...






