ಏ.9ರಿಂದ 12ರವರೆಗೆ ಹನುಮಗಿರಿ ಬ್ರಹ್ಮಕಲಶೋತ್ಸವ ; ಸುದ್ದಿಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಹೇಳಿದ್ದೇನು..!? – ಕಹಳೆ ನ್ಯೂಸ್
ಪುತ್ತೂರು: ಹನುಮಗಿರಿಯ ಕೋದಂಡ ರಾಮ- ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಏ.9ರಿಂದ 12ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಹೊಸ ಕಲ್ಪನೆಯಡಿ ಸಮಾಜಕ್ಕೆ ಸಂದೇಶ ಸಾರುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಹೇಳಿದರು. ಹನುಮಗಿರಿ ಕ್ಷೇತ್ರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಹೊಸ ಗೋಪುರ ರಚನೆ, ಪಂಚಮುಖಿ ಆಂಜನೇಯ ಮತ್ತು ಕೋದಂಡರಾಮ ದೇವರ ಪೀಠಗಳಿಗೆ ಹಿತ್ತಾಳೆಯ ಕವಚ, ಸುಂದರ ವನ ನಿರ್ಮಾಣ ಮಾಡಲಾಗಿದೆ. ವಿಶಾಲವಾದ ಯಾಗ...






