ಕಡಿಮೆ ಬೆಲೆಗೆ ಚಿನ್ನದ ಆಸೆ ತೋರಿಸಿ ಉದ್ಯಮಿಯಿಂದ 20 ಲಕ್ಷ ದರೋಡೆ -ಕಹಳೆ ನ್ಯೂಸ್
ಚಿಕ್ಕಬಳ್ಳಾಪುರ/ದೇವನಹಳ್ಳಿ: ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇನೆ ಅಂತ ಆಸೆ ತೋರಿಸಿ ಹೈದರಾಬಾದ್ ಮೂಲದ ಉದ್ಯಮಿಯನ್ನ ಕರೆಸಿಕೊಂಡ ಖತರ್ನಾಕ್ ಗ್ಯಾಂಗ್ ಆತನ ಬಳಿ 20 ಲಕ್ಷ ರೂ. ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವೆಂಕಟಗಿರಿ ಕೋಟೆ ಗ್ರಾಮದ ಬಳಿ ನಡೆದಿದೆ. ಹೈದರಾಬಾದ್ ಮೂಲದ ವಿಶ್ವಪ್ರಸಾದ್ ರೆಡ್ಡಿ, ಕುಮಾರ್ ಎಂಬಾತನೊಂದಿಗೆ ವ್ಯವಹಾರ ಮಾಡಿದ್ದರು. ಕುಮಾರ್ ತನ್ನ ಬಳಿ ನಾಲ್ಕು ಕೆಜಿ ಚಿನ್ನದ ನಾಣ್ಯಗಳಿದ್ದು, ಕೇವಲ 20 ಲಕ್ಷಕ್ಕೆ...







