Sunday, June 14, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಯುವ ಸ್ನೇಹ ಸಂಭ್ರಮ – 2026 -ಕಹಳೆ ನ್ಯೂಸ್

ಕಲ್ಲಡ್ಕ : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಯುವ ಸ್ನೇಹ ಸಂಭ್ರಮ 2026 ಎಂಬ ಒಂದು ದಿನದ ಸ್ನೇಹ ಪ್ರವಾಸವು ಮೇ 24 ಭಾನುವಾರ ನೆರವೇರಿತು. .ಬೆಳಿಗ್ಗೆ 6.00 ಗಂಟೆಗೆ ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಕೊಡಾಜೆ ಅವರು ಎಲ್ಲರನ್ನು ಸ್ವಾಗತಿಸಿ ಸದಸ್ಯರ ಪ್ರವಾಸಕ್ಕೆ ಚಾಲನೆ ನೀಡಿದರು. ಬಪ್ಪನಾಡು ದುರ್ಗಾಪರಮೇಶ್ವರಿ ಕ್ಷೇತ್ರ, ಕಾಪು ಮಾರಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಬಳಿಕ ಬ್ರಹ್ಮಾವರದ ಸುಂದರ ಪ್ರಕೃತಿ...
ಸುದ್ದಿ

ತಡರಾತ್ರಿ ಪೊಲೀಸ್ ಸಿಬ್ಬಂದಿ ಮೇಲೆಯೇ ಪುಂಡರ ಅಟ್ಟಹಾಸ -ಕಹಳೆ ನ್ಯೂಸ್

ಮಂಗಳೂರು: ನಗರದಲ್ಲಿ ತಡರಾತ್ರಿ ಕರ್ತವ್ಯ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಭೀಕರ ಹಲ್ಲೆ ನಡೆಸಿರುವ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಡಿಕಲ್ ಉರ್ವ ಬಳಿಯ ನಾರಾಯಣ ಗುರು ಕೋ-ಆಪರೇಟಿವ್ ಸೊಸೈಟಿ ಬಳಿ ಈ ಕೃತ್ಯ ನಡೆದಿದ್ದು, ಸದ್ಯ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ ಸುಮಾರು 2:00 ಗಂಟೆಯ ಸುಮಾರಿಗೆ ಉರ್ವ ಠಾಣೆಯ ಪೊಲೀಸ್ ಸಿಬ್ಬಂದಿ ಎಂದಿನಂತೆ ನೈಟ್ ರೌಂಡ್ಸ್ ಕರ್ತವ್ಯದಲ್ಲಿದ್ದರು....
ದೆಹಲಿಸುದ್ದಿ

ಎರಡೇ ವಾರದಲ್ಲಿ 4ನೇ ಬಾರಿಗೆ ತೈಲ ಶಾಕ್‌ : ಮತ್ತೆ ಪೆಟ್ರೋಲ್‌, ಡೀಸೆಲ್‌ ದರ ತಲಾ 2 ರೂ. ಏರಿಕೆ-ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರ ಬೆಳ್ಳಂಬೆಳಗ್ಗೆ ದೇಶದ ಗ್ರಾಹಕರಿಗೆ ʻತೈಲ ಶಾಕ್ʼ‌ ಕೊಟ್ಟಿದೆ.  ಪೆಟ್ರೋಲ್‌  ಮೇಲಿನ ಬೆಲೆ ಪ್ರತಿ ಲೀಟರ್‌ಗೆ 2.61 ರೂ. ಮತ್ತು ಡೀಸೆಲ್‌ ಬೆಲೆ  ಪ್ರತಿ ಲೀಟರ್‌ಗೆ 2.71 ರೂ. ಏರಿಕೆ ಮಾಡಿದೆ. ಇದು ಕಳೆದ 10 ದಿನಗಳಲ್ಲಿ 4ನೇ ಬಾರಿಗೆ ಮಾಡಿದ ದರ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ  ಪೆಟ್ರೋಲ್ ಬೆಲೆ ಈಗ ಲೀಟರ್‌ಗೆ 110.89 ರೂ. ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ 98.80 ರೂ.ಗೆ ತಲುಪಿದೆ. ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ...
ಉಡುಪಿಸುದ್ದಿ

ಭಟ್ಕಳ ನದಿ ದುರಂತ : ಸಾವಿನ ಸಂಖ್ಯೆ 11ಕ್ಕೆ ಏರಿಕೆ -ಕಹಳೆ ನ್ಯೂಸ್

ಕಾರವಾರ: ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಭಾನುವಾರ 10 ಜನರ ಮೃತದೇಹ ಪತ್ತೆಯಾಗಿದ್ದವು, ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನ ಮಾದೇವ್ ನಾಯ್ಕ್ ಎಂದು ಗುರುತಿಸಲಾಗಿದೆ. ನದಿಯಲ್ಲಿ ನಾಪತ್ತೆಯಾಗಿದ್ದವರಿಗಾಗಿ ಇಂದು ಬೆಳಿಗ್ಗೆ 8 ಗಂಟೆಯಿಂದ ಎನ್‌ಡಿಆರ್‌ಎಫ್ ತಂಡ ಶೋಧ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಕಾಣೆಯಾಗಿದ್ದ ಮಾದೇವ್ ನಾಯ್ಕ್ ಅವರ ಮೃತದೇಹ ತಟ್ಟೆಹಕ್ಕಲು ನದಿಯ ಅಳವೆಯಲ್ಲಿ ಪತ್ತೆಯಾಗಿದೆ. ನದಿಯ ನೀರಿನಲ್ಲಿ...
ಸುದ್ದಿ

114 ರಫೇಲ್ ಜೆಟ್‌ ಖರೀದಿಗೆ ವಿನಂತಿ ಪತ್ರ ಅಂತಿಮಗೊಳಿಸಿದ ಭಾರತ :ಶೀಘ್ರದಲ್ಲೇ ಫ್ರಾನ್ಸ್‌ಗೆ ಕಳುಹಿಸಲು ನಿರ್ಧಾರ -ಕಹಳೆ ನ್ಯೂಸ್

ನವದೆಹಲಿ/ಪ್ಯಾರಿಸ್‌: ರಫೇಲ್‌ ಯುದ್ಧ ವಿಮಾನಗಳ ಖರೀದಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಭಾರತವೂ 114 ರಫೇಲ್‌ ಯುದ್ಧ ವಿಮಾನಗಳ ಖರೀದಿಗಾಗಿ ವಿನಂತಿ ಪತ್ರವನ್ನು  ಅಂತಿಮಗೊಳಿಸಿದ್ದು, ಶೀಘ್ರದಲ್ಲೇ ಫ್ರಾನ್ಸ್‌ಗೆ ಕಳುಹಿಸಲು ನಿರ್ಧರಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಈ 114 ಜೆಟ್‌ಗಳ ಪೈಕಿ 90 ರಫೇಲ್‌ ಜೆಟ್‌ಗಳನ್ನು ಡಸಾಲ್ಟ್ ಏವಿಯೇಷನ್ ​​ಮತ್ತು ಭಾರತೀಯ ಕಂಪನಿಯ ಸಹಯೋಗದಲ್ಲಿ ಭಾರತದಲ್ಲೇ ತಯಾರಿಸಲಿದೆ. ಫ್ರಾನ್ಸ್‌ (France) ವಿನಂತಿ ಪತ್ರಕ್ಕೆ ಪ್ರತಿಕ್ರಿಯಿಸಿದ ಕೂಡಲೇ ಭಾರತವು ಜೆಟ್‌ಗಳ ಸ್ವಾಧೀನಕ್ಕಾಗಿ...
ಜಿಲ್ಲೆಪುತ್ತೂರುಸುದ್ದಿ

ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಳಿಗೆ ಎಸ್.ಎಲ್.ವಿ. ಬುಕ್ ಹೌಸ್ ನಲ್ಲಿ “ಬ್ಯಾಕ್ ಟೂ ಸ್ಕೂಲ್ ಆಫರ್” ಆರಂಭ -ಕಹಳೆ ನ್ಯೂಸ್

ಪುತ್ತೂರು : ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಾರಾಟ ಮಳಿಗೆ ಎಸ್.ಎಲ್.ವಿ. ಬುಕ್ ಹೌಸ್ ನಲ್ಲಿ ಬ್ಯಾಕ್ ಟೂ ಸ್ಕೂಲ್ ಆಫರ್ ಪ್ರಾರಂಭಗೊಂಡಿದೆ. ವೈಟ್ ಸ್ಪೇಸ್' ನೋಟ್ ಪುಸ್ತಕಗಳಲ್ಲಿ 25% ಡಿಸ್ಕೌಂಟ್ ಮತ್ತು ಇತರ ಸಾಮಾಗ್ರಿಗಳಲ್ಲಿ 4೦% ವರೆಗೆ ರಿಯಾಯಿತಿ ಬ್ಯಾಕ್ ಟೂ ಸ್ಕೂಲ್ ಆಫರ್ ನಲ್ಲಿ ಲಭ್ಯವಿದೆ. ಕರ್ನಾಟಕದ ರಾಜ್ಯಾದ್ಯಂತ ಪುತ್ತೂರು, ಮಂಗಳೂರಿನ ಬಿಜೈ, ಮಾರ್ನಮಿಕಟ್ಟೆ, ಮೇರಿಹಿಲ್, ಮೂಡಬಿದ್ರೆ, ಮೈಸೂರು, ಚಾಮರಾಜನಗರ, ಕುಶಾಲನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್ ಎಲ್ ವಿ...
ಬೆಂಗಳೂರುರಾಜ್ಯಸುದ್ದಿ

ವೃದ್ಧೆಗೆ ಡಿಜಿಟಲ್ ಅರೆಸ್ಟ್ : ಬರೋಬ್ಬರಿ 24 ಕೋಟಿ ರೂ. ದೋಚಿದ ಸೈಬರ್ ವಂಚಕರು -ಕಹಳೆ ನ್ಯೂಸ್

ಬೆಂಗಳೂರು: ಮನಿ ಲಾಂಡರಿಂಗ್  ಹೆಸರಲ್ಲಿ ಡಿಜಿಟಲ್ ಅರೆಸ್ಟ್ ಮಾಡಿ ಸೈಬರ್ ವಂಚಕರು ವೃದ್ಧೆ ಬಳಿ 24 ಕೋಟಿ ರೂ. ದೋಚಿರುವ ಘಟನೆ ಬೆಂಗಳೂರಿನಲ್ಲಿ  ನಡೆದಿದೆ. ಶಿವಾಜಿನಗರ ನಿವಾಸಿಯಾಗಿರುವ ವೃದ್ಧೆ ಲಕ್ಷ್ಮೀ ರಾಮಮೂರ್ತಿಗೆ ಡಿಜಿಟಲ್ ಅರೆಸ್ಟ್ ಮಾಡಲಾಗಿದೆ. ಆಸ್ತಿ ಮಾರಿದ್ದರಿಂದ ವೃದ್ಧೆಗೆ ಕೋಟ್ಯಂತರ ರೂ. ಹಣ ಬಂದಿತ್ತು. ಇವರ ಬ್ಯಾಂಕ್ ಟ್ರಾನ್ಸಾಕ್ಷನ್ ಬಗ್ಗೆ ಮಾಹಿತಿ ತಿಳಿದ ಸೈಬರ್ ವಂಚಕರು ಕಳೆದ ಜನವರಿಯಿಂದ ಮೇವರೆಗೆ ಮನಿ ಲಾಂಡರಿಂಗ್ ಹೆಸರಲ್ಲಿ ಡಿಜಿಟಲ್ ಅರೆಸ್ಟ್ ಮಾಡಿದ್ದಾರೆ....
ಬೆಂಗಳೂರುರಾಜ್ಯಸುದ್ದಿ

ವರದಕ್ಷಿಣೆ ಕಿರುಕುಳ ಆರೋಪ : ನೇಣು ಬಿಗಿದು ಕಾನ್‌ಸ್ಟೇಬಲ್ ಪತ್ನಿ ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು: ಪೊಲೀಸ್ ಕ್ವಾರ್ಟಸ್‌ನಲ್ಲೇ ನೇಣುಬಿಗಿದುಕೊಂಡು ಕಾನ್‌ಸ್ಪೇಬಲ್ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆ.ಆರ್.ಪುರ (KR Pura) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ. ಲಕ್ಷ್ಮೀ ಪ್ರಿಯಾ (26) ಆತ್ಮಹತ್ಯೆಗೆ ಶರಣಾದ ಮಹಿಳೆ. ಮೃತಳ ತಂದೆ ಕುಮಾರ್ ಆರಾಧ್ಯ ಅವರು ನೀಡಿದ ದೂರಿನ ಮೇರೆಗೆ ಹೆಚ್‌ಎಎಲ್ ಠಾಣೆಯ  ಕಾನ್‌ಸ್ಟೇಬಲ್ ರಾಜೇಶ್ ಹಾಗೂ ತಂದೆ-ತಾಯಿ ಸೇರಿದಂತೆ ನಾಲ್ವರ ವಿರುದ್ಧ ವರದಕ್ಷಿಣೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸರು...
1 25 26 27 28 29 3,392
Page 27 of 3392