Sunday, June 14, 2026

ಸುದ್ದಿ

ದೆಹಲಿಶಿಕ್ಷಣಸುದ್ದಿ

NEET UG ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌ : ಎನ್‌ಟಿಎ ಎಕ್ಸ್‌ಪರ್ಟ್‌ ಬಂಧನ-ಕಹಳೆ ನ್ಯೂಸ್

ನವದೆಹಲಿ: NEET UG 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಟಿಎ ತಜ್ಞರೊಬ್ಬರನ್ನು ಸಿಬಿಐ ಬಂಧಿಸಿದೆ. ಮಹಾರಾಷ್ಟ್ರದ ಪುಣೆಯಲ್ಲಿರುವ ಸೇಥ್ ಹಿರಾಲಾಲ್ ಸರಾಫ್ ಪ್ರಶಾಲಾದಲ್ಲಿ ಉದ್ಯೋಗದಲ್ಲಿರುವ ಆರೋಪಿ ಮನೀಷಾ ಸಂಜಯ್ ಹವಾಲ್ದಾರ್, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತಜ್ಞರಾಗಿ ನೇಮಕಗೊಂಡಿದ್ದರು. ಕೇಂದ್ರೀಯ ಸಂಸ್ಥೆಯ ವಿಚಾರಣೆಯ ನಂತರ ಆರೋಪಿಯನ್ನು ಬಂಧಿಸಲಾಗಿದೆ. ಮೇ 16 ರಂದು ಅರೆಸ್ಟ್‌ ಆದ ಸಹ-ಆರೋಪಿ ಮನೀಷಾ ಮಾಂಧರೆ ಜೊತೆ ನೀಟ್ ಯುಜಿ ಪರೀಕ್ಷೆಯ ಹಲವಾರು ಭೌತಶಾಸ್ತ್ರ ಪ್ರಶ್ನೆಗಳನ್ನು...
ಸುದ್ದಿ

ಬಾದಾಮಿ ಅಗಸ್ತ್ಯ ಹೊಂಡದಲ್ಲಿ ಈಜಲು ಹೋದ ಯುವಕ ನಾಪತ್ತೆ-ಕಹಳೆ ನ್ಯೂಸ್

ಬಾಗಲಕೋಟೆ: ಜಿಲ್ಲೆಯ ಬಾದಾಮಿ ಪಟ್ಟಣದ ಐತಿಹಾಸಿಕ ಅಗಸ್ತ್ಯ ಹೊಂಡದಲ್ಲಿ  ಈಜಲು ಹೋಗಿ 19 ವರ್ಷದ ಯುವಕ ನಾಪತ್ತೆಯಾಗಿರುವ ಘಟನೆ ನಡೆದಿದೆ. ಬಾದಾಮಿಯ ಜಯನಗರ ನಿವಾಸಿ ಮನೋಜ್ ಪ್ರಕಾಶ್ ಕಂಬ್ಳೇಕರ್ (19) ನಾಪತ್ತೆಯಾದ ಯುವಕ. ಮನೋಜ್ ಹೊಂಡದ ಬದಿ ತನ್ನ ಬಟ್ಟೆಗಳನ್ನು ಕಳಚಿಟ್ಟು, ಈಜಲು ಹೊಂಡಕ್ಕೆ ಹಾರಿದ್ದಾನೆ ಎನ್ನಲಾಗಿದೆ. ಮನೋಜ್ ನೀರಿನಿಂದ ಮೇಲಕ್ಕೆ ಬರದೇ ಇದ್ದಾಗ ಸಾರ್ವಜನಿಕರು 112 ಪೊಲೀಸ್ ಕರೆ ಮಾಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
ದೆಹಲಿವಾಣಿಜ್ಯಸುದ್ದಿ

ವಾಹನ ಸವಾರರಿಗೆ ಮತ್ತೆ ಶಾಕ್; ಪೆಟ್ರೋಲ್ 87, ಡೀಸೆಲ್ 91 ಪೈಸೆ ಏರಿಕೆ-ಕಹಳೆ ನ್ಯೂಸ್

ನವದೆಹಲಿ: ವಾಹನ ಸವಾರರಿಗೆ ಮತ್ತೆ ಶಾಕ್ ಎದುರಾಗಿದೆ. 10 ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ (Petrol-Diesel Price Hike) ಏರಿಕೆ ಮಾಡಲಾಗಿದೆ. ಶನಿವಾರ ಪೆಟ್ರೋಲ್ 87 ಪೈಸೆ ಮತ್ತು ಡೀಸೆಲ್ 91 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ. ಹಾಗೂ ಡೀಸೆಲ್ ಬೆಲೆ 95.04 ರೂ. ಆಗಿದೆ. ಪೆಟ್ರೋಲ್ ಬೆಲೆ ಈಗ ಲೀಟರ್‌ಗೆ 99.51 ರೂ., ಡೀಸೆಲ್ ಬೆಲೆ ಲೀಟರ್‌ಗೆ 92.49 ರೂ. ಆಗಿದೆ. ಮಧ್ಯಪ್ರಾಚ್ಯ...
ಜಿಲ್ಲೆಸುದ್ದಿ

ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ : ಒಂದೇ ಕುಟುಂಬದ ಐವರ ದುರ್ಮರಣ -ಕಹಳೆ ನ್ಯೂಸ್

ಕಲಬುರಗಿ: ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಕ್ರಾಸ್ ಬಳಿ ನಡೆದಿದೆ. ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಶಾ (48), ಮೈಬೂಬ್ ಅಲಿ (45), ರಸೂಲ್ ಬೀ (42), ಫಾತೀಮಾ ಅಲೀ (38) ಮೃತರು. ಮೃತರೆಲ್ಲರೂ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದವರು. ಲಾಡ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಅಪಘಾತ ಸಂಭವಿಸಿದ್ದು,...
ದೆಹಲಿರಾಜ್ಯಸುದ್ದಿ

ಇಂದು 19ನೇ ಉದ್ಯೋಗ ಮೇಳ : ಮೋದಿಯಿಂದ 50,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ -ಕಹಳೆ ನ್ಯೂಸ್

ನವದೆಹಲಿ: ಇಂದು 19ನೇ ಆವೃತ್ತಿಯ ಉದ್ಯೋಗ ಮೇಳ ನಡೆಯಲಿದ್ದು, 51,000ಕ್ಕೂ ಹೆಚ್ಚು ಯುವಕರಿಗೆ ಪ್ರಧಾನಿ ನರೇಂದ್ರ ಮೋದಿಯವರು ನೇಮಕಾತಿ ಪತ್ರ ವಿತರಿಸಲಿದ್ದಾರೆ. ಈ ರೋಜ್‌ಗಾರ್ ಮೇಳ ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗಲಿದ್ದು, ದೇಶದಲ್ಲಿ ಒಟ್ಟು 42 ಸ್ಥಳಗಳಲ್ಲಿ ನಡೆಯಲಿದೆ. ಪ್ರಧಾನಿ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ...
ಜಿಲ್ಲೆಸುದ್ದಿ

ಇಂದಿನಿಂದ 4 ದಿನ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಭಾರತ ಪ್ರವಾಸ -ಕಹಳೆ ನ್ಯೂಸ್

ಕೋಲ್ಕತ್ತಾ: ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರತ (India) ಪ್ರವಾಸ ಮಾಡಲಿದ್ದು, ಮೊದಲ ಹಂತವಾಗಿ ಕೋಲ್ಕತ್ತಾಗೆ ಭೇಟಿ ನೀಡಿದ್ದಾರೆ. ಭಾರತದಲ್ಲಿರುವ ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ (Sergio Gor) ಅವರು ಮಾರ್ಕೊ ರೂಬಿಯೊ ಅವರನ್ನು ಸ್ವಾಗತಿಸಿದರು. 2012ರಲ್ಲಿ ಹಿಲ್ಲರಿ ಕ್ಲಿಂಟನ್ ಕೊಲ್ಕತ್ತಾಗೆ ಭೇಟಿ ನೀಡಿದ್ದರು. ಇದಾಗಿ 14 ವರ್ಷಗಳ ನಂತರ ಅಮೆರಿಕದ ಪ್ರತಿನಿಧಿ ಮಾರ್ಕೊ ರೂಬಿಯೋ ಕೋಲ್ಕತ್ತಾಗೆ ಭೇಟಿ ನೀಡಿದ್ದಾರೆ. ಕೊಲ್ಕತ್ತಾದ ಮಿಷನರೀಸ್...
ಕೊಡಗುಜಿಲ್ಲೆಮಡಿಕೇರಿಸುದ್ದಿ

ದುಬಾರೆ ದುರಂತ : ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತ ಕೇಸ್ -ಕಹಳೆ ನ್ಯೂಸ್

ಮಡಿಕೇರಿ: ದುಬಾರೆ ಆನೆ ಕ್ಯಾಂಪ್‌ನಲ್ಲಿ  ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ  ವಿರುದ್ಧ ಉಪ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಸೋಮವಾರಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಎ ಹಾಗೂ ಕುಶಾಲನಗರ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ ರಕ್ಷಿತ್ ವಿರುದ್ಧ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಪ್ರಕರಣ ದಾಖಲಿಸಿದ್ದಾರೆ. ಮೇ 18ರಂದು ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ನಡುವೆ ನಡೆದ...
ಜಿಲ್ಲೆಬೆಳಗಾವಿರಾಜ್ಯಸುದ್ದಿ

ಮನೆಯಲ್ಲಿ ಗುಂಡು ಹಾರಿಸಿಕೊಂಡು ವೈದ್ಯ ದಿನೇಶ್ ಭಟ್ಕಳ್ ಆತ್ಮಹತ್ಯೆ -ಕಹಳೆ ನ್ಯೂಸ್

ಬೆಳಗಾವಿ: ಕೆಎಲ್‌ಇ ಆಸ್ಪತ್ರೆಯಲ್ಲಿ ಕಳೆದ 40 ವರ್ಷಗಳಿಂದ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ. ದಿನೇಶ್ ಭಟ್ಕಳ್  ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾ.ದಿನೇಶ್ ಭಟ್ಕಳ್ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದವರು. ಆದರೆ, ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಸುಮಾರು 40 ವರ್ಷಗಳ ಕಾಲ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಇವರಿಗೆ ಶ್ವಾಸಕೋಶ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಚಿಕಿತ್ಸೆಗಾಗಿಯೇ ತಮ್ಮೂರು ಬಿಟ್ಟು ಬೆಳಗಾವಿಯ ಟಿಳಕವಾಡಿಯ ಮಂಡೋಲಿ...
1 27 28 29 30 31 3,392
Page 29 of 3392