Saturday, March 14, 2026

ಸುದ್ದಿ

ಸುದ್ದಿ

ಉಡುಪಿಯ ಧರ್ಮಸಂಸದ್ ಕಾರ್ಯಕ್ರಮಕ್ಕೆ ಪುತೂರು ಜಿಲ್ಲೆಯಿಂದ 25 ಸಾವಿರ ಮಂದಿ | ಮುರಳಿಕೃಷ್ಣ ಹಸಂತ್ತಡ್ಕ ಪತ್ರಿಕಾ ಗೋಷ್ಠಿ

  ಪುತ್ತೂರು: ವಿಶ್ವಹಿಂದೂ ಪರಿಷತ್, ಬಜರಂಗದಳದ. ವತಿಯಿಂದ ಉಡುಪಿಯಲ್ಲಿ ನ.24 ರಿಂದ ನಡೆಯಲಿರುವ ಧರ್ಮಸಂಸದ್ ಕಾರ್ಯಕ್ರಮಕ್ಕೆ ಪುತ್ತೂರು ಜಿಲ್ಲೆಯಿಂದ ಸುಮಾರು 25ಸಾವಿರ ಮಂದಿ ಹಿಂದೂ ಬಾಂಧವರು ತೆರಳಲಿದ್ದಾರೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಗೋ ರಕ್ಷಾ ಪ್ರಮುಖ್ ಮುರಳಿ ಕೃಷ್ಣ ಹಸಂತಡ್ಕ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಮುಂಬಯಿ ಪೊವ್ರಾಯ ಸಾಂದೀಪನಿ ಸಾಧನಾಲಯದಲ್ಲಿ 1964ರ ಆಗಸ್ಟ್ 29 ,ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ದಿನ ವಿಶ್ವ ಹಿಂದೂ ಪರಿಷದ್ ಜನ್ಮತಾಳಿತು.1984 ಎಪ್ರಿಲ್ 7,...
ಸುದ್ದಿ

ಅಯೋಧ್ಯೆಯಲ್ಲಿ ನಡೆದಿದೆ ಒಂದು ವಿಸ್ಮಯಕಾರಿ ಪವಾಡ | ಇದು ರಾಮ ಮಂದಿರ ನಿರ್ಮಾಣದ ಮುನ್ಸೂಚನೆಯಾ ?

ನವದೆಹಲಿ : ಶ್ರೀರಾಮಚಂದ್ರ ನೆಲೆಸಿದ ಅಯೋಧ್ಯೆಯಲ್ಲಿ ಒಂದು ಮಹಾನ್​​ ಚಮತ್ಕಾರ ನಡೆದಿದೆ. ಮರ್ಯಾದಾ ಪುರುಷೋತ್ತಮ ಕಾಲಿಟ್ಟ ನೆಲದಲ್ಲಿ ಇತಿಹಾಸವೇ ಬೆರಗಾಗುವಂಥಾ ಪವಾಡ ನಡೆದಿದೆ. ಅದು ಅಂತಿಂಥಾ ಪವಾಡವಲ್ಲ. ಯಾರೂ ಊಹಹಿಸದಂಥಾ ಮಹಾ ಪವಾಡ ಅದು. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ವಿಚಾರ ಚರ್ಚೆ ನಡೆಯುತ್ತಿತ್ತು. ಇಡೀ ದೇಶಾದ್ಯಂತ ಈಗ ರಾಮಮಂದಿರ ನಿರ್ಮಾಣದ್ದೇ ಸದ್ದು. ರಾಮಮಂದಿರ ಆಗಲೇಬೇಕು ಅನ್ನೋದೇ ಚರ್ಚೆ. ಪರ ವಿರೋಧಗಳ ನಡುವೇನೂ ಮಂದಿರ ನಿರ್ಮಾಣಕ್ಕೆ ಬೇಕಾದ ತಯಾರಿ...
ಸುದ್ದಿ

ಧರ್ಮಸಂಸತ್‌ನಲ್ಲಿ ರಾಮಮಂದಿರ ನಿರ್ಮಾಣ ನಿರ್ಣಯ – ತೊಗಾಡಿಯಾ

ಮಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಚಾರವನ್ನು ಧರ್ಮಸಂಸತ್ತಿನಲ್ಲೇ ನಿರ್ಧರಿಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ಭಾಯ್ ತೊಗಾಡಿಯಾ ಹೇಳಿದ್ದಾರೆ. ಧರ್ಮಸಂಸತ್ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ಅವರು, ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು. ಉಡುಪಿಯಲ್ಲಿ ನಡೆಯುವ ಧರ್ಮ ಸಂಸತ್ತಿನಲ್ಲಿ ಅಸ್ಪೃಶ್ಯತೆ, ಗೋ ರಕ್ಷಣೆ, ಗೋ ರಕ್ಷಣೆ ಕುರಿತ ಕಾನೂನು ಚರ್ಚೆಯಾಗಲಿದೆ. ರೈತರಿಗೆ ಪೂರಕ ಯೋಜನೆ ಕುರಿತ ವಿಷಯವೂ ಚರ್ಚೆ ನಡೆಯಲಿದೆ. ರಾಮ ಮಂದಿರ ನಿರ್ಮಾಣ ವಿಚಾರದ ಕುರಿತೂ ಚರ್ಚೆ...
ಸುದ್ದಿ

ಕುಕ್ಕೆ ಕ್ಷೇತ್ರದಲ್ಲಿ ಚಂಪಾಷಷ್ಠಿಯ ಸಂಭ್ರಮ | ಕಹಳೆ ನ್ಯೂಸ್

ಸುಳ್ಯ: ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿಯ ಸಂಭ್ರಮ ಜೋರಾಗಿದೆ. ಪಂಚಮಿಯ ಹಿನ್ನಲೆಯಲ್ಲಿ ಮಧ್ಯಾಹ್ನ ಕ್ಷೇತ್ರದಲ್ಲಿ ಎಡೆ ಮಡಸ್ನಾನ ನಡೆಯಲಿದೆ. ಮಧ್ಯಾಹ್ನ ವೇಳೆಗೆ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ ಬಳಿಕ ಎಡೆ ಮಡಸ್ನಾನ ನಡೆಯಿತು. ಇನ್ನೂರಕ್ಕಿಂತ ಹೆಚ್ಚು ಭಕ್ತರು ಎಡೆ ಮಡಸ್ನಾನ ಸೇವೆಯಲ್ಲಿ ಪಾಲ್ಗೊಂಡರು. ದೇವರ ನೈವೇದ್ಯದಲ್ಲಿ ಭಕ್ತರು ಉರುಳು ಸೇವೆ ನಡೆಸಿದ್ದು, ಯಾವುದೇ ಗೊಂದಲವಾಗದಂತೆ ಕ್ಷೇತ್ರದ ಆಡಳಿತ ಮಂಡಳಿ ಕ್ರಮ ಕೈಗೊಂಡಿತ್ತು. ಚಂಪಾಷಷ್ಠಿಯ ಹಿನ್ನಲೆಯಲ್ಲಿ ಕುಮಾರಾಧಾರ ನದಿ ದಡದಿಂದ...
ಸುದ್ದಿ

ಅಪುಲ್ ಆಳ್ವ ಇರಾಗೆ ಯಕ್ಷಸೇನಾ ಸಾಧಕ ಪ್ರಶಸ್ತಿ

ಮಂಗಳೂರು : ಛಾಯಾಗ್ರಹಣದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕವನ್ನು ಗಳಿಸಿದ ಅಪುಲ್ ಆಳ್ವಾ ಇರಾರಿಗೆ ಯಕ್ಷಸೇನಾ ಮುಂಬಯಿ ಸಂಸ್ಥೆಯು ಕೊಡಮಾಡುವ ಯಕ್ಷಸೇನಾ ಸಾಧಕ ಪ್ರಶಸ್ತಿ ಲಭಿಸಿದೆ. ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿರುವ ಯಕ್ಷಸೇನೆ ಮುಂಬಯಿ ಇದರ ಯಕ್ಷಮಹೋತ್ಸವ ೧೦೧೭ ಕಾರ್ಯಕ್ರಮವು ಡಿ.೨೫ ರಂದು ಮುಂಬಯಿಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಕಾರ್ಯಕ್ರಮದ ವ್ಯವಸ್ಥಾಪಕರಾದ ಯುವರಾಜ್ ಶೆಟ್ಟಿ ಹೆರಂಜೆ, ವೇಣುಗೋಪಾಲ್ ಶೆಟ್ಟಿ ತಿಳಿಸಿದ್ದಾರೆ....
ಸುದ್ದಿ

ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಾಣಗೊಂಡ ಮನೆಗಳ ಹಸ್ತಾಂತರ | ಮೂರು ಬಡಕುಟುಂಬಗಳಿಗೆ ಬೆಳಕಾದ ಅಶೋಕ್ ರೈ

ಪುತ್ತೂರು : ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಿ.ಜೆ ಪಿ. ಮುಖಂಡ ಪುತ್ತೂರಿನ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರ ನೇತ್ರತ್ವದಲ್ಲಿ ಮುಂಡೂರಿನಲ್ಲಿ ನಿರ್ಮಾಣಗೊಂಡ ಮೂರು ಮನೆಗಳ ಹಸ್ತಾಂತರ ಕಾರ್ಯಕ್ರಮವು ಇಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ವಹಿಸಿದ್ದರು.ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಜಿ.ಪಂ ಅದ್ಯಕ್ಷೆ ಮೀನಾಕ್ಷಿ ಶಾಂತಿಗೋಡು,ತಾ.ಪಂ ಅದ್ಯಕ್ಷೆ ಭವಾನಿ ಚಿದಾನಂದ,ತಾ.ಪಂ ಸದಸ್ಯರಾದ ಶಿವರಂಜನ್ ಮೀನಾಕ್ಷಿ ಮಂಜುನಾಥ ,ಎಪಿಎಂಸಿ...
ಸುದ್ದಿ

ಐತಿಹಾಸಿಕ ಧರ್ಮ ಸಂಸದ್ ಗೆ ಸಕಲ ಸಿದ್ಧತೆ | ಉಡುಪಿಯತ್ತ ದಿಗ್ಗಜರ ಹೆಜ್ಜೆ.

ಉಡುಪಿ: ಉಡುಪಿಯ ಧರ್ಮ ಸಂಸದ್‌ ಅಧಿವೇಶನಕ್ಕಾಗಿ ಸಂತರ ಆಗಮನ ಆರಂಭವಾಗುತ್ತಿದ್ದಂತೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ವಿಶ್ವ ಹಿಂದೂ ಪರಿಷದ್‌ ನಾಯಕರ ಆಗಮನವೂ ಆರಂಭವಾಗಿದೆ. ಜೀವೇಶ್ವರ ಮಿಶ್ರಾ, ಅಶೋಕ್‌ ತಿವಾರಿ, ಕೋಟೇಶ್ವರ ಶರ್ಮ ಸೋಮವಾರವೇ ಉಡುಪಿಗೆ ಆಗಮಿಸಿ ತಯಾರಿಯ ಪರಿಶೀಲನೆ ನಡೆಸುತ್ತಿದ್ದಾರೆ. ಉತ್ತರ ಭಾರತದವರಾದ ಗುಜರಾತ್‌ನ ಅವಿಚಲಾನಂದದಾಸ್‌, ಹರಿದ್ವಾರದ ಚಿನ್ಮಯಾನಂದ ಸ್ವಾಮೀಜಿ, ರಾಮಾನಂದಾಚಾರ್ಯ, ಮಹಾರಾಷ್ಟ್ರದ ಗೋವಿಂದಗಿರಿ, ಕರ್ನಾಟಕದ ಆದಿಚುಂಚನಗಿರಿ ಮಠಾಧೀಶರು, ಶ್ರೀಶೈಲಂ ಮಠಾಧೀಶರು, ತುಮಕೂರು ಸಿದ್ಧಗಂಗಾ ಮಠದ ಕಿರಿಯ ಸ್ವಾಮೀಜಿ, ಬೇಲಿ...
ಸುದ್ದಿ

ಧರ್ಮ ಸಂಸದ್ ಭಾರಿ ಬಿಗಿ ಭದ್ರತೆ | ” ಕೇಸರಿ ರಕ್ಷಕ್‌ ಪಡೆ ” ನಿರ್ವಹಿಸಲಿದೆ ಸಂಪೂರ್ಣ ಹೊಣೆ

ಉಡುಪಿ: ಧರ್ಮ ಸಂಸದ್‌ಗೆ ದೇಶದೆಲ್ಲೆಡೆಯಿಂದ ಆಗಮಿಸುವ ಸರಿಸುಮಾರು 2,000 ಸಂತರು, ಸ್ವಾಮೀಜಿಗಳ ಭದ್ರತೆಗೆ ಒಂದು ಕಡೆಯಲ್ಲಿ ಪೊಲೀಸರು ಅವರದ್ದೇ ರೀತಿಯಲ್ಲಿ ಭದ್ರತೆಯನ್ನು ಆಯೋಜಿಸಲು ರೂಪರೇಖೆ ಸಿದ್ಧಪಡಿಸಿಕೊಳ್ಳುತ್ತಿದ್ದರೆ, ಇತ್ತ ಆಯೋಜಕರು ಅವರದ್ದೇ ಆದ ರೀತಿಯಲ್ಲಿ "ಕೇಸರಿ ರಕ್ಷಕ್‌ ಪಡೆ'ಯನ್ನು ಸಿದ್ಧಗೊಳಿಸುತ್ತಿದ್ದಾರೆ. ಸಂತರು, ಸ್ವಾಮೀಜಿಗಳು ಉಳಿದುಕೊಳ್ಳುವ ವಸತಿ ಯಿಂದ ಹಿಡಿದು, ಊಟ, ಸಾರಿಗೆ, ಕಾರ್ಯಕ್ರಮ ನಡೆಯುವ ಸ್ಥಳ, ಪ್ರದರ್ಶಿನಿ, ಭೋಜನ ಶಾಲೆ ಮತ್ತು ಪಾಕಶಾಲೆಯ ಸಮೀಪದಲ್ಲಿ ಧರ್ಮ ಸಂಸದ್‌ನ ಅಧಿಕೃತ ಸ್ವಯಂಸೇವಕ ಭದ್ರತಾ...
1 3,255 3,256 3,257 3,258 3,259 3,290
Page 3257 of 3290