ಮಂಗಳೂರಿನಲ್ಲಿ ಸೆಕ್ಷನ್ 144 | ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಷೀರ್ ಮೃತ್ಯು
ಮಂಗಳೂರು : ನಗರದ ಕೊಟ್ಟಾರ ಚೌಕಿ ಬಳಿ ಜನವರಿ 3ರಂದು ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾದ ಫಾಸ್ಟ್ ಫುಡ್ ವ್ಯಾಪಾರಿ ಅಬ್ದುಲ್ ಬಶೀರ್(45) ಜೀವನ್ಮರಣದ ಹೋರಾಟದಲ್ಲಿ ಸೋತು ಇಹಲೋಕ ತ್ಯಜಿಸಿದರು. ಕರಾವಳಿಯಲ್ಲಿ ಸತತವಾಗಿ ನಡೆಯುತ್ತಿರುವ ಕೋಮು ದಳ್ಳುರಿಗೆ ಇನ್ನೊಂದು ಜೀವ ಬಲಿಯಾಯಿತ್ತು. ದೀಪಕ್ ರಾವ್ ಕೊಲೆಗೆ ಪ್ರತಿಕಾರ ಎಂಬಂತೆ ನಡೆದ ಹಲ್ಲೆಯಲ್ಲಿ ತೀವ್ರ ಗಾಯಗೊಂಡ ಬಷೀರ್ ಅವರನ್ನು ಎಜೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ...







