ಬಿಜೆಪಿ ಪರಿವರ್ತನಾ ಯಾತ್ರೆಗೆ ಹೆದರಿದ ಸಿದ್ದರಾಮಯ್ಯ? | ಸೋಲಿನ ಭಯದಲ್ಲಿ.!
ಬೆಂಗಳೂರು: ಮುಂಬರುವ ಚುನಾವಣೆಗೆ ಬಿಜೆಪಿಯಿಂದ ಹಿಂದುತ್ವ ಅಜೆಂಡಾ ಘೋಷಣೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ನಡೆಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆ ವೇಳೆ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ಎಸ್ಪಿ, ಪೊಲೀಸ್ ಆಯುಕ್ತರು ಸಭೆಯಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಸಿಎಂ ಬರೀ ಪರಿವರ್ತನಾ ರ್ಯಾಲಿಯ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದುಬಂದಿದೆ. ಪರಿವರ್ತನಾ ರ್ಯಾಲಿ ಯಾವ...







