Sunday, September 6, 2026

ಸುದ್ದಿ

ಸುದ್ದಿ

ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಹೂವಿನಿಂದ ಕಂಗೊಳಿಸಿದ ಕೃಷ್ಣ ಮಠ – ಕಹಳೆ ನ್ಯೂಸ್

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ  ಹಿನ್ನೆಲೆಯಲ್ಲಿ ಕೃಷ್ಣನ ನಾಡು ಉಡುಪಿಯಲ್ಲಿ ಅಷ್ಟಮಿ ಸಂಭ್ರಮ ಜೋರಾಗಿತ್ತು. ಹಗಲೆಲ್ಲ ಉಪವಾಸವಿದ್ದು ಕೃಷ್ಣದೇವರ ಆರಾಧನೆಯಲ್ಲಿ ಭಕ್ತರು ತೊಡಗಿಸಿಕೊಂಡಿದ್ದರು. ನಗರದಾದ್ಯಂತ ವಿವಿಧ ವೇಷಗಳ ಕಲರವ ಕಂಡುಬಂತು. ಕೃಷ್ಣದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ರಾಜ್ಯದ ವಿವಿಧೆಡೆಯಿಂದ ಭಕ್ತರು ಉಡುಪಿಗೆ ಆಗಮಿಸಿ ಕೃಷ್ಣ ದೇವರ ದರ್ಶನ ಪಡೆದರು. ಮಧ್ಯರಾತ್ರಿ 12 ಗಂಟೆ 12 ನಿಮಿಷಕ್ಕೆ ಕೃಷ್ಣದೇವರಿಗೆ ಅರ್ಘ್ಯ ಸಮರ್ಪಣೆ ನಡೆಯಲಿದೆ. ಕೃಷ್ಣ ಮಠದಲ್ಲಿ ಮುದ್ದುಕೃಷ್ಣ ಸ್ಪರ್ಧೆ ಸೇರಿದಂತೆ ವಿವಿಧ ಧಾರ್ಮಿಕ...
ಸುದ್ದಿ

ʻಅಭಿಮನ್ಯುʼ ದಸರೆಯಲ್ಲಿ ಪಾಲ್ಗೊಳ್ಳಲು ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ – ಕಹಳೆ ನ್ಯೂಸ್

ಬೆಂಗಳೂರು/ಮೈಸೂರು: ಈ ಬಾರಿಯ ದಸರಾ ಮಹೋತ್ಸವದಲ್ಲಿ ಅಭಿಮನ್ಯು ಆನೆ ಭಾಗವಹಿಸಲು ಕೊನೆಗೂ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಸಂಬಂಧ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಒಟ್ಟಿನಲ್ಲಿ ಕೋಟ್ಯಂತರ ಅಭಿಮಾನಿಗಳ ಆಸೆಯಂತೆ 6 ಬಾರಿ ಅಂಬಾರಿ ಹೊತ್ತ ಅಭಿಮನ್ಯು ಈ ಬಾರಿ ನಿಶಾನೆ ಆನೆಯಾಗಿ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿದ್ದಾನೆ.   ಪ್ರಕಟಣೆಯಲ್ಲಿ ಏನಿದೆ? ಮೈಸೂರು ದಸರಾ ಕರ್ನಾಟಕದ ನಾಡಹಬ್ಬವಾಗಿದ್ದು, ನಾಡಿನ ಕಲೆ, ಸಂಸ್ಕೃತಿ, ಪರಂಪರೆ...
ಸುದ್ದಿ

ಯೆಮನ್‌ ಹೌತಿಗಳು-ಸೌದಿ ಬೆಂಬಲಿತ ಸರ್ಕಾರಿ ಪಡೆಗಳ ನಡುವೆ ಘರ್ಷಣೆ; 81 ಮಂದಿ ಸಾವು – ಕಹಳೆ ನ್ಯೂಸ್

ಸನಾ: ಯೆಮನ್‌ನ ಹೌತಿಗಳು ಮತ್ತು ಸೌದಿ ಬೆಂಬಲಿತ ಸರ್ಕಾರಿ ಪಡೆಗಳ ನಡುವಿನ ಘರ್ಷಣೆಯಲ್ಲಿ 81 ಜನರು ಸಾವನ್ನಪ್ಪಿದ್ದಾರೆ. ಇರಾನ್ ಬೆಂಬಲಿತ ಬಂಡುಕೋರರು ಕೆಂಪು ಸಮುದ್ರದ ಗಡಿಯಲ್ಲಿರುವ ಪ್ರದೇಶದತ್ತ ಸಾಗುತ್ತಿದ್ದಾರೆ. ಕೆಂಪು ಸಮುದ್ರದ ದಕ್ಷಿಣ ಪ್ರವೇಶದ್ವಾರದಲ್ಲಿರುವ ಕಿರಿದಾದ ಬಾಬ್ ಅಲ್-ಮಂದಾಬ್ ಜಲಸಂಧಿಯ ನಿಯಂತ್ರಣಕ್ಕಾಗಿ ಹೌತಿಗಳು ಕರಾವಳಿ ಪ್ರದೇಶಗಳ ಬಳಿ ರಾಕೆಟ್ ಮತ್ತು ಡ್ರೋನ್ ದಾಳಿ ನಡೆಸಿದ ಬಳಿಕ ಸಂಘರ್ಷ ಭುಗಿಲೆದ್ದಿದೆ. ಇತ್ತೀಚಿನ ವಾರಗಳಲ್ಲಿ ಹೌತಿಗಳು ಕೆಂಪು ಸಮುದ್ರದಲ್ಲಿ ಸೌದಿ ಹಡಗುಗಳ ಮೇಲೆ...
ಸುದ್ದಿ

ಅಕ್ಷಯ ಪದವಿ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಸಂಸ್ಥೆಯ ಗುಣಮಟ್ಟದ ರೋಡ್‌ಮ್ಯಾಪ್  ಕಾರ್ಯಾಗಾರ – ಕಹಳೆ ನ್ಯೂಸ್

ಅಕ್ಷಯ ಪದವಿ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಸಂಸ್ಥೆಯ ಗುಣಮಟ್ಟದ ರೋಡ್‌ಮ್ಯಾಪ್ ಕುರಿತು ವಿಶೇಷ ಕಾರ್ಯಾಗಾರ ನಡೆಯಿತು. ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಕಲಾವತಿ ಜಯಂತ್ ಅವರು ದೀಪ ಪ್ರಜ್ವಲಿಸುವ  ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ. ಪಿ. ದಯಾನಂದ ಪೈ ಹಾಗೂ ಶ್ರೀ ಪಿ. ಸತೀಶ್ ಪೈ, ಪ್ರಾಂಶುಪಾಲರು, GFGC ಕಾಲೇಜು, ಮಂಗಳೂರು ಅವರು ಮಾತನಾಡಿ, “ಒಳ್ಳೆಯ ನಿರ್ಧಾರ ನಮ್ಮನ್ನು...
ಸುದ್ದಿ

ಬ್ಯಾಡ್ಮಿಂಟನ್ ಪಂದ್ಯಾಟ: ಫಿಲೋಮಿನಾ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ  ಮಂಗಳೂರು ಹಾಗೂ ಅಂಬಿಕಾ ಪ. ಪೂ ಕಾಲೇಜು, ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಸೆ 2 ರಂದು ಸುಧಾನ ಸ್ಪೋರ್ಟ್ಸ್ ಕ್ಲಬ್ ಸಾಮೆತಡ್ಕ ಪುತ್ತೂರಿನಲ್ಲಿ ನಡೆದ ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಬಾಲಕರ ವಿಭಾಗವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ದ್ವಿತೀಯ ವಿಜ್ಞಾನ ವಿಭಾಗದ ಅಲೆನ್ ಪಿ ಜಾನ್ ಪ್ರಥಮ...
ಸುದ್ದಿ

ಫಿಲೋಮಿನಾ ಪ. ಪೂ ಕಾಲೇಜಿಗೆ ಮೈಟ್ ‘ಕಲ್ಚರಲ್ ಫಸ್ಟ್’ : ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ – ಕಹಳೆ ನ್ಯೂಸ್

ಪುತ್ತೂರು: ಮೈಟ್ ಟೆಕ್ನಿಕಲ್ ಅಂಡ್ ಪ್ರೊಫೆಷನಲ್ ಕಾಲೇಜು, ಮಂಗಳೂರು ಇದರ ಆಶ್ರಯದಲ್ಲಿ ಸೆ 2 ರಂದು ನಡೆದ 'ಕಲ್ಚರಲ್ ಫೆಸ್ಟ್' ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಪ್ರಥಮ ವಿಜ್ಞಾನ ವಿಭಾಗದ ಜೀತನ್ ಕೆ, ಪ್ರಗ್ಯಾನ್ ಡೆಲ್ವಿನ್ ಡಿಸೋಜಾ ಹಾಗೂ  ದ್ವಿತೀಯ ವಾಣಿಜ್ಯ ವಿಭಾಗದ ಧ್ಯಾನ್ ಬಿ ಟ್ರೆಶರ್ ಹಂಟ್ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ರಸಪ್ರಶ್ನೆ...
ಸುದ್ದಿ

ಯಕ್ಷಗಾನ ಕಲಾರಂಗದ 103ನೆಯ ಮನೆ ಹಸ್ತಾಂತರ – ಕಹಳೆ ನ್ಯೂಸ್

ಮುಂಡ್ಕೂರಿನ ಇಂದಿರಾ ನಗರದಲ್ಲಿ ಕಟಪಾಡಿ ರೋಟರಿ ಕ್ಲಬ್, ತನ್ನ ಬೆಳ್ಳಿಹಬ್ಬ ವರ್ಷಾಚರಣೆಯ ನೆನಪಿನಲ್ಲಿ ಯಕ್ಷಗಾನ ಕಲಾರಂಗದ ಮೂಲಕ ಸಾವಿತ್ರಿ ಇವರ ಬೌದ್ಧಿಕ ದೋಷವುಳ್ಳ ಪುತ್ರಿ ಶ್ರುತಿ ಇವರಿಗೆ ನಿರ್ಮಿಸಿದ ನೂತನ ಮನೆ ‘ಸಾವಿತ್ರಿ ಸದನ’ ಹಸ್ತಾಂತರಗೊಂಡಿತು. ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ರೋಟರಿ ಗವರ್ನರ್ ಬಿ. ಎಂ. ಭಟ್ ರೊಟರಿ ಸಂಸ್ಥೆ ಅಂತಾರಾಷ್ಟ್ರೀಯವಾಗಿ ಮಾಡುತ್ತಿರುವ ಕಾರ್ಯಕ್ರಮ ವಿವರಿಸಿ, ಯಕ್ಷಗಾನ ಕಲಾರಂಗ ಯಾವುದೆ ಪ್ರಚಾರ ಬಯಸದೆ ಸಮಾಜಪರವಾಗಿ ಮಾಡುತ್ತಿರುವ ಕೆಲಸ ಸಾಮಾಜಿಕ ಸಂಘಟನೆಗಳಿಗೆ...
ಸುದ್ದಿ

ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ತಂಡಕ್ಕೆ ಒಂದು ವಾರಗಳ ಕಾಲ ತರಬೇತಿ ಶಿಬಿರ  – ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು: ಕರ್ನಾಟಕ ರಾಜ್ಯ ಜೂನಿಯರ್ ಹುಡುಗರ ಮತ್ತು ಹುಡುಗಿಯರ ವಾಲಿಬಾಲ್ ತಂಡಗಳಿಗೆ ಒಂದು ವಾರದ ಕಾಲ ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಕ್ರೀಡಾಂಗಣದಲ್ಲಿ ತರಬೇತಿಯು ಆರಂಭವಾಯಿತು. ಈ ತರಬೇತಿಯಲ್ಲಿ ಬೆಂಗಳೂರು, ಮೈಸೂರು, ಉಡುಪಿ, ಕಾರ್ಕಳ, ಮಂಡ್ಯ, ಹಾಸನ ಮತ್ತು ದಕ್ಷಿಣ ಜಿಲ್ಲೆಯ ಆಯ್ದ ಆಟಗಾರರು ಭಾಗವಹಿಸುತ್ತ್ತಿದ್ದಾರೆ. ಸೆಪ್ಟೆಂಬರ್ 6 ರಿಂದ 10 ರ ವರೆಗೆ ಉತ್ತರಪ್ರದೇಶದ ನಾಸಿಕ್ ನಲ್ಲಿ ನಡೆಯುವ 'ರಾಷ್ಟ್ರೀಯ 3A ವಾಲಿಬಾಲ್ ಅಸೋಸಿಯೇಶನ್ 'ಪಂದ್ಯಾಟದಲ್ಲಿ ಭಾಗವಹಿಸಲು...
1 2 3 4 5 6 3,531
Page 4 of 3531