Monday, June 15, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪೋಷಕರು ಮಕ್ಕಳನ್ನು ಸುಸಂಸ್ಕೃತರನ್ನಾಗಿ ರೂಪಿಸಬೇಕು :ಡಾ. ಧನಂಜಯ ಕುಂಬ್ಳೆ -ಕಹಳೆ ನ್ಯೂಸ್

ಪುತ್ತೂರು :ಶ್ರೇಷ್ಠ ವಿಚಾರಗಳನ್ನು ಗಳಿಸಿಕೊಳ್ಳುವ ಕಾರ್ಯ ಉಪನಯನ ಸಂಸ್ಕಾರದ ನಂತರ ಆರಂಭವಾಗುತ್ತದೆ. ಪೋಷಕರು ಮಕ್ಕಳಿಗೆ ಒಳ್ಳೆಯ ಸಂಸ್ಕಾರಗಳನ್ನು ನೀಡಿ ಬದುಕಿನಲ್ಲಿ ಮುನ್ನಡೆಯಲು ಪ್ರೇರೇಪಿಸಬೇಕು.ನಮ್ಮ ಪಠ್ಯಕ್ರಮಗಳಲ್ಲಿ ವೇದಮಂತ್ರಗಳ ಹಾಗೂ ಭಾರತೀಯ ಸಂಸ್ಕೃತಿಯ ಬಗ್ಗೆ ಸೇರ್ಪಡೆಗೊಳಿಸುವುದು ಅತ್ಯಗತ್ಯ. ನಾವೆಲ್ಲರೂ ಸಂಘಟಿತರಾಗಿ ಒಳ್ಳೆಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಾ ನಮ್ಮ ಪ್ರದೇಶಗಳನ್ನು ಸುಸಂಸ್ಕೃತವಾಗಿ ರೂಪಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಹಾಗೂ ಕನ್ನಡ ವಿಭಾಗದ ಸಹಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಅವರು ನುಡಿದರು. ಇವರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಗೋವಿಗಾಗಿ ಮೇವು : ಪುತ್ತೂರು ಗೋಶಾಲೆಗೆ ವಿಹಿಂಪ-ಬಜರಂಗದಳದಿಂದ ಹಸಿರು ಮೇವು ವಿತರಣೆ -ಕಹಳೆ ನ್ಯೂಸ್

ಪುತ್ತೂರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ವತಿಯಿಂದ ಗೋವಿಗಾಗಿ ಮೇವು ಎಂಬ ಕಾರ್ಯಕ್ರಮದ ಮೂಲಕ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗೋಶಾಲೆಗೆ ಹಸಿರು ಮೇವನ್ನು ನೀಡಲಾಯಿತು. ತಿಂಗಳಾಡಿ ಮತ್ತು ಭಕ್ತಕೋಡಿ ಘಟಕದ ಕಾರ್ಯಕರ್ತರು ಮೇವು ಸಂಗ್ರಹ ಮಾಡಿದರು. ವೈಷ್ಣವ್ ನೆಲಪ್ಪಾಲು ಅವರು ಪಿಕಪ್ ಒದಗಿಸಿದರು ಹಾಗೂ ಪುತ್ತೂರಿನ ಮಾಸ್ಟರ್ಸ್ ಸಂಸ್ಥೆಯ ಸವನೂರಿನಲ್ಲಿರುವ ಫಾರ್ಮ್ ಹೌಸ್ ತೋಟದಿಂದ ಮೇವು ಸಂಗ್ರಹಿಸಲು ಅನುವು ಮಾಡಿಕೊಟ್ಟರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಪತ್ತೆ : ಬೆಂಗಳೂರು ಪೊಲೀಸರಿಂದ ತೀವ್ರ ತನಿಖೆ -ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗಮಧ್ಯೆ ಸ್ಫೋಟಕ ವಸ್ತುವಾದ ಜಿಲೆಟಿನ್ ಕಡ್ಡಿಗಳು  ಪತ್ತೆಯಾಗಿದ್ದು, ಭದ್ರತಾ ವಲಯದಲ್ಲಿ ಆತಂಕ ಮೂಡಿಸಿದೆ. ಕಗ್ಗಲೀಪುರ ಬಳಿಯ ರವಿಶಂಕರ್  ಗುರೂಜಿ ಆಶ್ರಮದಿಂದ ಸುಮಾರು 3 ಕಿ.ಮೀ ದೂರದಲ್ಲಿರುವ ತಾತಗುಣಿ ಸಮೀಪದ ಬ್ರಿಡ್ಜ್ ಪಕ್ಕದ ಕಾಂಪೌಂಡ್ ಬಳಿ ಕಲ್ಲು ಕ್ವಾರಿಗಳಿಗೆ ಬಳಸುವ ಎರಡು ಜಿಲೆಟಿನ್ ಕಡ್ಡಿ ಪತ್ತೆಯಾಗಿದೆ. ಪತ್ತೆಯಾಗಿರುವ ಜಿಲೆಟಿನ್ ಕಡ್ಡಿಗಳು ‘ಲೈವ್’ (ಸಕ್ರಿಯ) ಸ್ಥಿತಿಯಲ್ಲಿ ಇರಲಿಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇದು ನಿರಾಳತೆಯನ್ನು...
ಸುದ್ದಿ

ತಮಿಳುನಾಡಿನಲ್ಲಿ ‘ದಳಪತಿ’ ಯುಗಾರಂಭ : ಸಿಎಂ ಆಗಿ ವಿಜಯ್ ಪ್ರಮಾಣವಚನ -ಕಹಳೆ ನ್ಯೂಸ್

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ವಿಜಯ್  ನೇತೃತ್ವದ ತಮಿಳಗ ವೆಟ್ರಿ ಕಳಗಂ  ಸರ್ಕಾರ ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆದ ಅದ್ಧೂರಿ ಸಮಾರಂಭದಲ್ಲಿ ವಿಜಯ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ  ಪ್ರಮಾಣವಚನ  ಸ್ವೀಕರಿಸಿದರು. ಸದ್ಯ ವಿಜಯ್‌ ಅವರು ತಮ್ಮ ಸಂಪುಟದಲ್ಲಿ 9 ಮಂದಿ ಶಾಸಕರಿಗೆ ಮಂತ್ರಿಗಿರಿ ನೀಡಿದ್ದಾರೆ. ಟಿವಿಕೆಗೆ ಬೆಂಬಲ ನೀಡಿದ ಕಾಂಗ್ರೆಸ್ ಪಕ್ಷದ ಇಬ್ಬರು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಕೇರಳದಲ್ಲಿ 3 ಸ್ಥಾನ ಗೆದ್ದಿದ್ದೇವೆ, ಮುಂದೆ ಅಲ್ಲಿಯೂ ಸರ್ಕಾರ ರಚನೆ ಮಾಡುತ್ತೇವೆ: ಮೋದಿ -ಕಹಳೆ ನ್ಯೂಸ್

ಬೆಂಗಳೂರು: ಕೇರಳದಲ್ಲಿ  ಈ ಬಾರಿ 3 ಸ್ಥಾನ ಗೆದ್ದಿದ್ದೇವೆ. ಮುಂದೆ ಅಲ್ಲಿಯೂ ಸರ್ಕಾರ ರಚನೆ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಬಿಜೆಪಿಯಿಂದ  ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲರಿಗೂ ನಮಸ್ಕಾರಗಳು ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದರು. ವಿಮಾನ ನಿಲ್ದಾಣದಲ್ಲಿ ಇಂತಹ ಕಾರ್ಯಕ್ರಮ ಇದೇ ಮೊದಲು. ಬೆಂಗಳೂರಿನ (Bengaluru) ನೆಲದಲ್ಲಿ ಕೇಸರಿ ರಾರಾಜಿಸುತ್ತಿದೆ. ಬಂಗಾಳದ...
ಜಿಲ್ಲೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಎನ್.ಎಂ.ಸಿ ವಿದ್ಯಾರ್ಥಿಗಳ ಸಾಧನೆ: ಅಂತರ್‌ಕಾಲೇಜು ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪ್ರಶಸ್ತಿ -ಕಹಳೆ ನ್ಯೂಸ್

ಮೂಡಬಿದ್ರೆಯ ಅಳ್ವಾಸ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಮಂಗಳೂರು ವಿಶ್ವವಿದ್ಯಾಲಯದ ಅಂತರ್‌ಕಾಲೇಜು ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ತೃತೀಯ ಬಿ.ಕಾಂ ವಿದ್ಯಾರ್ಥಿ ಅಭಿನಂದನ್ ಬಿ.ಎಸ್. ಅವರು 79 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದರೆ, ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಶ್ರೀಶ್ಮಾ ಅವರು 47 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಗೆ ಮಾಜಿ ರಾಷ್ಟ್ರೀಯ ಚಾಂಪಿಯನ್ ತರಬೇತುದಾರ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೊಳ್ಳಾಡಿ ಕುಟುಂಬಸ್ಥರಿಂದ ಒಂದು ಲೋಡು ಕಟ್ಟಿಗೆ ಕೊಡುಗೆ – ಕಹಳೆ ನ್ಯೂಸ್

ಪುತ್ತೂರು  : ಬಡಗನ್ನೂರು ಒಳಮೊಗ್ರು ಗ್ರಾಮದ ಬೊಳ್ಳಾಡಿ ಕುಟುಂಬಸ್ಥರ ವತಿಯಿಂದ ಪುತ್ತೂರು ಮಹಾತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಸಾರ್ವಜನಿಕ ಅನ್ನದಾನ ವ್ಯವಸ್ಥೆಗಾಗಿ ಒಂದು ಲೋಡು ಕಟ್ಟಿಗೆಯನ್ನು ಕೊಡುಗೆಯಾಗಿ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ರವರು ಬೊಳ್ಳಾಡಿ ಕುಟುಂಬದ ಹಿರಿಯ ಸದಸ್ಯ ಮೋಹನ್ ಕುಮಾರ್ ಬೊಳ್ಳಾಡಿವರಿಗೆ ಶಾಲು ಹಾಕಿ ಶ್ರೀ ಮಹಾಲಿಂಗಶ್ವರ ದೇವರ ಪ್ರಸಾದ ನೀಡಿ ಸತ್ಕರಿಸಿ ಶುಭ ಹಾರೈಸಿದರು. ವ್ಯವಸ್ಥಾಪನಾ ಸಮಿತಿಯ ಸದಸ್ಯ ಸುಭಾಷ್...
ಜಿಲ್ಲೆಸುದ್ದಿ

ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ನೀರುಪಾಲು -ಕಹಳೆ ನ್ಯೂಸ್

ಕೋಲಾರ: ಕೆರೆಯಲ್ಲಿ  ಈಜಲು  ಹೋದ ಅಣ್ಣ-ತಮ್ಮ ಇಬ್ಬರೂ ನೀರುಪಾಲಾಗಿರುವ ಘಟನೆ ಕೋಲಾರದಲ್ಲಿ  ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚರಮಾಕಲಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ಮಾಹಿತಿಯ ಪ್ರಕಾರ, ಗಾರೆ ಕೆಲಸಕ್ಕೆಂದು ಪಚ್ಚರಮಾಕಲಹಳ್ಳಿಗೆ ತೆರಳಿದ್ದ ಯುವಕರು ಮಧ್ಯಾಹ್ನದ ತೀವ್ರ ಬಿಸಿಲಿನ ತಾಪಮಾನದಿಂದಾಗಿ ಸಮೀಪದ ಕೆರೆಯಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ನೀರಿನ ಆಳ ಅಂದಾಜಿಸಲು ಸಾಧ್ಯವಾಗದೆ ಇಬ್ಬರೂ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನೂ ಮೃತಪಟ್ಟ...
1 44 45 46 47 48 3,392
Page 46 of 3392