ಜೈಲಲ್ಲಿ ದರ್ಶನ್ಗೆ ಮೂಲಸೌಕರ್ಯ : 1 ವಾರದೊಳಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ -ಕಹಳೆ ನ್ಯೂಸ್
ಬೆಂಗಳೂರು: ನಟ ದರ್ಶನ್ಗೆ ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್, ಜಾಮೀನು ಕೋರಿ ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ನೇತೃತ್ವದ ಪೀಠ, ರಾಜ್ಯ ಸರ್ಕಾರಕ್ಕೆ ಹಾಗೂ ವಿಚಾರಣಾಧೀನ ನ್ಯಾಯಾಲಯಕ್ಕೆ 1 ವಾರದೊಳಗೆ ವರದಿ ಸಲ್ಲಿಸಲು ಸೂಚಿಸಿದೆ. ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂದು ರಾಜ್ಯ ಸರ್ಕಾರಕ್ಕೆ ಹಾಗೂ...






