ಕೊಟ್ಟ ಮಾತನ್ನು ಉಳಿಸಿಕೊಳ್ಳದಿದ್ದಲ್ಲಿ ಜನಪ್ರತಿನಿಧಿಗೆ ಜನ ಗೌರವ ಕೊಡುವುದಿಲ್ಲ : ಶಾಸಕ ಅಶೋಕ್ ರೈ – ಕಹಳೆ ನ್ಯೂಸ್
ಪುತ್ತೂರು: ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಜನರಿಗೆ ನಾನಾ ಭರವಸೆಗಳನ್ನು ನೀಡುತ್ತಾರೆ, ಆದರೆ ಚುನಾವಣೆಯ ಬಳಿಕ ಅದನ್ನು ಪೂರ್ಣವಾಗಿ ಮರೆತುಬಿಡುತ್ತಾರೆ,ಕೊಟ್ಟ ಮಾತನ್ನು ಉಳಿಸಿಕೊಳ್ಳದಿದ್ದಲ್ಲಿ ಜನ ಗೌರವ ಕೊಡುವುದಿಲ್ಲ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಪಾಣಾಜೆ ಸೇವಾ ಸಹಕಾರಿ ಸಂಘದ ಸಭಾ ಭವನದಲ್ಲಿ ನಡೆದ ತಾಲೂಕು ಮಟ್ಟದ ಅಕ್ರಮ ಸಕ್ರಮ ಬೈಠಕ್ ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ಕಳೆದ ಚುನಾವಣಾ ಸಮಯದಲ್ಲಿ ಪಂಚ ಗ್ಯಾರಂಟಿ ಭರವಸೆ ನೀಡಿತ್ತು ಅಧಿಕಾರವಹಿಸಿದ...







