Saturday, June 13, 2026

ಸುದ್ದಿ

ಬೆಂಗಳೂರುರಾಜ್ಯಸುದ್ದಿ

ಗ್ರಾಹಕರಿಗೆ ಮತ್ತೊಂದು ಶಾಕ್ – ಪೆಟ್ರೋಲ್, ಗ್ಯಾಸ್ ಬಳಿಕ ಅಕ್ಕಿ ಬೆಲೆ ಗಗನಕ್ಕೆ -ಕಹಳೆ ನ್ಯೂಸ್

ಬೆಂಗಳೂರು: ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ತರಕಾರಿ ಬೆಲೆ ಏರಿಕೆಯ ನಡುವೆಯೇ ಇದೀಗ ಅಕ್ಕಿ ಬೆಲೆ ಯೂ ಹೆಚ್ಚಳವಾಗಿದೆ. ವಿವಿಧ ತಳಿಯ ಅಕ್ಕಿ ದರದಲ್ಲಿ ಕೆ.ಜಿಗೆ 10 ರಿಂದ 20 ರೂಪಾಯಿವರೆಗೆ ಏರಿಕೆಯಾಗಿದ್ದು, ಇದರಿಂದ ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆ ಬಿದ್ದಂತಾಗಿದೆ. ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದ್ದು, ಪೂರೈಕೆ ಕಡಿಮೆಯಾಗಿದೆ. ಇದರ ಜೊತೆಗೆ ವಿವಿಧ ದೇಶಗಳಿಗೆ ಅಕ್ಕಿ ರಫ್ತು ಮಾಡಲು ಕೇಂದ್ರ ಸರ್ಕಾರ ಅವಕಾಶ ನೀಡಿರುವುದರಿಂದ ಸ್ಥಳೀಯ ಮಾರುಕಟ್ಟೆಯಲ್ಲಿ ಅಕ್ಕಿಯ ಲಭ್ಯತೆ...
ದೆಹಲಿರಾಜ್ಯಸುದ್ದಿ

ಹಠಾತ್ ಬಿರುಗಾಳಿ ಸಹಿತ ಮಳೆ : ದೆಹಲಿ ಏರ್‌ಪೋರ್ಟ್‌ನಲ್ಲಿ 3 ಏರ್ ಇಂಡಿಯಾ ವಿಮಾನಗಳು ಜಖಂ -ಕಹಳೆ ನ್ಯೂಸ್

ನವದೆಹಲಿ: ಹಠಾತ್ ಬಿರುಗಾಳಿ ಸಹಿತ ಭಾರೀ ಮಳೆಗೆ ದೆಹಲಿಯ  ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಮೂರು ಏರ್ ಇಂಡಿಯಾ ವಿಮಾನಗಳು ಜಖಂಗೊಂಡಿವೆ. ಬಿರುಗಾಳಿಗೆ ಸಿಕ್ಕಿ ರನ್‌ವೇನಲ್ಲಿದ್ದ ಏಣಿಗಳು ಮತ್ತು ಇತರ ತಾಂತ್ರಿಕ ಉಪಕರಣಗಳು ವಿಮಾನಗಳಿಗೆ ಡಿಕ್ಕಿಯಾದ ಪರಿಣಾಮ ಏರ್ ಇಂಡಿಯಾ ಸಂಸ್ಥೆಯ ಮೂರು ವಿಮಾನಗಳು ಜಖಂಗೊಂಡಿವೆ. ಭಾನುವಾರ (ಜೂ.7) ಸಂಜೆ 4:40ರ ಸುಮಾರಿಗೆ ವಿಮಾನ ನಿಲ್ದಾಣದ ಟರ್ಮಿನಲ್ 2ರ ಬಳಿ ಘಟನೆ ನಡೆದಿದೆ. ಏಕಾಏಕಿ ಬೀಸಿದ ಬಿರುಗಾಳಿಯ ರಭಸಕ್ಕೆ...
ರಾಜ್ಯಸುದ್ದಿ

ಕದನ ವಿರಾಮದ ಬಳಿಕ ಫಸ್ಟ್‌ ಟೈಮ್‌ ಇಸ್ರೇಲ್‌ ಮೇಲೆ ಇರಾನ್‌ ಮಿಸೈಲ್‌ ದಾಳಿ – ಕಹಳೆ ನ್ಯೂಸ್

ಟೆಲ್‌ ಅವಿವ್‌/ಜೆರುಸಲೇಂ: ಏಪ್ರಿಲ್‌ನಲ್ಲಿ ಕದನ ವಿರಾಮ ಜಾರಿಗೆ ಬಂದ ನಂತರ ಇರಾನ್ ಮೊದಲ ಬಾರಿಗೆ ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮತ್ತೆ ಉದ್ವಿಗ್ನತೆ ಹೆಚ್ಚಾಗಿದೆ. ಕಳೆದ ಕೆಲ ದಿನಗಳಿಂದ ಅಮೆರಿಕದ (America) ವಿನಂತಿಗಳನ್ನ ಧಿಕ್ಕರಿಸುತ್ತಲೇ ಬಂದ ಇರಾನ್‌ ಯಾವುದೇ ಎಚ್ಚರಿಕೆಯಿಲ್ಲದೇ ಇಸ್ರೇಲ್‌ನ ಬೈರೂತ್‌ನ ದಕ್ಷಿಣ ಉಪನಗರಗಳನ್ನ ಗುರಿಯಾಗಿಸಿ ಇರಾನ್‌ ಮಿಸೈಲ್‌ ದಾಳಿ ನಡೆಸಿದೆ. ಶಾಂತಿ ಒಪ್ಪಂದ ಅಂತಿಮ ಹಂತದಲ್ಲಿರುವಂತೆಯೇ ಪಶ್ಚಿಮ ಏಷ್ಯಾದಲ್ಲಿ (West Asia) ಮತ್ತೆ ಸಂಘರ್ಷ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಪುತ್ತೂರು ಘಟಕದ ಸೇವಾ ಪ್ರಕಲ್ಪವಾದ ವಜ್ರತೇಜಸ್ ತಂಡದಿಂದ ಅನಾರೋಗ್ಯ ಪೀಡಿತ ವಿಘ್ನೇಶ್ ಭಟ್ ಅವರಿಗೆ ಸಹಾಯಧನ ವಿತರಣೆ -ಕಹಳೆ ನ್ಯೂಸ್

ಪುತ್ತೂರು: ವಿಶ್ವ ಹಿಂದೂ ಪರಿಷದ್ ಹಾಗೂ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್‌ಆಪ್ ಗ್ರೂಪ್‌ನಲ್ಲಿ ಸಂಗ್ರಹವಾದ ನಿಧಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಸಂಪ್ಯದ ನಿವಾಸಿ ವಿಘ್ನೇಶ್ ಭಟ್ ಅವರಿಗೆ ಸಹಾಯಧನ ವಿತರಿಸಲಾಯಿತು. ವಜ್ರತೇಜಸ್ ತಂಡದ ಸದಸ್ಯರು ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿ ನೆರವಿನ ಧನವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಜ್ರತೇಜಸ್ ಹಿಂದೂ ಕವಚ್ ಅಧ್ಯಕ್ಷ ಮುರಳೀಕೃಷ್ಣ ಹಸಂತಡ್ಕ, ಜಿಲ್ಲಾ ಪ್ರಚಾರ-ಪ್ರಸಾರ ಪ್ರಮುಖ್ ಕೇಶವಪ್ರಸಾದ್ ಬಜಪ್ಪಳ, ವಿಶ್ವ ಹಿಂದೂ...
ಸುದ್ದಿ

ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ (ಪುತ್ತೂರು ತಾಲೂಕು ಮತ್ತು ಗ್ರಾಮಾಂತರ) ಮತ್ತು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪುತ್ತೂರು ಇವರ ಜಂಟಿ ಆಯೋಜಕತ್ವದಲ್ಲಿ,ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಕೇಂದ್ರಗಳ ಸಹಯೋಗದೊಂದಿಗೆ ಈ ವಿಶಿಷ್ಟ “ಸಾಮೂಹಿಕ ಸರಸ್ವತೀ ವಂದನೆ” ಮತ್ತು “ವಿದ್ಯಾ ಸಂಕಲ್ಪ” ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ​ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ (ಪುತ್ತೂರು ತಾಲೂಕು ಮತ್ತು ಗ್ರಾಮಾಂತರ) ಮತ್ತು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪುತ್ತೂರು ಇವರ ಜಂಟಿ ಆಯೋಜಕತ್ವದಲ್ಲಿ,ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಕೇಂದ್ರಗಳ ಸಹಯೋಗದೊಂದಿಗೆ ಈ ವಿಶಿಷ್ಟ "ಸಾಮೂಹಿಕ ಸರಸ್ವತೀ ವಂದನೆ" ಮತ್ತು "ವಿದ್ಯಾ ಸಂಕಲ್ಪ" ಕಾರ್ಯಕ್ರಮವು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಅತ್ಯಂತ ಭಕ್ತಿಭಾವದಿಂದ ಜರುಗಿತು. ಬೆಳಗ್ಗೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀ ಈಶ್ವರ...
ಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ವಾರ್ಷಿಕ ಮಹಾಸಭೆ – ಕಹಳೆ ನ್ಯೂಸ್

ಬಂಟ್ವಾಳ: ಯುವವಾಹಿನಿ (ರಿ.) ಬಂಟ್ವಾಳ ಘಟಕದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಜೂನ್ 7ರಂದು ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು. ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯದರ್ಶಿ ಮಧುಸೂದನ್ ಮದ್ವ ವಾರ್ಷಿಕ ವರದಿಯನ್ನು ಮಂಡಿಸಿದರು. ಕೋಶಾಧಿಕಾರಿ ನವೀನ್ ಪೂಜಾರಿ ವಾರ್ಷಿಕ ಲೆಕ್ಕಪತ್ರವನ್ನು ಸಭೆಯ ಮುಂದಿರಿಸಿದರು. ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅವರು 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯನ್ನು ಘೋಷಿಸಿದರು. ನೂತನ...
ಸುದ್ದಿ

ಖ್ಯಾತ ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ – ಕಹಳೆ ನ್ಯೂಸ್

ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಹಿರಿಯ ನಟ ಮತ್ತು ಹಾಸ್ಯ ಕಲಾವಿದ ಸಲೀಂ ಕುಮಾರ್ (56) ಅವರು ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಅಮೃತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾಗಿದ್ದಾರೆ. ಸಲೀಂ ಕುಮಾರ್ ಅವರು ದೀರ್ಘಕಾಲದಿಂದ ಲಿವರ್ ಸಿರೋಸಿಸ್ (ಯಕೃತ್ತಿನ ಕಾಯಿಲೆ) ಮತ್ತು ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಅವರನ್ನು...
ಸುದ್ದಿ

ಬಳ್ಳಾರಿಯಲ್ಲಿ ಮಳೆ ಅವಾಂತರ : KEB ಘಟಕಕ್ಕೆ ನುಗ್ಗಿದ ನೀರು, ಇಡೀ ನಗರಕ್ಕೆ ಕರೆಂಟ್‌ ಕಟ್‌ – ಕಹಳೆ ನ್ಯೂಸ್

ಬಳ್ಳಾರಿ: ನಗರದಲ್ಲಿ ಶನಿವಾರ ರಾತ್ರಿ ಸುರಿದ ಮಳೆಗೆ ಹತ್ತಾರು ಅವಾಂತರ ಸೃಷ್ಟಿಯಾಗಿದೆ. ಬಳ್ಳಾರಿ ನಗರದ ತಗ್ಗು ಪ್ರದೇಶದ ಕೆಲ ಮನೆಗಳಿಗೆ ನೀರು ನುಗ್ಗಿ ಇಡೀ ರಾತ್ರಿ ಜನ ಜಾಗರಣೆ ಮಾಡಿದ್ರೆ, ಹಲವು ಸರ್ಕಾರಿ ಕಚೇರಿಗಳ ಆವರಣ ಕೆರೆಯಂತಾಗಿ, ಪೊಲೀಸ್ ಸಿಬ್ಬಂದಿ ಪರದಾಡಿದ್ದಾರೆ. ಕೆಇಬಿಗೂ (KEB) ನೀರು ನುಗ್ಗಿದ್ದು, ಇಡೀ ಬಳ್ಳಾರಿ ನಗರದ ಜನ ಕತ್ತಲೆಯಲ್ಲಿ ರಾತ್ರಿ ಕಳೆಯುವಂತಾಯಿತು. ಇನ್ನೂ ಮಳೆಯ ಮತ್ತೊಂದು ದೊಡ್ಡ ಪರಿಣಾಮ ನಗರದ ವಿದ್ಯುತ್ ವ್ಯವಸ್ಥೆಯ ಮೇಲೆ...
1 6 7 8 9 10 3,391
Page 8 of 3391