Saturday, June 20, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ ಕುಲಕರ್ಣಿ ಸೇರಿ ಇತರ ಇಬ್ಬರ ವಿರುದ್ದ ಆರೋಪಪಟ್ಟಿ ದಾಖಲು-ಕಹಳೆ ನ್ಯೂಸ್

ನವದೆಹಲಿ : ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಇತರ ಇಬ್ಬರ ವಿರುದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ಆರೋಪಪಟ್ಟಿ ದಾಖಲಿಸಿದೆ. ವಿನಯ ಕುಲಕರ್ಣಿ ಅಲ್ಲದೇ, ಶಿವಾನಂದ ಬಿರಾದಾರ್ ಮತ್ತು ಚಂದ್ರಶೇಖರ ಇಂಡಿ ಅವರ ವಿರುದ್ದ ಧಾರವಾಡದಲ್ಲಿನ ವಿಶೇಷ ಕೋರ್ಟ್‍ನಲ್ಲಿ ಆರೋಪಪಟ್ಟಿ ದಾಖಲಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ. 2016ರಲ್ಲಿ ಪಂಚಾಯತ್ ಚುನಾವಣೆಗೆ ಸಂಬಂಧಪಟ್ಟಂತೆ ಮೃತನೊಂದಿಗೆ ಆರೋಪಿಗಳು ರಾಜಕೀಯ ಮತ್ತು ವೈಯುಕ್ತಿಕ ದ್ವೇಷ ಹೊಂದಿದ್ದು, ಮಾಜಿ ಸಚಿವರು...
ಹೆಚ್ಚಿನ ಸುದ್ದಿ

ಕಲಡ್ಕ ಶ್ರೀ ರಾಮ ಪ್ರೌಢಶಾಲೆ ಕೇಂದ್ರಲ್ಲಿ 2020-21ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾನ್ವೇಷಣಾ ಪರೀಕ್ಷೆ-ಕಹಳೆ ನ್ಯೂಸ್

ಕಲ್ಲಡ್ಕ : 2020-21ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾನ್ವೇಷಣಾ ಪರೀಕ್ಷೆ (NMMS) ದಿನಾಂಕ 25.01.2021 ರಂದು ಕಲಡ್ಕ ಶ್ರೀ ರಾಮ ಪ್ರೌಢಶಾಲೆ ಕೇಂದ್ರಲ್ಲಿ ಜರಗಿತು. ಬಂಟ್ವಾಳ ತಾಲೂಕಿನ ವಿವಿಧ ಶಾಲೆಗಳ 8ನೇ ತರಗತಿಯಲ್ಲಿ ಕಲಿಯುತ್ತಿರುವ 215 ವಿದ್ಯಾರ್ಥಿಗಳು ಈ ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಿರುತ್ತಾರೆ. ವಿದ್ಯಾರ್ಥಿಗಳಿಗೆ ಸಾಮಾನ್ಯ ಬೌದ್ಧಿಕ್ ಪರೀಕ್ಷೆ (GMAT) ಮತ್ತು ವ್ಯಾಸಂಗ ಪ್ರವೃತ್ತಿ ಪರೀಕ್ಷೆ (SAT) 90ನಿಮಿಷ ಅವಧಿಯ 90 ಅಂಕಗಳ 90 ಬಹು ಆಯ್ಕೆ ಪ್ರಶ್ನೆಗಳನ್ನು ನೀಡಲಾಗಿತ್ತು....
ಹೆಚ್ಚಿನ ಸುದ್ದಿ

ಹಸು ತೊಳೆಯಲು ಹೋಗಿದ್ದ ಬಾಲಕ ಹಾಗೂ ಮಹಿಳೆ ಕೆಸರಲ್ಲಿ ಮುಳುಗಿ ಸಾವು – ಕಹಳೆ ನ್ಯೂಸ್

ರಾಮನಗರ: ಹಸುವಿನ ಮೈತೊಳೆಯಲು ಹೋಗಿದ್ದ ಬಾಲಕ ಹಾಗೂ ಅವನನ್ನು ಕಾಪಾಡಲು ಹೋದ ಮಹಿಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕನಕಪುರದ ಹುಣಸೆಮರದದೊಡ್ಡಿ ಗ್ರಾಮದಲ್ಲಿ ನಡೆದಿದೆ. ಜಮೀನಿನ ಹೊಂಡದಲ್ಲಿ ಹಸುವನ್ನು ತೊಳೆಯಲು ಹೋಗಿದ್ದ ಬಾಲಕ ಕಸಬಾ ಹೋಬಳಿಯ ಹುಣಸೆಮರದೊಡ್ಡಿ ಗ್ರಾಮದ ಹನ್ನೋದು ವರ್ಷದ ಬಾಲಕ ದೀಪು ಹಾಗೂ ಆತನ ಸಂಬ0ಧಿಯಾದ ಭಾರತಿ(3೦) ಎಂದು ಗುರುತಿಸಲಾಗಿದೆ. ಬಾಲಕ ಕಾಲು ಜಾರಿ ನೀರು ಪಾಲಾಗುತ್ತಿರುವುದನ್ನು ಕಂಡ ಭಾರತಿ ಬಾಲಕನನ್ನು ಪಾರುಮಾಡಲು ಹೋಗಿ ಇಬ್ಬರು ಕೆಸರಿನಲ್ಲಿ...
ಹೆಚ್ಚಿನ ಸುದ್ದಿ

ಕೋವಿಡ್-19 ಲಸಿಕೆ ಜಾಗತಿಕ ಬೇಡಿಕೆ ಹೆಚ್ಚಳದ ಪರಿಣಾಮವಾಗಿ 2 ಶತಕೋಟಿ ಡೋಸ್ ಲಸಿಕೆ ಉತ್ಪಾದನೆ: ಬಯೋಎನ್‌ಟೆಕ್ ಕಹಳೆ ನ್ಯೂಸ್

ಜರ್ಮನಿ: ಕೋವಿಡ್-19 ಲಸಿಕೆ ಜಾಗತಿಕ ಬೇಡಿಕೆ ಹೆಚ್ಚಳದ ಪರಿಣಾಮವಾಗಿ 2 ಶತಕೋಟಿ ಡೋಸ್ ಲಸಿಕೆ ಉತ್ಪಾದನೆ ಮಾಡುವ ಯೋಜನೆಯನ್ನು ಜರ್ಮನ್ ಮೂಲದ ಔಷದ ತಯಾರಿಕಾ ಕಂಪೆನಿ ಬಯೋಎನ್‌ಟೆಕ್ ಪ್ರಕಟಿಸಿದೆ. ಈ ಹಿಂದೆ 2021 ದ ಅವಧಿಯಲ್ಲಿ 130 ಕೋಟಿ ನಿರ್ಧಾರಿಸಿತ್ತು ಆದರೆ ಇದಕ್ಕಿಂದ 50 ಶೇ. ಹೆಚ್ಚು ಉತ್ಪಾದಿಸಲು ಯೋಜಿಸಿದ್ದು 200 ಕೋಟಿ ಡೋಸ್ ಉತ್ಪಾದಿಸಲು ಯೋಜಿಸಲಾಗಿದೆ. ಅಮೆರಿಕಾ ಮೂಲದ ಫೈಝರ್ ಸಹಯೋಗದಲ್ಲಿ ಬಯೋಎನ್‌ಟೆಕ್ ಕೊರೊನಾ ಲಸಿಕೆ ಅಭಿವೃದ್ಧಿ ಪಡಿಸಿದ್ದು...
ಹೆಚ್ಚಿನ ಸುದ್ದಿ

ಭಾರತದಲ್ಲಿ ಮಾನವ ರಹಿತ ಗಗನಯಾನ ಯೋಜನೆ 2021 ರ ಡಿಸೆಂಬರ್‌ನಲ್ಲಿ ಆರಂಭ-ಕಹಳೆ ನ್ಯೂಸ್

ನವದೆಹಲಿ: ಭಾರತದಲ್ಲಿ ಮೊಟ್ಟ ಮೊದಲ ಮಾನವ ರಹಿತ ಗಗನಯಾನ ಯೋಜನೆ 2021 ರ ಜನವರಿಯಲ್ಲಿ ಆರಂಭವಾಗಲಿದೆ ಎಂದು ಸೋಮವಾರ ಬಜೆಟ್ ಮಂಡನೆಯ ವೇಳೆ ವಿತ್ತ ಸಚಿವೆ ನಿರ್ಮಾಲ ಸೀತಾರಾಮನ್ ಹೇಳಿದ್ದಾರೆ. ಅವರು ‘ಇಸ್ರೋ ಕೈಗೊಳ್ಳಲಿರುವ ಮಹಾತ್ವಾಕಾಂಕ್ಷೆಯ ದೇಶದ ಪ್ರಪ್ರಥಮ ಮಾನವ ಸಹಿತ ಗಗನಯಾನ ಯೋಜನೆಯ ಭಾಗವಾಗಿ ನಾಲ್ಕು ಜನ ಗಗನಯಾನಿಗಳು ರಷ್ಯಾದಲ್ಲಿ ತರಬೇತಿಯನ್ನು ಪಡೆಯುತ್ತಿದ್ದು, 2022 ರ ವೇಳೆಗೆ ಮಾನವ ಸಹಿತ ಗಗನಯಾನವನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ’ ಎಂದು ಹೇಳಿ, ಇದರ...
ಹೆಚ್ಚಿನ ಸುದ್ದಿ

ಕೋಳಿ ಅಂಕಕ್ಕೆ ಪೊಲೀಸ್ ದಾಳಿ ನಡೆಸಿ ವಶಕ್ಕೆ ಪಡೆದ 4 ದ್ವಿಚಕ್ರ ವಾಹನಗಳು ಬೆಂಕಿಗಾಹುತಿ-ಕಹಳೆ ನ್ಯೂಸ್

ತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಬಳಿ ಕೋಳಿ ಅಂಕದ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದ ದ್ವಿಚಕ್ರ ವಾಹನಗಳನ್ನು ಸಾಗಾಟ ಮಾಡುವಾಗ ಬೈಕ್‍ಗಳು ದಾರಿ ಮಧ್ಯೆಯೇ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಕೋಣಂದೂರಿನ ಕಾಡು ಮಾರ್ಗಗಳಲ್ಲಿ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದವರೆಲ್ಲಾ ವಾಹನಗಳನ್ನು ಬಿಟ್ಟು ಪರಾರಿಯಾಗಿದ್ದರು. ಘಟನಾ ಸ್ಥಳದಲ್ಲಿದ್ದ ದ್ವಿಚಕ್ರ ವಾಹನಗಳನ್ನು ವಶಪಡಿಸಿದ ಪೊಲೀಸರು, ಬೈಕ್‍ಗಳನ್ನು...
ಹೆಚ್ಚಿನ ಸುದ್ದಿ

ಫೆಬ್ರುವರಿ 6 ರಂದು ಇಂಟರ್ನೆಟ್ ನಿಷೇಧವನ್ನು ವಿರೋಧಿಸಿ, ದೇಶಾದ್ಯಂತ ‘ಚಕ್ಕಾ ಜಾಮ್’ಗೆ ಕರೆ ನೀಡಿದ ರೈತ ಮುಖಂಡರು-ಕಹಳೆ ನ್ಯೂಸ್

ನವದೆಹಲಿ : ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ರೈತರು ಪ್ರತಿಭಟಿಸುತ್ತಿರುವ ಸಮೀಪವಿರುವ ಪ್ರದೇಶಗಳಲ್ಲಿ ಇಂಟರ್ನೆಟ್ ನಿಷೇಧ ಹಾಗೂ ಅಧಿಕಾರಿಗಳು ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ರೈತ ಸಂಘಗಳು, ದೇಶಾದ್ಯಂತ 'ಚಕ್ಕಾ ಜಾಮ್' (ರಸ್ತೆ ಬಂದ್) ಘೋಷಿಸಿವೆ. ಈ ಕುರಿತು ಇಂಟರ್ನೆಟ್ ನಿಷೇಧವನ್ನು ವಿರೋಧಿಸಿ ಫೆಬ್ರುವರಿ 6 ರಂದು ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರ ನಡುವೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ಮೂರು ಗಂಟೆಗಳ...
ಹೆಚ್ಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ-ಕಹಳೆ ನ್ಯೂಸ್

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಪೂಜ್ಯ ಧರ್ಮದರ್ಶಿಗಳಾದ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಭೇಟಿಯ ಸಮಯದಲ್ಲಿ ಶ್ರೀಗಳೊಂದಿಗೆ ಚರ್ಚಿಸುತ್ತಾ, ರಾಜ್ಯ ಸರ್ಕಾರವು ಅಚ್ಚುಕಟ್ಟು ಪ್ರದೇಶದ ಸರ್ವತೋಮುಖ ಅಭಿವೃದ್ದಿಗಾಗಿ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಅಧಿನಿಯಮ 1980ರ ಕಾಯ್ದೆಯಡಿ ಕಾಡ ಪ್ರಾಧಿಕಾರವು 1979ನೇ ಇಸವಿಯಲ್ಲಿ ಸ್ಥಾಪನೆ ಮಾಡಿತು. ಈ ಒಂದು ಪ್ರಾಧಿಕಾರಕ್ಕೆ ಮಲೆನಾಡು,...
1 105 106 107 108 109 174
Page 107 of 174