Tuesday, March 17, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ತಿರುಪತಿ ತಿಮ್ಮಪ್ಪನ ಸನ್ನಿಧಾನದ ಬೆಟ್ಟವನ್ನೇರುವ ಸಂದರ್ಭದಲ್ಲಿ ಭಕ್ತರನ್ನು ಬೆದರಿಸಿ ದರೋಡೆಗೆ ಯತ್ನಿಸಿದ ದರೋಡೆಕೋರರು-ಕಹಳೆ ನ್ಯೂಸ್

ತಿರುಪತಿ : ಶ್ರೀಮಂತ ದೇಗುಲವೆಂಬ ಖ್ಯಾತಿಗೆ ಪಾತ್ರವಾಗಿರುವ ತಿರುಪತಿ ತಿರುಮಲ ದೇವಸ್ಥಾನದಲ್ಲೀಗ ಭಕ್ತರಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ತಿರುಪತಿ ತಿಮ್ಮಪ್ಪನ ಸನ್ನಿಧಾನದ ಬೆಟ್ಟವನ್ನೇರುವ ಸಂದರ್ಭದಲ್ಲಿ ಭಕ್ತರನ್ನು ಬೆದರಿಸಿ ದರೋಡೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಭಕ್ತರು ಬೆಚ್ಚಿಬಿದ್ದಿದ್ದಾರೆ. ಕರ್ನೂಲ್ ಮೂಲದ ಸುನಿಲ್ ಮತ್ತು ಅವರ ಪತ್ನಿ ತನ್ನಿಬ್ಬರು ಮಕ್ಕಳೊಂದಿಗೆ ತಡರಾತ್ರಿ ಅಲಿಪಿರಿಯಿಂದ ತಿರುಮಲ ಬೆಟ್ಟವನ್ನೇರುತ್ತಿದ್ದರು. ಈ ವೇಳೆಯಲ್ಲಿ ಕಳ್ಳರ ಗುಂಪೊಂದು ಕುಟುಂಬವನ್ನು ಅಡ್ಡಗಟ್ಟಿ ದರೋಡೆಗೆ ಯತ್ನಿಸಿದ್ದು, ಇನ್ನೂ ದೇವಸ್ಥಾನವನ್ನು ತಲುಪಲು...
ಹೆಚ್ಚಿನ ಸುದ್ದಿ

ಚಿಕ್ಕೋಡಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದವನಿಗೆ ಸಾರ್ವಜನಿಕರಿಂದ ಹಿಗ್ಗಾ ಮುಗ್ಗಾ ಥಳಿತ- ಕಹಳೆ ನ್ಯೂಸ್

ಬೆಳಗಾವಿ: ಹಾಡಹಗಲೇ ಬೈಕ್ ಕದಿಯಲು ಯತ್ನಿಸಿದ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಮಾರುಕಟ್ಟೆಯಲ್ಲಿ ನಡೆದಿದೆ. ಶಿವಾಜಿ ಸಲಗರ ಎಂಬ ವ್ಯಕ್ತಿ ಹಾಡು ಹಗಲೇ ಮಾರುಕಟ್ಟೆ ಪ್ರದೇಶದಲ್ಲಿ ಬೈಕ್ ಕಳ್ಳತನ ಮಾಡಲು ಬಂದಿದ್ದನು. ಕಳ್ಳತನ ಮಾಡೊದನ್ನು ನೋಡಿದ ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದು, ಬಳಿಕ ಪೊಲೀಸರಿಗೆ ಆರೋಪಿಯನ್ನು ಒಪ್ಪಿಸಿದ್ದಾರೆ. ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ....
ಹೆಚ್ಚಿನ ಸುದ್ದಿ

ರಾಮದುರ್ಗದಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ-ಕಹಳೆ ನ್ಯೂಸ್

ರಾಮದುರ್ಗ : ರಾಮದುರ್ಗ ಪಟ್ಟಣದಲ್ಲಿ ಮಂಗಳವಾರ ಬೆಳಿಗ್ಗೆ ಒಂದೇ ಕುಟುಂಬದ ನಾಲ್ಕು ಜನರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು 37 ಪ್ರಾಯದ ಪ್ರವೀಣ ರಮೇಶ ಶೆಟ್ಟರ್, ಮತ್ತು 27 ಪ್ರಾಯದ ಪತ್ನಿ ರಾಜೇಶ್ವರಿ, ಹಾಗೂ ಮಕ್ಕಳಾದ 8 ವರ್ಷದ ಅಮೃತಾ ಮತ್ತು 6 ವರ್ಷದ ಅದ್ವಿಕ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಶಾಸಕ ಮಹಾದೇವಪ್ಪ ಯಾದವಾಡ, ಸಿ.ಪಿ.ಐ ಶಶಿಕಾಂತ ಮರ್ಮಾ...
ಹೆಚ್ಚಿನ ಸುದ್ದಿ

ಗರ್ಡಾಡಿಯಲ್ಲಿ ಕುಡಿದ ಮತ್ತಿನಲ್ಲಿ ತಂದೆಯನ್ನು ಕೊಂದ ಮಗ-ಕಹಳೆ ನ್ಯೂಸ್

ಗರ್ಡಾಡಿ: ಗರ್ಡಾಡಿಯಲ್ಲಿ ತಂದೆಯನ್ನು ಕುಡಿದ ಮತ್ತಿನಲ್ಲಿ ಪಕ್ಕಾಸ್ ತುಂಡಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ನಡೆದಿದೆ. ಇಲ್ಲಿನ ಮುಂಡ್ಯೋಟ್ಟು ಮನೆಯ ನಿವಾಸಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಶ್ರೀಧರ ಪೂಜಾರಿಯನ್ನು ಸಣ್ಣ ವಿಚಾರಕ್ಕೆ ಪಾಪಿ ಪುತ್ರ ಹರೀಶ್ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂದಿಸಿದ್ದಾರೆ....
ಹೆಚ್ಚಿನ ಸುದ್ದಿ

ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ : ಶಾಸಕ ಡಾ. ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್

ಕಾವೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬೊಂದೇಲ್‍ನಲ್ಲಿರುವ ಸರಕಾರಿ ಮಹಿಳಾ ಪಾಲಿಟೆಕ್ನಿಕ್ ವಿದ್ಯಾರ್ಥಿನಿ ನಿಲಯದ ನೂತನ ವಿದ್ಯಾರ್ಥಿ ನಿಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಡಾ. ಭರತ್ ಶೆಟ್ಟಿ ವೈ ಸರಕಾರ ಶಿಕ್ಷಣದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಲ್ಲ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿರುತ್ತದೆ. ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ 1 ಕೋಟಿ ರೂ. ಅನುದಾನದಲ್ಲಿ ನೂತನ ವಿದ್ಯಾರ್ಥಿ ನಿಲಯ ನಿರ್ಮಾಣವಾಗಿದೆ ಎಂದು...
ಹೆಚ್ಚಿನ ಸುದ್ದಿ

ಪೆಟ್ರೋಲ್ ಮತ್ತು ಡೀಸೇಲ್ ದರ ಲೀಟರ್‌ಗೆ ತಲಾ 25 ಪೈಸೆ ಹೆಚ್ಚಳ -ಕಹಳೆ ನ್ಯೂಸ್

ಜನವರಿ 18ರಿಂದ ದೆಹಲಿಯಲ್ಲಿ ಪೆಟ್ರೋಲ್ ದರವು ಲೀಟರ್‌ಗೆ ರೂ. 84.95 ತಲುಪಿದೆ. ತೈಲ ಮಾರ್ಕೆಟಿಂಗ್ ಕಂಪನಿಗಳ ಅಧಿಸೂಚನೆ ಅನ್ವಯ ದೆಹಲಿ ಮತ್ತು ಇತರ ಕಡೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಲೀಟರ್‌ಗೆ ತಲಾ 25 ಪೈಸೆಗಳ ಸರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಪೆಟ್ರೋಲ್-ಡೀಸೆಲ್ ಮೇಲೆ ಹಾಕಿರುವ ಅಬಕಾರಿ ಸುಂಕ 48% ಆಗಿದ್ದು, 2020ರ ಏಪ್ರಿಲ್ ನಿಂದ ನವೆಂಬರ್ ತಿಂಗಳವರೆಗೆ ಅಬಕಾರಿ ಸುಂಕ 1,96,342 ಕೋಟಿ, ಹಾಗೆಯೇ...
ಹೆಚ್ಚಿನ ಸುದ್ದಿ

ಶಿಶು ಮಾರಾಟ ಜಾಲ ಪ್ರಕರಣ ಸಂಬಂಧಿಸಿದಂತೆ ಆರು ಮಹಿಳೆಯರ ಸಹಿತ ಎಂಟು ಮಂದಿ ಬಂಧನ-ಕಹಳೆ ನ್ಯೂಸ್

ಮುಂಬೈ: ಮಕ್ಕಳ ಬೃಹತ್ ಮಾರಾಟ ಜಾಲ ಪ್ರಕರಣ ಸಂಬಂಧ ಆರು ಮಹಿಳೆಯರ ಸಹಿತ ಎಂಟು ಮಂದಿಯನ್ನು ಮುಂಬೈ ಪೊಲೀಸರು ಬಂದಿಸಿದ್ದಾರೆ. ಕಳೆದ ಆರು ತಿಂಗಳಲ್ಲಿ ಈ ತಂಡ ನಾಲ್ಕು ಶಿಶುಗಳನ್ನು ಮಾರಾಟ ಮಾಡಿದೆ. ಇವರ ತಂಡವನ್ನು ಪೊಲೀಸ್ ಅಧಿಕಾರಿಗಳಾದ ಯೋಗೇಶ್ ಚವಾಣ್ ಮತ್ತು ಮನಿಷ್ ನೇತೃತ್ವದ ತಂಡ ಈ ಪ್ರಕರಣ ಬಯಲಿಗೆಳೆದಿದೆ. ರುಕ್ಸಾರ್ ಶೇಖ್, ಶಾಹಜಹಾನ್ ಹಾಗೂ ರೂಪಾಲಿ ವರ್ಮ ಈ ತಂಡದ ಪ್ರಮುಖ ಸದಸ್ಯರಾಗಿದ್ದಾರೆ. ಇವರು 60000 ರೂಪಾಯಿಗೆ...
ಹೆಚ್ಚಿನ ಸುದ್ದಿ

ಅರಣ್ಯ ಇಲಾಖೆಯ ಅರೆಕಾಲಿಕ ನೌಕರನೊಬ್ಬ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿಟ್ಟು ಕಚೇರಿಯಲ್ಲಿ ನೇಣಿಗೆ ಶರಣು-ಕಹಳೆ ನ್ಯೂಸ್

ಗಂಗಾವತಿ : ನಿವೃತ್ತಿ ಅಂಚಿನಲ್ಲಿದ್ದ ಅರಣ್ಯ ಇಲಾಖೆಯ ಅರೆಕಾಲಿಕ ನೌಕರನೊಬ್ಬ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಅರಣ್ಯ ಇಲಾಖೆಯಲ್ಲಿ ಕ್ಷೇಮನಿಧಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ, ಸೋಮವಾರ ಬೆಳಗ್ಗೆ ಕಚೇರಿಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ನೌಕರನನ್ನು 59 ಪ್ರಾಯದ ಟಿ.ಮಲ್ಲಿಕಾರ್ಜುನ ಎಂದು ಗುರುತಿಸಲಾಗಿದೆ. ಕಳೆದ 37 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಅರೆಕಾಲಿಕ ನೌಕರನಾಗಿ ಕೆಲಸ ಮಾಡುತ್ತಿದ್ದ ಇವರು ಇದೇ ವರ್ಷ ಮೇ...
1 113 114 115 116 117 174
Page 115 of 174