Tuesday, March 17, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ: ಪಂಜಾಬ್ ನಲ್ಲಿ ಬಿಜೆಪಿ ಕಚೇರಿ ಮೇಲೆ ದಾಂಧಲೆ, ಮೊಬೈಲ್ ಟವರ್ ಗೆ ಹಾನಿ – ಕಹಳೆ ನ್ಯೂಸ್

ಚಂಡೀಗಢ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಬಗ್ಗೆ ಪ್ರತಿಭಟನೆ ತೀವ್ರವಾಗಿರುವುದರ ಮಧ್ಯೆ, ರೈತರು ಇತ್ತೀಚೆಗೆ ತಾಳ್ಮೆ ಕಳೆದುಕೊಂಡಂತೆ ಕಾಣುತ್ತಿದೆ. ನಿನ್ನೆ ಶುಕ್ರವಾರ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣ ವರದಿಯಾಗಿದೆ. ಪಂಜಾಬ್ ರಾಜ್ಯದ ಬಟಿಂಡಾದಲ್ಲಿ ರೈತರು ಬಿಜೆಪಿ ಕಚೇರಿ ಮೇಲೆ ಗುರಿಯಾಗಿಟ್ಟು ದಾಳಿ ಮಾಡಿದ್ದಾರೆ. ನಿನ್ನೆ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಮಯದಲ್ಲಿ...
ಹೆಚ್ಚಿನ ಸುದ್ದಿ

ಉಳ್ಳಾಲ: ಜಾತ್ರೆಯಿಂದ ಬರುತ್ತಿದವರಿಗೆ ಅಡ್ಡಿಯಾದ ಜವರಾಯ: ಬೈಕ್ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಉಳ್ಳಾಲ: ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚೆಂಬುಗುಡ್ಡೆ ಬಳಿ ಶನಿವಾರ ನಸುಕಿನ ಜಾವ ನಡೆದಿದೆ. ಸಂತೋಷನಗರ ನಿವಾಸಿ ಸಂದೇಶ್ ಕೆರೆಬೈಲ್ (38) ಸಾವನ್ನಪ್ಪಿದವರು. ಸುಮಾರು 3 ಗಂಟೆಯ ವೇಳೆ ಈ ಅಪಘಾತ ನಡೆದಿದ್ದು, ಸಂದೇಶ್ ಅವರು ಕೊಲ್ಯ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮನೆಗೆ ವಾಪಸ್ಸಾಗುತ್ತಿದ್ದರು. ಅಪಘಾತದ ಪರಿಣಾಮ ಸಂದೇಶ್ ರಸ್ತೆಗುರುಳಿ ಬಿದ್ದಿದ್ದು, ತಲೆಗೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ...
ಹೆಚ್ಚಿನ ಸುದ್ದಿ

ಅಂತರ್ರಾಷ್ಟ್ರೀಯ ಜಿನಸಮ್ಮಿಲನ 2020 ರ ಅಂಗವಾಗಿ ಆಯೋಜಿಸಿದ್ದ ಕವನವಾಚನ ಸ್ಪರ್ಧೆಯಲ್ಲಿ ಕಡಬದ ಯುವಪ್ರತಿಭೆ ಸಮ್ಯಕ್ತ್ ಜೈನ್ ಗೆ ಪ್ರಥಮ ಸ್ಥಾನ- ಕಹಳೆ ನ್ಯೂಸ್

ಕೊರೋನಾ ಕಾಲಘಟ್ಟದಲ್ಲಿ ನಡೆಯುತ್ತಿರುವ ಹಲವಾರು ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೌಲ್ಯವನ್ನು ಜನರಲ್ಲಿ ಉತ್ಕೃಷ್ಟಗೊಳಿಸುತ್ತಿದ್ದು ಇದಕ್ಕೊಂದು ಸೂಕ್ತ ಮಾದರಿಯಾಗಿ ಹೊರಹೊಮ್ಮಿದೆ. ಭಾರತೀಯ ಜೈನ್ ಮಿಲನ್ ವಲಯ 8 , ಇದರ ಸುಹಾಸ್ತಿ ಯುವ ಜೈನ್ ಮಿಲನ್ ಬೆಂಗಳೂರು ಮತ್ತು ಕರ್ನಾಟಕದಲ್ಲಿ ಜೈನ ಧರ್ಮ ಫೇಸ್‌ಬುಕ್‌ ಫೇಜ್ ಜಂಟಿಯಾಗಿ ಜಿನಸಮ್ಮಿಲನ ಕಾರ್ಯಕ್ರಮ ನಡೆಸಿತು. ಈ ಅಂತರ್ರಾಷ್ಟ್ರೀಯ ಜಿನಸಮ್ಮಿಲನ 2020 ಕಾರ್ಯಕ್ರಮದ ಅಂಗವಾಗಿ ಇತ್ತೀಚೆಗೆ "ಜೈನ ಧರ್ಮ " ವಿಷಯಾಧಾರಿತ ಸ್ವರಚಿತ ಕವನ ವಾಚನ...
ಹೆಚ್ಚಿನ ಸುದ್ದಿ

ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಡಳಿತ ಮಂಡಳಿಯಿಂದ ಮತ್ತು ಸಿಬ್ಬಂದಿಗಳ ಪರವಾಗಿ ಹಿರಿಯ ಶಿಕ್ಷಕಿ ಶಾಲಿನಿ ನೋಂಡ ಅವರಿಗೆ ಬೀಳ್ಕೊಡುಗೆ ಸನ್ಮಾನ ಕಾರ್ಯಕ್ರಮ- ಕಹಳೆ ನ್ಯೂಸ್

ವಿಟ್ಲ: ಸಂಸ್ಥೆಯಲ್ಲಿ ಸೇವಾ ನಿಯೋಜನೆಗೊಂಡಾಗ ಹುದ್ದೆ ಮುಖ್ಯವಾಗದೆ ಜವಾಬ್ದಾರಿ ಹೆಚ್ಚಾಗಬೇಕು. ಅಲ್ಲಿ ಶ್ರದ್ದೆ, ಹೊಂದಾಣಿಕೆ ಇದ್ದು ಸಂಸ್ಥೆಗೆ ಪುಷ್ಟಿದಾಯಕವಾಗಿ ಕೆಲಸ ನಿರ್ವಹಿಸಬೇಕು ಎಂದು ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಹಿರಿಯ ಶಿಕ್ಷಕಿ ಶಾಲಿನಿ ನೋಂಡ ಹೇಳಿದರು. ಅವರು ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಡಳಿತ ಮಂಡಳಿಯಿಂದ ಮತ್ತು ಸಿಬ್ಬಂದಿಗಳ ಪರವಾಗಿ ಬೀಳ್ಕೊಡುಗೆ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಹಾಗೆಯೇ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಅಧ್ಯಕ್ಷ ಯಲ್.ಯನ್. ಕೂಡೂರು ಅವರು...
ಹೆಚ್ಚಿನ ಸುದ್ದಿ

ಕಂಠಿ, ಸಾಹೇಬ ಚಿತ್ರದ ನಿರ್ದೇಶಕ `ಭರತ್’ ಇನ್ನಿಲ್ಲ – ಕಹಳೆ ನ್ಯೂಸ್

ಬೆಂಗಳೂರು : ಸ್ಯಾಂಡಲ್ ವುಡ್ ನ ಯುವ ನಿರ್ದೇಶಕ ಭರತ್ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿ. 24 ರ ರಾತ್ರಿ 11 ಗಂಟೆಗೆ ನಿಧನರಾಗಿದ್ದಾರೆ. ರೋರಿಂಗ್ ಸ್ಟಾರ್ ಶ್ರೀಮುರುಳಿ ನಟನೆಯ ಕಂಠಿ, ರವಿಚಂದ್ರನ್ ಪುತ್ರ ಮನೋರಂಜನ್ ನಟನೆಯ ಸಾಹೇಬ ಚಿತ್ರವನ್ನು ನಿರ್ದೇಶಿಸಿದ್ದ ಭರತ್ ಬಹುದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಕಳೆದೊಂದು ವಾರದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ....
ಹೆಚ್ಚಿನ ಸುದ್ದಿ

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತದ 65ನೇ ವರ್ಷದ ಮಹಾಸಭೆ – ಕಹಳೆ ನ್ಯೂಸ್

ವಿಟ್ಲ: ಕೋವಿಡ್ 19 ಹಿನ್ನಲೆಯಲ್ಲಿ ಕೆಲವೊಂದು ಲೋಪಗಳು ಆಗಿದ್ದು, ಸದಸ್ಯರ ಬೇಡಿಕೆಯಂತೆ ಮುಂದಿನ ಬಾರಿಗೆ ಅದನ್ನು ಸರಿಪಡಿಸಲಾಗುವುದು. ಹಾಗೂ ಕಲ್ಲಡ್ಕ ಶಾಖೆಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಒಪ್ಪಿಗೆ ಬೇಕಾಗಿದ್ದು, ಅದರ ನಿರೀಕ್ಷೆಯಲ್ಲಿದ್ದೇವೆ ಎಂದು ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತದ ಅಧ್ಯಕ್ಷ ಎಚ್. ಜಗನ್ನಾಥ ಸಾಲ್ಯಾನ್ ಹೇಳಿದರು. ಅವರು ಬುಧವಾರ ವಿಟ್ಲದ ಬೊಬ್ಬೆಕೇರಿ ಅಕ್ಷಯ ಸಮುದಾಯ ಭವನದಲ್ಲಿ ನಡೆದ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತದ...
ಹೆಚ್ಚಿನ ಸುದ್ದಿ

ಅಳಿಕೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ವಾರ್ಷಿಕ ಮಹಾಸಭೆ – ಕಹಳೆ ನ್ಯೂಸ್

ವಿಟ್ಲ: ಅಳಿಕೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ೨೦೧೯-೨೦ನೇ ವರ್ಷದಲ್ಲಿ ೧.೯೪ ಕೋಟಿ ವ್ಯವಹಾರ ನಡೆಸಿದೆ. ನೂತನ ಕಟ್ಟಡ ಕಾಮಗಾರಿ ಅಗತ್ಯವಿರುವ ಪರವಾನಿಗೆ ಲಭಿಸಿದ್ದು, ೮೭ ಲಕ್ಷ ವೆಚ್ಚದಲ್ಲಿ ಕಟ್ಟಡ ಕಾಮಗಾರಿ ನಡೆಸಲಾಗುವುದು ಎಂದು ಸಂಘದ ಅಧ್ಯಕ್ಷ ಕಾನ ಈಶ್ವರ ಭಟ್ ಹೇಳಿದರು. ಅವರು ಬುಧವಾರ ಅಳಿಕೆ ಶ್ರೀಸತ್ಯಸಾಯಿ ಲೋಕ ಸೇವಾ ಪ್ರಾರ್ಥನಾ ಮಂದಿರದಲ್ಲಿ ನಡೆದ ಅಳಿಕೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ...
ಹೆಚ್ಚಿನ ಸುದ್ದಿ

ಕೊಳ್ನಾಡು ಗ್ರಾಮದ ಕುಳಾಲುವಿನಲ್ಲಿ ಬಿಜೆಪಿ ಅಭ್ಯರ್ಥಿಯ ಮನೆ ಮುಂದೆ ಲಿಪಿಯಲ್ಲಿ ಬರೆದು ಹೊಡೆದ ತೆಂಗಿನಕಾಯಿ ಪತ್ತೆ- ಕಹಳೆ ನ್ಯೂಸ್

ವಿಟ್ಲ: ಕೊಳ್ನಾಡು ಗ್ರಾಮದ ಕುಳಾಲುವಿನಲ್ಲಿ ಬಿಜೆಪಿ ಅಭ್ಯರ್ಥಿಯ ಮನೆ ಸಂಪರ್ಕ ರಸ್ತೆಯಲ್ಲಿ ಮುಸ್ಸಂಜೆ ಹೊತ್ತಿಗೆ ಯಾವುದೋ ಲಿಪಿಯಲ್ಲಿ ಬರೆದು ತೆಂಗಿನಕಾಯಿ ಹೊಡೆದಿದ್ದು ಕಂಡುಬಂದಿದೆ. ಅದರ ಹಿಂಭಾಗದಲ್ಲಿ ಯಾವುದೊ ಲಿಪಿಯಲ್ಲಿ ಬರೆದಿದ್ದು, ಆದ್ದರಿಂದ ವಾಮಾಚಾರ ನಡೆಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ. ಬಂಡಮುಗೇರು ಕ್ರಾಸ್ ನಲ್ಲಿಯೂ ಒಂದು ಯಾವುದೇ ಲಿಪಿ ಇರದ ಮಾಮೂಲಿ ತೆಂಗಿನಕಾಯಿ ಮತ್ತು ಲಿಂಬೆ ಹುಳಿ ಒಡೆದಿರುವುದು ಕಂಡು ಬಂದಿದ್ದು, ಇದನ್ನು ಮನಗಂಡ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಕುಳಾಲಿನ ಕಾರಣಿಕ...
1 123 124 125 126 127 174
Page 125 of 174