Wednesday, June 17, 2026

ಹೆಚ್ಚಿನ ಸುದ್ದಿ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುಣಚ ಪಾಲಾಸ್ತಡ್ಕದಲ್ಲಿ ಇಂಟರ್ ಲಾಕ್ ಘಟಕದ ಸಿಸಿ ಕ್ಯಾಮಾರದ ಡಿವಿಆರ್ ನ್ನು ಮತ್ತು ದೇವರ ಪೋಟೋವನ್ನು ನೆಲದ ಮೇಲೆ ಸುಟ್ಟ ಪ್ರಕರಣ; ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದ ಪೋಲೀಸರು -ಕಹಳೆ ನ್ಯೂಸ್

ಪುಣಚ : ಪಿರ್ಯಾದಿದಾರರಾದ ಆನಂದಗೌಡರವರು ಬಂಟ್ವಾಳ ತಾಲೂಕು ಪುಣಚ ಗ್ರಾಮದ ಪಾಲಾಸ್ತಡ್ಕ ಎಂಬಲ್ಲಿ ಪತ್ನಿ ಹೆಸರಿನಲ್ಲಿ ಪಿ ಬಿ ಇಂಡಸ್ಟ್ರೀಸ್ ಇಂಟರ್ ಲಾಕ್ ಘಟಕವನ್ನು ನಡೆಸುತ್ತಿದ್ದು ಸದ್ರಿ ಘಟಕಕ್ಕೆ ಸಿಸಿ ಕ್ಯಾಮಾರವನ್ನು ಅಳವಡಿಸಿರುತ್ತಾರೆ. ದಿನಾಂಕ:28-09-2025 ರಂದು ಬೆಳಿಗ್ಗೆ 11.00 ಗಂಟೆಗೆ ಪಿರ್ಯಾದಿದಾರರು ಇಂಟರ್ ಲಾಕ್ ಘಟಕವನ್ನು ಪರೀಶಿಲಿಸಿ ನಂತರ 6.00 ಗಂಟೆಗೆ ಇಂಟರ್ ಲಾಕ್ ಘಟಕಕ್ಕೆ ಹೋದಾಗ ಯಾರೋ ಘಟಕದ ಬಾಗಿಲನ್ನು ಮುರಿದು ಇಂಟರ್ ಲಾಕ್ ಘಟಕಕ್ಕೆ ಅಕ್ರಮ ಪ್ರವೇಶ...
ರಾಜ್ಯಸುದ್ದಿಹೆಚ್ಚಿನ ಸುದ್ದಿ

ಶಬರಿಮಲೆ ವಿಗ್ರಹದಿಂದ ನಾಪತ್ತೆಯಾಗಿದ್ದ ಚಿನ್ನ ಕೊನೆಗೂ ಪತ್ತೆ.- ಕಹಳೆ ನ್ಯೂಸ್

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಚಿನ್ನದ ಮೂರ್ತಿಗಳ ಕಳ್ಳತನ ಪ್ರಕರಣವನ್ನು ಭೇದಿಸಲುವಲ್ಲಿ ಸ್ಥಳೀಯ ಪೊಲೀರು ಯಶಸ್ವಿಯಾಗಿದ್ದಾರೆ. ದ್ವಾರಪಾಲಕ ವಿಗ್ರಹಕ್ಕೆ ಹೊದಿಸಿದ 42.8 ಕೆಜಿ ತೂಕದ ಕವಚದಲ್ಲಿ 4.5 ಕೆಜಿ ಚಿನ್ನ ನಾಪತ್ತೆಯಾಗಿತ್ತು. ಈ ಬಗ್ಗೆ , ಈ ಬಗ್ಗೆ ತನಿಖೆ ನಡೆಸುವಂತೆ ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಭದ್ರತಾ ಅಧಿಕಾರಿಗಳಿಗೆ ಕೇರಳ ಹೈಕೋರ್ಟ್‌ ನಿರ್ದೇಶನ ನೀಡಿತ್ತು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಕೊಳ್ತಿಗೆ ಗ್ರಾಮೀಣ ದಸರಾ ಉದ್ಘಾಟನೆ ; ಹಿಂದೂ ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ 8 ಕೋಟಿ ಅನುದಾನ: ಶಾಸಕ ಅಶೋಕ್ ರೈ -ಕಹಳೆ ನ್ಯೂಸ್

ಪುತ್ತೂರು: ಶಾಸಕನಾದ ಬಳಿಕ ಹಿಂದೂ ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ ಒಟ್ಟು 8 ಕೋಟಿ ಅನುದಣಾನವನ್ನು ನೀಡಿದ್ದೇನೆ ಇದರ ಜೊತೆಗೆ ಇತರ ಧರ್ಮಿಯರ ಧಾರ್ಮಿಕ ಕೇಂದ್ರಗಳಿಗೂ ಅನುದಾನವನ್ನು ನೀಡಿದ್ದೇವೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಶಾರದೋತ್ಸವ ಸಮಿತಿ ಹಾಗೂ ಸುಙದರ ಯಕ್ಷಕಲಾ ವೇದಿಕೆ ವತಿಯಿಂದ ನಡೆದ ಕೊಳ್ತಿಗೆ ಗ್ರಾಮೀಣ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾವು ಎಲ್ಲರಿಗೂ ಒಳಿತನ್ನು ಬಯಸಬೇಕು,ಕೆಡುಕನ್ನು ಯಾರಿಗೂ ಬಯಸಬಾರದು. ಕೆಟ್ಟ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಬಳಂತಿಮೊಗರು ಸುವರ್ಣ ಕುಟುಂಬಸ್ಥರ ತರವಾಡು ದೈವಸ್ಥಾನಕ್ಕೆ ದಾನದ ರೂಪದಲ್ಲಿ ಕೃಷಿ ಭೂಮಿಯನ್ನು ಹಸ್ತಾಂತರ ಮಾಡಿದ ಮಹಾತಾಯಿ – ಕಹಳೆ ನ್ಯೂಸ್

ವಿಟ್ಲ : ಬಳಂತಿಮೊಗರು ಸುವರ್ಣ ಕುಟುಂಬಸ್ಥರ ತರವಾಡು ದೈವಸ್ಥಾನಕ್ಕೆ ದಾನದ ರೂಪದಲ್ಲಿ ಒಂದು ಎಕರೆ ಕೃಷಿ ಭೂಮಿಯನ್ನು ಹಸ್ತಾಂತರ ಮಾಡಲಾಯಿತು. ಬಳಂತಿಮೊಗರು ಸುವರ್ಣ ಕುಟುಂಬಸ್ಥರ ತರವಾಡು ದೈವಸ್ಥಾನದ ಶ್ರೀ ಮಲರಾಯ ,ಮಹಿಷಂದಾಯ, ಧೂಮಾವತಿ, ರಕ್ತೇಶ್ವರಿ, ಪಂಜುರ್ಲಿ, ಕಲ್ಕುಡ , ಕಲ್ಲುರ್ಟಿ , ನೆತ್ತೆರ್ ಕಣ್ ಹೀಗೆ ಪರಿವಾರ ದೈವದ ಸುವರ್ಣ ಕುಟುಂಬಸ್ಥರ ತರವಾಡು ಮನೆಗೆ ಎಲ್ಲರ ಪ್ರೀತಿಯ "ಕೊಟ್ಯದ ಅಪ್ಪೆ " ಎಂದು ಕರೆಯಲ್ಪಡುವ ಲೀಲಾ ಹೆಂಗ್ಸು ಇವರು ದೈವಸ್ಥಾನಕ್ಕೆ...
ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಯುವ ದಸರಾ’ದಲ್ಲಿ ಕುಂದಾಪುರ ಸುಜ್ಞಾನ ಪಿಯು ವಿದ್ಯಾರ್ಥಿಗಳ ನೃತ್ಯರೂಪಕದ ಮೆರುಗು – ಕಹಳೆ ನ್ಯೂಸ್

ಮೈಸೂರು: ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನಲ್ಲಿ ಆಯೋಜಿಸಿರುವ ಪ್ರತಿಷ್ಠಿತ ‘ಯುವ ದಸರಾ’ ವೇದಿಕೆಯಲ್ಲಿ ಕುಂದಾಪುರದ ಸುಜ್ಞಾನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು 'ಪರಿಸರ ಸಂರಕ್ಷಣೆ' ವಿಷಯ ಆಧರಿಸಿ ನೃತ್ಯಪ್ರದರ್ಶನ ನೀಡಿ ನೆರೆದಿದ್ದ ಸುಮಾರು 50 ಸಾವಿರಕ್ಕೂ ಹೆಚ್ಚು ಮಂದಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದಾರೆ. ಈ ಸ್ಪರ್ಧೆಗೆ ರಾಜ್ಯದ ವಿವಿಧೆಡೆಯ ಒಟ್ಟು 700 ಕಾಲೇಜುಗಳು ಭಾಗವಹಿಸಿದ್ದವು. ಅತ್ಯುತ್ತಮ ಪ್ರದರ್ಶನಕ್ಕಾಗಿ ಕೇವಲ 8 ಕಾಲೇಜುಗಳು ಆಯ್ಕೆಯಾಗಿದ್ದವು. ಅದರಲ್ಲಿ ಸುಜ್ಞಾನ ಪಿಯು ಕಾಲೇಜು ಕೂಡ ಒಂದಾಗಿರುವುದು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪಡ್ನೂರು ಗ್ರಾಮದ ಸೇಡಿಯಾಪು ಕೆದಿಮಾರ್ ರಸ್ತೆ: 25 ವರ್ಷಗಳ ವಿವಾದ ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ – ಕಹಳೆ ನ್ಯೂಸ್

ಪುತ್ತೂರು: ಪಡ್ನೂರು ಗ್ರಾಮದ ಸೇಡಿಯಾಪು ಕೆದಿಮಾರ್ ರಸ್ತೆಗೆ ಕೊನೆಗೂ‌ಮುಕ್ತಿ ದೊರಕಿದೆ. ರಸ್ತೆ ವಿವಾದದಿಂದ‌ಇಲ್ಲಿನ ಸುಮಾರು ಕುಟುಂಬಗಳು ನಿತ್ಯ ನರಕಯಾತನೆ ಅನುಭವಿಸುತ್ತಿದ್ದರು. ಈ ವಿಚಾರವನ್ನು ಶಾಸಕ ಅಶೋಕ್ ರೈ ಗಮನಕ್ಕೆ ತಂದ ಗ್ರಾಮಸ್ಥರು ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಿದ್ದರು. ವಿವಾದಯುತ ರಸ್ತೆಯ ವಿಚಾರವಾಗಿ ಮಾತುಕತೆ ನಡೆಸಿದ ಶಾಸಕರು ರಸ್ತೆ ವಿವಾದಕ್ಕೆ ತೆರೆ ಎಳೆದಿದ್ದಾರೆ. ಈ ಮೂಲಕ 25 ವರ್ಷಗಳ ನರಕಯಾತನೆಗೆ ಮುಕ್ತಿಯನ್ನು ನೀಡಿದ್ದಾರೆ. ರಸ್ತೆ ಮಾಡಿಸಿಕೊಟ್ಟ ಶಾಸಕ ಅಶೋಕ್ ರೈ ಅವರನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ಕಲಾ, ವಾಣಿಜ್ಯ ಮತ್ತು ವಿಜ್ಞಾನ(ಸ್ವಾಯತ್ತ) ಮಹಾವಿದ್ಯಾಲಯ ಇಲ್ಲಿನ ಎನ್‌ಸಿಸಿ, ರೆಡ್‌ಕ್ರಾಸ್ ಹಾಗೂ ಎನ್‌ಎಸ್‌ಎಸ್ ಘಟಕ ಹಾಗೂ ಕಾಲೇಜಿನ ಐಕ್ಯೂಎಸಿ ಇದರ ಸಹಯೋಗದಲ್ಲಿ ಪುತ್ತೂರಿನ ರೈಲ್ವೇ ಸ್ಟೇಷನ್ ಬಳಿ ಸ್ವಚ್ಛತಾ   ಕಾರ್ಯಕ್ರಮ  ನಡೆಯಿತು. ಸ್ವಚ್ಛತಾ ಹಿ ಸೇವಾ ಎನ್ನುವ ಅಭಿಯಾನದಡಿಯಲ್ಲಿ ನಡೆದ ಈ ಕರ‍್ಯದಲ್ಲಿ ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆ.ಭಾಮಿ ಅತುಲ್ ಶೆಣೈ, ಎನ್‌ಎಸ್‌ಎಸ್ ಅಧಿಕಾರಿ ಡಾ. ಅರುಣ್ ಪ್ರಕಾಶ್, ರೆಡ್ ಕ್ರಾಸ್ ಘಟಕದ ಸಂಯೋಜಕಿ ಡಾ.ದುರ್ಗಾ ರತ್ನ...
ಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಬಾಗಲಕೋಟೆಯಲ್ಲಿ ಘೋರ ದುರಂತ : ಭಾರಿ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು, ಬಾಲಕ ದುರ್ಮರಣ – ಕಹಳೆ ನ್ಯೂಸ್

ಬಾಗಲಕೋಟೆ : ನಿರಂತರ ಮಳೆಗೆ ಮನೆಯ ಮೇಲ್ಚಾವಣಿ ಗೋಡೆ ಕುಸಿದು ಬಾಲಕ ಸಾವನಪ್ಪಿದ್ದಾನೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದ್ದು, ದರ್ಶನ್ ಲಾತೂರ್ (11) ಎನ್ನುವ ಬಾಲಕ ಸಾವನಪ್ಪಿದ್ದು ಇನ್ನೊರ್ವ ಬಾಲಕ ಶ್ರೀಶೈಲ್ ಗೆ ಗಂಭೀರವಾದ ಗಾಯಗಳಾಗಿವೆ. ಇಂದು ಬೆಳಗಿನ ಜಾವ ಐದು ಗಂಟೆಗೆ ಮನೆಯ ಮೇಲ್ಚಾವಣಿ ಹಾಗೂ ಗೋಡೆ ಕುಸಿದು ಬಿದ್ದು ಈ ಒಂದು ದುರಂತ ಸಂಭವಿಸಿದೆ. ಮನೆಯ ಕೋಣೆಯಲ್ಲಿ...
1 11 12 13 14 15 174
Page 13 of 174