Saturday, June 20, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಬಜತ್ತೂರು ಗ್ರಾಮಸ್ಥರಿಂದ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕಾರ-ಕಹಳೆ ನ್ಯೂಸ್

ಬಜತ್ತೂರು: ಬಜತ್ತೂರು‌ ಗ್ರಾಮದಲ್ಲಿ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳು ಕಳೆದ 15 ವರ್ಷಗಳಿಂದ ರೆಂಜಾಳ‌, ಸುಳ್ಯ, ಜಾನಪಾಲು ರಸ್ತೆಯನ್ನು ದುರಸ್ತಿಗೊಳಿಸದೆ, ಕೊಳಚೆ ನೀರಿನ ಸಮಸ್ಯೆಯನ್ನು ಕಡೆಗಣಿಸಿದ್ದಾರೆ. ಇದರಿಂದ ಬೇಸತ್ತ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ. ಹಾಗೆಯೇ ರೆಂಜಾಳ, ಸುಳ್ಯ, ಬೆದ್ರೋಡಿ, ಜಾನಪಾಲು ಗ್ರಾಮಸ್ಥರು ಈ ಮೂಲಕ ನಮ್ಮ ಸಮಸ್ಯೆಗೆ ಪರಿಹಾರ ಮಾಡುವ ಬದಲು ನಿಮ್ಮಲ್ಲಿ‌ ಒಗ್ಗಟಿಲ್ಲ ಅನ್ನುವ ವೇದವಾಕ್ಯ ಮುಂದಿಟ್ಟು ನಮ್ಮ ಸಮಸ್ಯೆಯನ್ನು ಕಡೆಗಣಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಿದ್ದಾರೆ....
ಹೆಚ್ಚಿನ ಸುದ್ದಿ

ಗೋ ಹತ್ಯೆ ನಿಷೇಧ ಕಾಯ್ದೆಗೆ ಜೆಡಿಎಸ್ ವಿರೋಧ: ಬಿಜೆಪಿಗೆ ಎದುರಾಯಿತು ಸಂಕಷ್ಟ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೋಹತ್ಯೆ ನಿಷೇಧಕ ವಿಧೇಯಕವನ್ನು ಜಾತ್ಯಾತೀತ ಜನತಾದಳ ಪಕ್ಷವು ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಜೆಡಿಎಸ್ ಅಧ್ಯಕ್ಷ ಎಚ್ ಡಿ ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, 2010ರಲ್ಲಿ ಬಿಜೆಪಿ ಸರ್ಕಾರ ಈ ಕಾಯ್ದೆಯನ್ನು ತಂದಾಗ ನಾವು ವಿರೋಧಿಸಿದ್ದೆವು. ಇದೀಗ ಬಿಜೆಪಿ ಸರ್ಕಾರ ಮತ್ತೊಮ್ಮೆ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ. ಹೀಗಾಗಿ ಈ...
ಹೆಚ್ಚಿನ ಸುದ್ದಿ

ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಪುಣ್ಯತಿಥಿ : ಪ್ರಧಾನಿಯಿಂದ ಗೌರವ ನಮನ – ಕಹಳೆ ನ್ಯೂಸ್

ನವದೆಹಲಿ: ಭಾರತದ ಏಕೀಕರಣದ ಪಿತಾಮಹ, ಉಕ್ಕಿನ ಮನುಷ್ಯ, ದೇಶದ ಮೊದಲ ಕಾಂಗ್ರೆಸ್ ಸರ್ಕಾರದ ಗೃಹ ಮಂತ್ರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ , ಬಲವಾದ ಮತ್ತು ಸಮೃದ್ಧ ಭಾರತಕ್ಕೆ ಅಡಿಪಾಯ ಹಾಕಿದ್ದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯ ತಿಥಿ ಹಿನ್ನೆಲೆಯಲ್ಲಿ ಗೌರವ ಸಲ್ಲಿಸುತ್ತಿದ್ದೇನೆ. ಸರ್ದಾರ್ ಪಟೇಲ್...
ಹೆಚ್ಚಿನ ಸುದ್ದಿ

ಶಬರಿಮಲೆ ಭಕ್ತರ ಸಂಖ್ಯೆಯನ್ನು ಹೆಚ್ಚಿಸುವಂತೆ ಹೈಕೋರ್ಟ್ ಗೆ ಮಾಹಿತಿ ನೀಡಿದ ‌ಕೇರಳ ಸರ್ಕಾರ-ಕಹಳೆ ನ್ಯೂಸ್

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಭಕ್ತರ ಪ್ರವೇಶದ ಸಂಖ್ಯೆಯನ್ನು ಹೆಚ್ಚಿಸಲು ‌ನಿರ್ಧಾರಿಸಿದೆ ಎಂದು ಕೇರಳ ಸರ್ಕಾರವು ಹೈಕೋರ್ಟ್ ಗೆ ಮಾಹಿತಿ ನೀಡಿದೆ. ವಾರ್ಷಿಕ ಮಕರವಿಳಕ್ಕು ಅವಧಿಯಲ್ಲಿ ಶಬರಿಮಲೆ ಯಾತ್ರೆಗೆ ತೆರಳಲು ಭಕ್ತರು ತುದಿಗಾಲಲ್ಲಿ ನಿಂತಿದ್ದಾರೆ.ಕೊರೋನಾ ವೈರಸ್ ಸೋಂಕಿನ ಭೀತಿ ಅನೇಕ ಕಠಿಣ ನಿಯಮಗಳ ನಡುವೆಯೂ ಭಕ್ತರ ಉತ್ಸವ ಕಡಿಮೆಯಾಗಿಲ್ಲ. ಆದರೆ ಭಕ್ತರಿಗೆ ಗುಂಪು ‌ಗುಂಪಾಗಿ ತೆರಳಲು ಅವಕಾಶ ನೀಡುತ್ತಿಲ್ಲ. ಆರಂಭದಲ್ಲಿ ವಾರದ ದಿನಗಳಲ್ಲಿ 1000 ಹಾಗೂ ವಾರಾಂತ್ಯ ಮತ್ತು...
ಹೆಚ್ಚಿನ ಸುದ್ದಿ

ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಚಾರ ಎಸಗಿದ ಅಪ್ರಾಪ್ತ ಬಾಲಕ-ಕಹಳೆ ನ್ಯೂಸ್

ರಾಣಿಬೆನ್ನೂರು: ನಾಲ್ಕು ವರ್ಷದ ಬಾಲಕಿಯ ಮೇಲೆ ಅಪ್ರಾಪ್ತನೊಬ್ಬ ಅತ್ಯಾಚಾರ ಎಸಗಿದ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ವಾಗೀಶನಗರದಲ್ಲಿ ಭಾನುವಾರ ನಡೆದಿದೆ. 14 ವರ್ಷದ ಬಾಲಕ ಯಾರು ಇಲ್ಲದ ವೇಳೆಯಲ್ಲಿ 4 ವರ್ಷದ ಬಾಲಕಿಯನ್ನು ತನ್ನ ಅಜ್ಜನ ಮನೆಗೆಂದು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಹೇಳಿದ್ರು, ಈ ಪ್ರಕರಣವು ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ಶಹರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ....
ಹೆಚ್ಚಿನ ಸುದ್ದಿ

ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ‌ತೆರವುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆ- ಕಹಳೆ ನ್ಯೂಸ್

ನವದೆಹಲಿ: ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ತೆರವುಗೊಳಿಸುವಂತೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಈ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 16 ರಂದು ಸುಪ್ರೀಂ ಕೋರ್ಟ್ ನಡೆಸಲಿದೆ. ರೈತರು ಮಾಡುವ ಪ್ರತಿಭಟನೆಯೂ ರಸ್ತೆ ತಡೆಗಳಿಂದಾಗಿ ಪ್ರಯಾಣಿಕರು ಸಮಸ್ಯೆಯನ್ನು ಎದುರಿಸುತ್ತಿದ್ದು, ಜನ ಗುಂಪು ಸೇರುವುದರಿಂದ ಕೋವಿಡ್ ಕೇಸ್ ಗಳ ಹೆಚ್ಚಳಕ್ಕೆ ಕಾರಣವಾಗಬಹುದು. ಹೀಗಾಗಿ ಪ್ರತಿಭಟನಾ ಸ್ಥಳದಿಂದ ರೈತರನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಿ ಕಾನೂನು ವಿದ್ಯಾರ್ಥಿ ರಿಷಭ್ ಶರ್ಮಾ ನ್ಯಾಯಾಲಯಕ್ಕೆ...
ಹೆಚ್ಚಿನ ಸುದ್ದಿ

ಇಂದು ಈ ವರ್ಷದ ಕೊನೆಯ ಸೂರ್ಯ ಗ್ರಹಣ-ಕಹಳೆ ನ್ಯೂಸ್

ಹೊಸದಿಲ್ಲಿ: ಈ ವರ್ಷದ ಕೊನೆಯ ಸೂರ್ಯ ಗ್ರಹಣ ಇಂದು ಸಂಭವಿಸಲಿದೆ. ಗ್ರಹಣದ ಸಂದರ್ಭದಲ್ಲಿ ಸೂರ್ಯನು ಆಂಶಿಕವಾಗಿ ಮುಚ್ಚಿದಂತೆ ಕಾಣುವುದರಿಂದ ಇದನ್ನು ಖಂಡಗ್ರಾಸ ಸೂರ್ಯಗ್ರಹಣ ಎನ್ನುತ್ತಾರೆ. ಸೂರ್ಯಗ್ರಹಣವು ಭಾರತೀಯ ಕಾಲಮಾನದ ಪ್ರಕಾರ ಡಿ.14ರ ಸಂಜೆ 7 ಗಂಟೆ 3 ನಿಮಿಷಕ್ಕೆ ಆರಂಭವಾಗಿ ಮಧ್ಯರಾತ್ರಿ 12.23 ನಿಮಿಷಕ್ಕೆ ಕೊನೆಗೊಳ್ಳುತ್ತದೆ. ಸಂಜೆ 7 ಗಂಟೆ ಮೂರು ನಿಮಿಷಕ್ಕೆ ಆರಂಭವಾಗುವುದರಿಂದ ಈ ಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ನೈಋತ್ಯ ಆಫ್ರಿಕಾ, ದಕ್ಷಿಣ ಅಮೆರಿಕ ಹಾಗೂ ಪೆಸಿಫಿಕ್‌ ಮಹಾಸಾಗರದ ಕೆಲವು...
ಹೆಚ್ಚಿನ ಸುದ್ದಿ

ವಿಟ್ಲ:  ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಡಿಸೆಂಬರ್ 16ರಂದು ಕೋವಿಡ್ ನಿಯಾಮಳಿಯಂತೆ ನಡೆಯಲಿದೆ ಕಾಲಾವಧಿ ಕಜಂಬು ಜಾತ್ರೆ; ಕೃಷ್ಣಯ್ಯ ಬಲ್ಲಾಳ್- ಕಹಳೆ ನ್ಯೂಸ್

ವಿಟ್ಲ:  ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಡಿಸೆಂಬರ್ 16ರಂದು ಅನುವಂಶಿಕ ಮೊಕ್ತೇಸರರಾದ ವಿಟ್ಲ ಅರಮನೆಯ ಬಂಗಾರು ಅರಸರ ಮುಂದಾಳತ್ವದಲ್ಲಿ ಕಾಲಾವಧಿ ಕಜಂಬು ಜಾತ್ರೆ ನಡೆಯಲಿದೆ. ಕೋವಿಡ್-19 ಕಾರಣ ಸರ್ಕಾರದ ನಿಯಮಾವಳಿಯಂತೆ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಕೃಷ್ಣಯ್ಯ ಬಲ್ಲಾಳ್ ಹೇಳಿದರು. ಹಾಗೆಯೇ ಡಿಸೆಂಬರ್15 ರಂದು ಧನು ಸಂಕ್ರಮಣದಂದು ಧ್ವಜಾರೋಹಣಗೊಂಡು ಡಿಸೆಂಬರ್ 16 ರಂದು ಕಜಂಬು ಉತ್ಸವ ನಡೆಯಲಿದ್ದು, ಕೊರೋನಾ ಇರುವುದರಿಂದ ಕಜಂಬಿನ ಮಕ್ಕಳನ್ನು ಸ್ನಾನ ಮಾಡಿಸುವ ಬದಲಾಗಿ ದೇವರ ತೀರ್ಥ...
1 131 132 133 134 135 174
Page 133 of 174