Saturday, June 20, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಶೈಕ್ಷಣಿಕ `ಶೂನ್ಯ ಕಲಿಕಾ ವರ್ಷ’ ಕುರಿತಂತೆ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ – ಕಹಳೆ ನ್ಯೂಸ್

ಬೆಂಗಳೂರು : ಶೈಕ್ಷಣಿಕ ಶೂನ್ಯ ಕಲಿಕಾ ವರ್ಷ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಶೂನ್ಯ ಕಲಿಕಾ ವರ್ಷ ಎಂಬ ಕಲ್ಪನೆ ಶಿಕ್ಷಣ ಇಲಾಖೆಯಲ್ಲಿ ಇಲ್ಲ ಎಂದು ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಸಚಿವರು, ಶೈಕ್ಷಣಿಕ ಕಲಿಕಾ ವರ್ಷ ಅಥವಾ ಜೀರೋ ಅಕಾಡೆಮಿಕ್ ಇಯರ್ ಎಂಬ ಪದ ಇತ್ತೀಚೆಗೆ ಹುಟ್ಟಿದೆ. ಈ ಕುರಿತು ಅನಗತ್ಯ ಗೊಂದಲ...
ಹೆಚ್ಚಿನ ಸುದ್ದಿ

Breaking News : ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ’43 ಅಪ್ಲಿಕೇಶನ್ʼಗಳು ಬ್ಯಾನ್:ಇಲ್ಲಿದೆ ಡಿಟೇಲ್ಸ್ -ಕಹಳೆ ನ್ಯೂಸ್

ನವದೆಹಲಿ: ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ಭಾರತದ 43 ಮೊಬೈಲ್ ಆಯಪ್ ಗಳನ್ನು ಬಳಕೆದಾರರು ಪ್ರವೇಶಿಸದಂತೆ ಭಾರತ ಸರ್ಕಾರ ಮಂಗಳವಾರ ನಿರ್ಬಂಧ ಹೇರಿದೆ. ಭಾರತದ ಸಾರ್ವಭೌಮತೆ, ಸಮಗ್ರತೆ, ರಕ್ಷಣೆ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಈ ಆಪ್ ಗಳ ಬಗ್ಗೆ ಮಾಹಿತಿ ಆಧರಿಸಿ ಕ್ರಮ ಕೈಗೊಳ್ಳಲಾಗಿದೆ. ಈ ಹಿಂದೆ 2020ರ ಜೂನ್ 29ರಂದು ಭಾರತ ಸರ್ಕಾರ 59 ಮೊಬೈಲ್ ಆಯಪ್ ಗಳ ಪ್ರವೇಶವನ್ನು ನಿರ್ಬಂಧಿಸಿತ್ತು...
ಹೆಚ್ಚಿನ ಸುದ್ದಿ

ಸಿಎಂಗಳ ಜತೆ ಪ್ರಧಾನಿ ಮೋದಿ ಸಭೆ ಮುಕ್ತಾಯ: ಕರೊನಾ ಲಸಿಕೆ ಬಗ್ಗೆ ಗುಡ್​ ನ್ಯೂಸ್​! – ಕಹಳೆ ನ್ಯೂಸ್

ಬೆಂಗಳೂರು: ಕೋವಿಡ್​-19 ಹೆಚ್ಚಾಗಿರುವ ಎಂಟು ರಾಜ್ಯದ ಮುಖ್ಯಮಂತ್ರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಅವರ ವರ್ಚುವಲ್​ ಸಭೆ ಮುಕ್ತಾಯವಾಗಿದ್ದು, ಲಸಿಕೆ ಹಂಚಿಕೆ ಹಾಗೂ ಚಳಿಗಾಲದಲ್ಲಿ ಕರೊನಾ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಾಗೃತರಾಗಿರಲು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ಸಭೆಯಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಎಂಟು ರಾಜ್ಯಗಳಿಂದ ಪ್ರಧಾನಿ ಮೋದಿ ಪ್ರತ್ಯೇಕವಾಗಿ ಮಾಹಿತಿ ಪಡೆದುಕೊಂಡರು. ಪ್ರಮುಖವಾಗಿ ಚಳಿಗಾಲದಲ್ಲಿ ಕರೊನಾ ಹೆಚ್ಚಾಗುವ ಸಾಧ್ಯತೆ ಹಿನ್ನಲೆ ಜಾಗೃತರಾಗಿರಲು ಸೂಚಿಸಿದರು. ಇದೇ ವೇಳೆ ಕೇಂದ್ರದಿಂದ ಲಸಿಕೆ ಬಗ್ಗೆ...
ಹೆಚ್ಚಿನ ಸುದ್ದಿ

ಕಾಪು : ಕಾರು ಡಿಕ್ಕಿ; ಪಾದಚಾರಿ ಮೃತ್ಯು – ಕಹಳೆ ನ್ಯೂಸ್

ಕಾಪು : ಕಾರೊಂದು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಚ್ಚಿಲ ಪೇಟೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಮೃತರನ್ನು ನಿಟ್ಟೆ ನಿವಾಸಿ ಸುಧಾಕರ ಶೆಟ್ಟಿ ಎಂದು ಗುರುತಿಸಲಾಗಿದೆ. ನರ್ಸರಿಯಲ್ಲಿ ಸಸಿ ಖರೀದಿಸಿ ಉಚ್ಚಿಲ ಪೇಟೆಯತ್ತ ಹೋಗುತ್ತಿದ್ದ ವೇಳೆ ಕುಂದಾಪುರದಿಂದ ಮಂಗಳೂರಿಗೆ ಚಲಿಸುತ್ತಿದ್ದ ಕಾರು ಢಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡ ಸುಧಾಕರ ಶೆಟ್ಟಿ ಅವರನ್ನು ಸ್ಥಳೀಯ ಯುವಕರ ಸಹಕಾರದಿಂದ ಆಂಬ್ಯುಲೆನ್ಸ್ ಮೂಲಕ ಉಡುಪಿಯ ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ಬಗ್ಗೆ...
ಹೆಚ್ಚಿನ ಸುದ್ದಿ

ನ.27ರಿಂದ ಪಾವಂಜೆ ನೂತನ ಮೇಳದ ತಿರುಗಾಟ ಆರಂಭ – ಕಹಳೆ ನ್ಯೂಸ್

ಪಾವಂಜೆ: ಯಕ್ಷಗಾನದ ಮೇಳ ಪರಂಪರೆಯಲ್ಲಿ ಹೊಸದಾಗಿ ಸೇರ್ಪಡೆಗೊಳ್ಳಲಿರುವ ಪಾವಂಜೆಯ ನಾಗವೃಜ ಕ್ಷೇತ್ರದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಮೇಳದ ತಿರುಗಾಟ ಆರಂಭವು ನ. 27 ರಂದು ಜರಗಲಿದೆ. ಪಾಂಡವಶ್ವಾಮೇಧ ಪ್ರಸಂಗದ ಮೂಲಕ ನೂತನ ಮೇಳವು ಮುಂದಿನ 6 ತಿಂಗಳ ಪ್ರದರ್ಶನದಲ್ಲಿ ಮೇ 25 ರವರೆಗೆ ಈಗಾಗಲೇ 156 ಪ್ರದರ್ಶನ ಬುಕ್ಕಿಂಗ್ ಆಗಿದೆ. ಆರಂಭದ ವರ್ಷದಲ್ಲಿ 50 ಸಾವಿರ ರೂಪಾಯಿಯ ವೀಳ್ಯವನ್ನು ಪಡೆದು ಕೊಳ್ಳಲಾಗುವುದು ಎಂದು ಮೇಳದ ಸಂಚಾಲಕ ಹಾಗೂ...
ಹೆಚ್ಚಿನ ಸುದ್ದಿ

‘ಲವ್ ಜಿಹಾದ್’ ವಿರುದ್ಧ ಕಾನೂನು ತರಲು ಹೊರಟ ಬಿಜೆಪಿಗೆ ಬಿಗ್ ಶಾಕ್ -ಹೈಕೋರ್ಟ್ ಮಹತ್ವದ ತೀರ್ಪು -ಕಹಳೆ ನ್ಯೂಸ್

ಅಲಹಾಬಾದ್​: ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ಮಾಡಲು ಕೆಲವು ಶಕ್ತಿಗಳು ಸಂಘಟಿತವಾಗಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ಜಾರಿ ಮಾಡಲು ಉತ್ತರ ಪ್ರದೇಶ ಸೇರಿದಂತೆ ಬಿಜೆಪಿ ಆಡಳಿತ ಇರುವ ಕೆಲವು ಸರ್ಕಾರ ಮುಂದಾಗಿದ್ದವು. ಉತ್ತರ ಪ್ರದೇಶ ಸರ್ಕಾರ ಇಂಥದ್ದೊಂದು ಕಾನೂನು ಜಾರಿಗೆ ಚಿಂತನೆ ನಡೆಸುತ್ತಿರುವ ಬೆನ್ನಲ್ಲೇ ಇದಕ್ಕೆ ಪೂರಕ ಎಂಬಂತೆ ಕಳೆದ ತಿಂಗಳು ಅಲಹಾಬಾದ್ ಹೈಕೋರ್ಟ್​ನ ಏಕಸದಸ್ಯಪೀಠವು ಕೇವಲ ಮದುವೆಯ ಉದ್ದೇಶದಿಂದ...
ಹೆಚ್ಚಿನ ಸುದ್ದಿ

ಕಾಂಗ್ರೆಸ್ ಸ್ಟಾರ್ ಪ್ರಚಾರಕಿ, ನಟಿ ವಿಜಯಶಾಂತಿ ಇಂದು ಬಿಜೆಪಿ ಸೇರ್ಪಡೆ? – ಕಹಳೆ ನ್ಯೂಸ್

ನವದೆಹಲಿ : ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಕಾಂಗ್ರೆಸ್ ನ ಸ್ಟಾರ್ ಪ್ರಚಾರಕಿ, ಮಾಜಿ ಸಂಸದೆ ವಿಜಯ ಶಾಂತಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ವಿಜಯಶಾಂತಿ ಅವರು ಬಿಜೆಪಿ ಸೇರ್ಪಡೆಯಾದರೆ ರಾಷ್ಟ್ರಮಟ್ಟದಲ್ಲಿ ಪಕ್ಷದ ಉನ್ನತ ಸ್ಥಾನ ಪಡೆಯಲಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ದೆಹಲಿಗೆ ತೆರಳಲಿರುವ ವಿಜಯಶಾಂತಿ ಅವರು ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ...
ಹೆಚ್ಚಿನ ಸುದ್ದಿ

‘ರಾಜ್ಯ ಸರ್ಕಾರ’ದಿಂದ 2021ರ ಸಾರ್ವತ್ರಿಕ ‘ರಜಾ ದಿನ’ಗಳ ಪಟ್ಟಿ ಬಿಡುಗಡೆ: ಸ್ವಾತಂತ್ರ್ಯೋತ್ಸವ, ಕ್ರಿಸ್​ಮಸ್ʼಗಿಲ್ಲ ರಜೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರ ಪ್ರತಿ ವರ್ಷದಂತೆ ಈ ವರ್ಷವೂ ಸಾರ್ವತ್ರಿಕ ರಜಾದಿನಗಳ ಪಟ್ಟಿ ಬಿಡುಗಡೆ ಮಾಡಿದ್ದು, ಆ ಪ್ರಕಾರ 2021ನೇ ಸಾಲಿಗೆ 20 ಸಾರ್ವತ್ರಿಕ ರಜಾದಿನಗಳನ್ನ ಸರ್ಕಾರ ಘೋಷಿಸಿದೆ. ಸರ್ಕಾರದ ಆದೇಶದಂತೆ, 2021ನೇ ಸಾಲಿನ ಸಾರ್ವತ್ರಿಕ ರಜಾದಿನಗಳ ಪಟ್ಟಿ ಜನವರಿ 14ರ ಮಕರ ಸಂಕ್ರಾಂತಿಯಿಂದ ಆರಂಭವಾಗಿ ನವೆಂಬರ್ 22ರ ಕನಕದಾಸ ಜಯಂತಿಯಂದು ಮುಕ್ತಾಯಗೊಳ್ಳುತ್ತದೆ. ಈ ಮಧ್ಯೆ ಗಣರಾಜ್ಯೋತ್ಸವ, ಮಹಾಶಿವರಾತ್ರಿ, ಗುಡ್​ಫ್ರೈಡೇ, ಯುಗಾದಿ, ಅಂಬೇಡ್ಕರ್ ಜಯಂತಿ, ಕಾರ್ಮಿಕರ ದಿನಾಚರಣೆ, ಬಸವ ಜಯಂತಿ,...
1 143 144 145 146 147 174
Page 145 of 174