Saturday, June 20, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಪಂಚಾಯಿತಿ ಚುನಾವಣೆಗೆ ಬಿಜೆಪಿಯಿಂದ ಪಂಚಸೂತ್ರ – ಕಹಳೆ ನ್ಯೂಸ್

ಬೆಂಗಳೂರು- ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಪಂಚರತ್ನ, ಪಂಚಸೂತ್ರ ವಿಧಾನದ ಮೂಲಕ ಜಿಲ್ಲೆಯಲ್ಲಿ ಎರಡು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಇಂದು ನಡೆದ ಸಂಘಟನಾ ಸಭೆ ನಂತರ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಚುನಾವಣೆ ಬರುತ್ತಿದೆ. ಕಳೆದ ಬಾರಿ ತಂದಿದ್ದ ಯೋಜನೆಯಿಂದಾಗಿ ಯಶಸ್ವಿಯಾಗಿದ್ದೆವು. ಇದೀಗ ಪಂಚರತ್ನ, ಪಂಚಸೂತ್ರ ವಿಧಾನ ತಂದಿದ್ದೇವೆ. ಒಂದೊಂದು ಸಮುದಾಯವನ್ನೂ ಗುರಿಯಾಗಿಟ್ಟು ಈ ವಿಧಾನ ಅನುಸರಿಸಲಾಗುತ್ತಿದೆ ಎಂದು ಮಾಹಿತಿ...
ಹೆಚ್ಚಿನ ಸುದ್ದಿ

ರಾಜ್ಯಗಳ ಪ್ರಸ್ತುತ ಕರೋನ ಸ್ಥಿತಿಯ ಬಗ್ಗೆ ವರದಿ ಕೇಳಿದ ಸುಪ್ರೀಂಕೋರ್ಟ್ – ಕಹಳೆ ನ್ಯೂಸ್

ನವದೆಹಲಿ - ಕೋವಿಡ್ ಸೋಂಕು ಹೆಚ್ಚಾಗಿರುವ ನಾಲ್ಕು ರಾಜ್ಯಗಳು ಸೇರಿದಂತೆ ದೇಶದ ಎಲ್ಲಾ ರಾಜ್ಯಗಳಲ್ಲೂ ಸೋಂಕಿನ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಎರಡು ದಿನಗಳ ಒಳಗೆ ವರದಿ ನೀಡುವಂತೆ ಸುಪ್ರೀಂಕೋರ್ಟ್ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್.ಎಸ್.ರೆಡ್ಡಿ, ಎಂ.ಆರ್. ಷಾ ಅವರನ್ನೊಳಗೊಂಡ ಸುಪ್ರೀಂಕೋರ್ಟ್‍ನ ವಿಭಾಗೀಯ ಪೀಠ ಕೋವಿಡ್ ಸಾಂಕ್ರಾಮಿಕ ರೋಗದ ಬಗ್ಗೆ ವಿಚಾರಣೆ ನಡೆಸುತ್ತಿದ್ದು, ಕೆಲವು ರಾಜ್ಯಗಳಲ್ಲಿ ಸೋಂಕು ಹೆಚ್ಚಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ....
ಹೆಚ್ಚಿನ ಸುದ್ದಿ

ಅಂತ್ಯಕ್ರಿಯೆ ಬಳಿಕ ಮನೆಗೆ ವಾಪಸಾದ ‘ಮೃತ’ ಕೋವಿಡ್ ರೋಗಿ ! – ಕಹಳೆ ನ್ಯೂಸ್

ಕೊಲ್ಕತ್ತಾ : ಪಶ್ಚಿಮ ಬಂಗಾಳದ ನಾರ್ತ್ 24 ಪರಗಣಾ ಜಿಲ್ಲೆಯ ಖರ್ಡಾಹ್ ಎಂಬಲ್ಲಿನ ಬಲರಾಂಪುರ್ ಬಸು ಆಸ್ಪತ್ರೆಯ ವೈದ್ಯರು ಕಳೆದ ವಾರ ಮೃತಪಟ್ಟಿದ್ದಾರೆಂದು ಘೋಷಿಸಲ್ಪಟ್ಟಿದ್ದ 75 ವರ್ಷದ ಕೋವಿಡ್ ರೋಗಿಯೊಬ್ಬರ ಅಂತ್ಯಕ್ರಿಯೆ ಮುಗಿದು ನಂತರ ಅವರ ಶ್ರಾದ್ಧ ಕಾರ್ಯಕ್ರಮ ನಡೆಯುತ್ತಿರುವ ವೇಳೆ ಅವರು ಸತ್ತಿಲ್ಲ, ಬದುಕಿದ್ದಾರೆ ಎಂದು ಕುಟುಂಬಕ್ಕೆ ತಿಳಿದು ಬಂದ ವಿಲಕ್ಷಣ ಘಟನೆ ವರದಿಯಾಗಿದೆ. ಶಿಬ್ದಾಸ್ ಬ್ಯಾನರ್ಜಿ ಎಂಬ ವ್ಯಕ್ತಿಯ ವಿಚಾರದಲ್ಲಿ ಆಸ್ಪತ್ರೆಯಿಂದಾದ ಈ ಪ್ರಮಾದ ಕುರಿತಂತೆ ತನಿಖೆ...
ಹೆಚ್ಚಿನ ಸುದ್ದಿ

ಮಹಾತ್ಮ ಗಾಂಧೀಜಿ ಮರಿ ಮೊಮ್ಮಗ ಕೊರೊನಾಗೆ ಬಲಿ – ಕಹಳೆ ನ್ಯೂಸ್

ಮಹಾತ್ಮ ಗಾಂಧೀಜಿ ಅವರ ಮರಿಮೊಮ್ಮಗ ಸತೀಶ್ ಧುಪೆಲಿಯಾ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ನೆಲೆಸಿದ್ದ ಸತೀಶ್ ಧುಪೆಲಿಯಾ 3 ದಿನಗಳ ನಂತರ 66ನೇ ಜನ್ಮ ದಿನ ಆಚರಿಸಿಕೊಳ್ಳಬೇಕಿತ್ತು. ಸತೀಶ್ ಅವರ ಸೋದರಿ ಉಮಾ ಧುಪೆಲಿಯಾ ಸೋದರನ ಸಾವನ್ನು ಖಚಿತಪಡಿಸಿದ್ದು, ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನನ್ನ ಪ್ರೀತಿಯ ಅಣ್ಣ ನಮ್ಮನ್ನು ಅಗಲಿದ್ದಾನೆ. ನ್ಯೂಮೇನಿಯಾ ಆಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ವೇಳೆ ಅವರಿಗೆ ಕೋವಿಡ್-19 ಸೋಂಕು ಸಹ...
ಹೆಚ್ಚಿನ ಸುದ್ದಿ

ಟ್ವೀಟರ್ ನಲ್ಲಿ 1 ಮಿಲಿಯನ್ ಫಾಲೋವರ್ಸ್ : ದಾಖಲೆ ಬರೆದ `ಭಾರತೀಯ ರಿಸರ್ವ್ ಬ್ಯಾಂಕ್’! – ಕಹಳೆ ನ್ಯೂಸ್

ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿ ಒಂದು ಮಿಲಿಯನ್ ಗಿಂತಲೂ ಹೆಚ್ಚು ಹಿಂಬಾಲಕರನ್ನು ಹೊಂದಿರುವ ವಿಶ್ವದ ಮೊದಲ ಹಣಕಾಸು ಪ್ರಾಧಿಕಾರವಾಗಿ ಹೊರಹೊಮ್ಮಿದೆ. ಆರ್ ಬಿಐ ವಿಶ್ವದ ಅತ್ಯಂತ ಶಕ್ತಿಶಾಲಿ ಕೇಂದ್ರ ಬ್ಯಾಂಕ್ ಗಳಾದ ಯುಎಸ್ ಫೆಡರಲ್ ರಿಸರ್ವ್ ಮತ್ತು ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಗಳನ್ನು ಹಿಂದಿಕ್ಕಿ ಸಾಮಾಜಿಕ ಜಾಲತಾಣದಲ್ಲಿ ಒಂದು ಮಿಲಿಯನ್ ಗಿಂತಲೂ ಹೆಚ್ಚು ಹಿಂಬಾಲಕರನ್ನು ಹೊಂದಿದೆ. ಭಾನುವಾರದ ವೇಳೆಗೆ ಆರ್ ಬಿಐ...
ಹೆಚ್ಚಿನ ಸುದ್ದಿ

ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಪಲ್ಟಿ, ಹಲವರಿಗೆ ಗಾಯ – ಕಹಳೆ ನ್ಯೂಸ್

ವಿಟ್ಲ: ದಕ್ಷಿಣ ಕನ್ನಡ ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಮಧ್ಯರಾತ್ರಿ ಅಪಘಾತಕ್ಕೀಡಾಗಿದೆ. ಹಾಸನ- ಬೆಂಗಳೂರು ಮಾರ್ಗಮಧ್ಯೆ ಈ ದುರ್ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಪಲ್ಟಿಯಾಗಿದ್ದು ರಸ್ತೆಯಿಂದ ಕೆಳಕ್ಕೆ ಉರುಳಿದೆ.ಬಸ್ ಪಲ್ಟಿ ಹೊಡೆದ ತೀವ್ರತೆಗೆ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ಸಿನಲ್ಲಿ 29 ಮಂದಿ ಪ್ರಯಾಣಿಕರು ಮುಂಗಡ ಟಿಕೆಟ್ ಕಾಯ್ದಿರಿಸಿ ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರಿಗೆ ಬೆಳಗ್ಗಿನವರಿಗೆ ಪ್ರಜ್ಞೆ ಬಂದಿಲ್ಲ ಎಂದು...
ಹೆಚ್ಚಿನ ಸುದ್ದಿ

ನ.25 : ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷಾವಧಿ ಕೋಲ – ಕಹಳೆ ನ್ಯೂಸ್

ಬಂಟ್ವಾಳ: ತಾಲೂಕಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವಂತೆ ಈ ವರ್ಷವು ನ.25 ರಿಂದ “ವರ್ಷಾವಧಿ ಕೋಲ” ಜರಗಲಿದೆ. ಆದ್ದರಿಂದ ನ.24 ರಂದು ಶ್ರೀ ಕ್ಷೇತ್ರದಲ್ಲಿ “ ಅಗೇಲು ಸೇವೆ” ಇರುವುದಿಲ್ಲ ಎಂದು ಪ್ರಕರಣದಲ್ಲಿ ತಿಳಿಸಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಸರಕಾರದ ನಿಯಾಮಾವಳಿಗಳನ್ನು ಅನುಸರಿಸಿಕೊಂಡು ಸರಳ ರೀತಿಯಲ್ಲಿ ಹಿಂದಿನ ಸಂಪ್ರದಾಯದOತೆ ವರ್ಷಾವಧಿ ಕೋಲವನ್ನು ನಡೆಸಲು ತೀರ್ಮಾನಿಸಿದೆ....
ಹೆಚ್ಚಿನ ಸುದ್ದಿ

ಎರಡನೇ ವಿಶ್ವಯುದ್ಧದ ಬಳಿಕ ಜಗತ್ತು ಎದುರಿಸುತ್ತಿರುವ ದೊಡ್ಡ ಸವಾಲು ಕೊರೋನಾ -ಪ್ರಧಾನಿ ಮೋದಿ

ನವದೆಹಲಿ: ಎರಡನೇ ಮಹಾಯುದ್ಧದ ನಂತರ ಜಗತ್ತು ಎದುರಿಸುತ್ತಿರುವ ಅತಿದೊಡ್ಡ ಸವಾಲು ಕೋವಿಡ್-19. ಇದು ಮಾನವ ಇತಿಹಾಸದಲ್ಲಿ ಮಹತ್ವದ ತಿರುವೂ ಹೌದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜಿ20 ಶೃಂಗಸಭೆ ಉದ್ದೇಶಿಸಿ ಮಾತನಾಡಿದ ಅವರು, ಒಕ್ಕೂಟದ ಸಮರ್ಥ ಕಾರ್ಯನಿರ್ವಹಣೆಗೆ ಭಾರತ ಮಾಹಿತಿ ತಂತ್ರಜ್ಞಾನ ಕ್ಷೇತ್ರ ಕೊಡುಗೆ ನೀಡಲಿದೆ ಎಂದು ಭರವಸೆ ನೀಡಿದ್ದಾರೆ. 'ಎಲ್ಲಿಂದ ಬೇಕಾದರೂ ಕೆಲಸ ಮಾಡಿ' ಎಂಬುದು ಕೊರೊನೋತ್ತರ ಜಗತ್ತಿನಲ್ಲಿ ಸಾಮಾನ್ಯವಾಗಿದೆ ಎಂದ ಮೋದಿ ವರ್ಚುವಲ್ ಜಿ20 ಕಾರ್ಯಾಲಯ...
1 144 145 146 147 148 174
Page 146 of 174