ಮೋದಿ ನೇತೃತ್ವದ ಕೇಂದ್ರ ಸರಕಾರದಿಂದ ದ.ಕ. ಜಿಲ್ಲೆಗೆ ಅವಮಾನ: ಮಿಥುನ್ ರೈ – ಕಹಳೆ ನ್ಯೂಸ್
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಕಂಪೆನಿಗೆ ಗುತ್ತಿಗೆ ನೀಡಿರುವ ಮೋದಿ ನೇತೃತ್ವದ ಕೇಂದ್ರ ಸರಕಾರವು ಈ ನಿಲ್ದಾಣಕ್ಕೆ ಗೌತಮ್ ಅದಾನಿ ಹೆಸರಿಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಅವಮಾನ ಮಾಡಿದೆ ಎಂದು ದ.ಕ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರರಾದ ಕೋಟಿ-ಚೆನ್ನಯರ ಹೆಸರಿಡಬೇಕು ಎಂದು ಒತ್ತಾಯಿಸಿದರು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...







