Saturday, June 20, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಮೋದಿ ನೇತೃತ್ವದ ಕೇಂದ್ರ ಸರಕಾರದಿಂದ ದ.ಕ. ಜಿಲ್ಲೆಗೆ ಅವಮಾನ: ಮಿಥುನ್ ರೈ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಕಂಪೆನಿಗೆ ಗುತ್ತಿಗೆ ನೀಡಿರುವ ಮೋದಿ ನೇತೃತ್ವದ ಕೇಂದ್ರ ಸರಕಾರವು ಈ ನಿಲ್ದಾಣಕ್ಕೆ ಗೌತಮ್ ಅದಾನಿ ಹೆಸರಿಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಅವಮಾನ ಮಾಡಿದೆ ಎಂದು ದ.ಕ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರರಾದ ಕೋಟಿ-ಚೆನ್ನಯರ ಹೆಸರಿಡಬೇಕು ಎಂದು ಒತ್ತಾಯಿಸಿದರು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...
ಹೆಚ್ಚಿನ ಸುದ್ದಿ

ರಾಮಾಯಣ, ಮಹಾಭಾರತ ಕೇಳುತ್ತಾ ಬಾಲ್ಯ ಕಳೆದೆ- ಆತ್ಮಚರಿತ್ರೆಯಲ್ಲಿ ಅಮೆರಿಕಾದ ಮಾಜಿ ಅಧ್ಯಕ್ಷ ಒಬಾಮಾ! – ಕಹಳೆ ನ್ಯೂಸ್

ವಾಷಿಂಗ್ಟನ್: ಹಿಂದೂಗಳ ಪವಿತ್ರ ಗ್ರಂಥಗಳಾದ ರಾಮಾಯಣ ಮತ್ತು ಮಹಾಭಾರತವನ್ನು ಕೇಳುತ್ತಾ ಇಂಡೊನೇಷ್ಯಾದಲ್ಲಿ ತನ್ನ ಬಾಲ್ಯವನ್ನು ಕಳೆದರಿಂದ ಭಾರತಕ್ಕೆ ಯಾವಾಗಲೂ ವಿಶೇಷವಾದ ಸ್ಥಾನವಿರುವುದಾಗಿ ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹೇಳಿದ್ದಾರೆ. ವಿಶ್ವದ ಜನಸಂಖ್ಯೆಯ ಆರನೇ ಒಂದು ಭಾಗದಷ್ಟು ಗಾತ್ರವಿರುವ, ಅಂದಾಜು ಎರಡು ಸಾವಿರ ವಿಭಿನ್ನ ಜನಾಂಗೀಯ ಗುಂಪುಗಳು, ಏಳುನೂರಕ್ಕೂ ಹೆಚ್ಚು ಭಾಷೆಗಳನ್ನು ಮಾತನಾಡುವವರು ಭಾರತದಲ್ಲಿರುವುದಾಗಿ ' ಎ ಪ್ರಾಮಿಸ್ಡ್ ಲ್ಯಾಂಡ್ 'ಆತ್ಮಚರಿತ್ರೆಯಲ್ಲಿ ಒಬಾಮಾ ಭಾರತದ ಬಗ್ಗೆಗಿನ ಮೋಹವನ್ನು ಬರೆದುಕೊಂಡಿದ್ದಾರೆ. 2010ರಲ್ಲಿ...
ಹೆಚ್ಚಿನ ಸುದ್ದಿ

ಕೊಚ್ಚಿ-ಮಂಗಳೂರು ಗ್ಯಾಸ್ ಪೈಪ್​ಲೈನ್ ಮಾರ್ಗ ಪೂರ್ಣ – ಕಹಳೆ ನ್ಯೂಸ್

ಕಾಸರಗೋಡು : ಕೊಚ್ಚಿ-ಮಂಗಳೂರು ಅನಿಲ ಕೊಳವೆಮಾರ್ಗ ಯೋಜನೆ ಕೊನೆಗೂ ಪೂರ್ಣಗೊಂಡಿದ್ದು, ಅನಿಲ ಸರಬರಾಜಿಗೆ ಸಂಪೂರ್ಣ ತಯಾರಾಗಿದೆ. ಈ ಯೋಜನೆಯಲ್ಲಿ ಅತ್ಯಂತ ಕ್ಲಿಷ್ಟಕರವೆನ್ನಲಾದ 540 ಮೀಟರ್ ಉದ್ದದ ಕೊಳವೆ ಕಾಮಗಾರಿ ಮುಗಿಯುವುದರೊಂದಿಗೆ ಯೋಜನೆ ಪೂರ್ಣಗೊಂಡಂತಾಗಿದೆ. ಕಾಸರಗೋಡಿನ ಚಂದ್ರಗಿರಿ ನದಿಯನ್ನು ಹಾದು ಹೋಗುವ ಈ 540 ಮೀಟರ್ ಉದ್ದದ ಕಾಮಗಾರಿ ಬಹಳ ಸವಾಲಿನದ್ದಾಗಿತ್ತು. ಅದೀಗ ಯಶಸ್ವಿಯಾಗಿದೆ. ಇನ್ನೆರಡು ದಿನಗಳ ಕಾಲ ಇಲ್ಲಿ ಅನಿಲ ಸರಬರಾಜು ಮಾಡಿ ಪರೀಕ್ಷಿಸಲಾಗುವುದು. ಅದು ಯಶಸ್ವಿಯಾದಲ್ಲಿ ಇದೇ ವಾರ...
ಹೆಚ್ಚಿನ ಸುದ್ದಿ

`GST’ ಪಾವತಿದಾರರಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ – ಕಹಳೆ ನ್ಯೂಸ್

ನವದೆಹಲಿ : ಪ್ರಾಮಾಣಿಕ ತೆರಿಗೆದಾರರು ತಮ್ಮ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ವಿವರಗಳನ್ನು ಹೊಸ ಸ್ವಯಂ-ಜನರೇಟ್ ಆದ ಆದಾಯ ತೆರಿಗೆ ನಮೂನೆಯಲ್ಲಿ ಪ್ರದರ್ಶಿಸುವ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಸರ್ಕಾರ ಸೋಮವಾರ ಹೇಳಿದೆ. ಫಾರ್ಮ್ 26ಎಎಸ್ ನಲ್ಲಿ ಪ್ರದರ್ಶಿಸಲಾದ ಜಿಎಸ್ ಟಿ ವಹಿವಾಟು ತೆರಿಗೆದಾರರಿಗೆ ಯಾವುದೇ ಹೆಚ್ಚುವರಿ ಅನುಸರಣೆ ಹೊರೆ ಇರುವುದಿಲ್ಲ ಎಂದು ಕಂದಾಯ ಇಲಾಖೆ ಪುನರುಚ್ಚರಿಸಿದೆ. ತೆರಿಗೆದಾರನ ಮಾಹಿತಿಗಾಗಿ 26ಎಎಸ್ ನಲ್ಲಿ ವಹಿವಾಟು ನಡೆಸಲಾಗುತ್ತಿದೆ....
ಹೆಚ್ಚಿನ ಸುದ್ದಿ

ಇಂದಿನಿಂದ ಪದವಿ ಕಾಲೇಜುಗಳು ಆರಂಭ : ವಿದ್ಯಾರ್ಥಿಗಳು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ : ಸಚಿವ ಸುಧಾಕರ್ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ 8 ತಿಂಗಳ ಬಳಿಕ ಪದವಿ ಕಾಲೇಜುಗಳು ಇಂದಿನಿಂದ ಆರಂಭವಾಗುತ್ತಿದ್ದು, ಸಚಿವ ಡಾ.ಕೆ. ಸುಧಾಕರ್ ಅವರು ವಿದ್ಯಾರ್ಥಿಗಳು, ಆಡಳಿತ ವರ್ಗಕ್ಕೆ ಮಹತ್ವದ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸುಧಾಕರ್, ರಾಜ್ಯದಲ್ಲಿ ಇಂದಿನಿಂದ ಪದವಿ ಕಾಲೇಜುಗಳು ಪುನರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜುಗಳ ಆಡಳಿತ ವರ್ಗದವರು, ವಿದ್ಯಾರ್ಥಿಗಳು ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕೆಂದು ಮನವಿ ಮಾಡುತ್ತೇನೆ. ಮಾಸ್ಕ್ ಧರಿಸುವುದು, ಕೈಗಳ ಶುಚಿತ್ವ, ಭೌತಿಕ ಅಂತರ ಕಾಪಾಡಲು ಮರೆಯದಿರಿ....
ಹೆಚ್ಚಿನ ಸುದ್ದಿ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ವತಿಯಿಂದ ತೊಡಿಕಾನ ಶ್ರೀ ದೇವರಗುಂಡಿ ಪುಣ್ಯ ಕ್ಷೇತ್ರ ಉಳಿಸುವ ದೃಷ್ಟಿಯಿಂದ ಮನವಿ-ಕಹಳೆ ನ್ಯೂಸ್

ಸುಳ್ಯ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ವತಿಯಿಂದ ತೊಡಿಕಾನ ಶ್ರೀ ದೇವರಗುಂಡಿ ಪುಣ್ಯ ಕ್ಷೇತ್ರ ಉಳಿಸುವ ದೃಷ್ಟಿಯಿಂದ ವಿರಾಜ ಪೇಟೆ ಶಾಸಕರಾದ ಕೆ.ಜಿ.ಬೋಪಯ್ಯ ರಿಗೆ ಮನವಿ ಸಲ್ಲಿಸಲಾಯಿತು. ಈ ಹಿಂದೆ ದೇವರ ಗುಂಡಿ ಪ್ರದೇಶದಲ್ಲಿ ಅಶ್ಲೀಲ ಚಿತ್ರೀಕರಣ ವಿಚಾರಕ್ಕೆ ಸಂಬಂಧಪಟ್ಟು, ತೋಡಿಕ್ಕಾನ ದೇವಸ್ಥಾನ ಪರಿಸರದಲ್ಲಿ ಇನ್ನೂ ಮುಂದೆ ಈ ರೀತಿಯ ಪ್ರಕರಣಗಳು ನಡೆಯಬಾರದು. ಈ ವಿಚಾರವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಯಿತು. ಈ...
ಹೆಚ್ಚಿನ ಸುದ್ದಿ

2020ಕ್ಕಿಂತಲೂ 2021 ಅತ್ಯಂತ ಕೆಟ್ಟ ವರ್ಷವಾಗಿರಲಿದೆ: ಬೀಸ್ಲೆ – ಕಹಳೆ ನ್ಯೂಸ್

ವಿಶ್ವಸಂಸ್ಥೆ: '2020ಕ್ಕಿಂತಲೂ 2021 ಅತ್ಯಂತ ಕೆಟ್ಟ ವರ್ಷವಾಗಿರಲಿದೆ' ಎಂದು ವಿಶ್ವ ಆಹಾರ ಯೋಜನೆಯ ಮುಖ್ಯಸ್ಥ ಡೇವಿಡ್‌ ಬೀಸ್ಲೆ ಎಚ್ಚರಿಸಿದ್ದಾರೆ. ವಿಶ್ವ ಸಂಸ್ಥೆಯ ಭಾಗವಾಗಿರುವ ವಿಶ್ವ ಆಹಾರ ಯೋಜನೆಯನ್ನು (ಡಬ್ಲ್ಯುಎಫ್‌ಪಿ) 2020ನೇ ಸಾಲಿನ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿತ್ತು. ಹಸಿವು ನೀಗಿಸುವ ನಿಟ್ಟಿನಲ್ಲಿ ಡಬ್ಲ್ಯುಎಫ್‌ಪಿ ನಡೆಸಿರುವ ಕಾರ್ಯಕ್ರಮಗಳು, ಪ್ರಯತ್ನಗಳನ್ನು ಪರಿಗಣಿಸಿ ನೊಬೆಲ್‌ ಸಮಿತಿಯು ಈ ಪ್ರಶಸ್ತಿ ನೀಡಿತ್ತು. ಘರ್ಷಣೆ ಪೀಡಿತ ಪ್ರದೇಶಗಳಲ್ಲಿ ಶಾಂತಿ ಸ್ಥಾಪನೆಗೆ ಡಬ್ಲ್ಯುಎಫ್‌ಪಿ ಶ್ರಮಿಸಿದೆ. ಜೊತೆಗೆ ಹಸಿವನ್ನು...
ಹೆಚ್ಚಿನ ಸುದ್ದಿ

Breaking News : ಹಿರಿಯ ನಟ ಸೌಮಿತ್ರಾ ಚಟರ್ಜಿ 85 ನೇ ವಯಸ್ಸಿನಲ್ಲಿ ನಿಧನ – ಕಹಳೆ ನ್ಯೂಸ್

ಕೊಲ್ಕತ್ತಾ : ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಹಿರಿಯ ನಟ ಸೌಮಿತ್ರ ಚಟರ್ಜಿ(85) ಅವರು, ಚಿಕಿತ್ಸೆ ಫಲಕಾರಿಯಾಗದೇ ಕೋಲ್ಕತ್ತಾದಲ್ಲಿ ನಿಧನರಾಗಿದ್ದಾರೆ. ಸುಮಾರು ಒಂದು ತಿಂಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಕೋಲ್ಕತ್ತದ ಬೆಲ್ಲಿವ್ ನರ್ಸಿಂಗ್ ಹೋಮ್ ನಲ್ಲಿ ಕೊನೆಯ ಉಸಿರೆಳೆದಿದ್ದರು. ಅಕ್ಟೋಬರ್ 6ರಂದು ಸೌಮಿತ್ರ ಚಟರ್ಜಿ ಅವರು ಕೊರೊನಾ ವೈರಸ್ ನ ಸೋಂಕಿಗೆ ತುತ್ತಾಗಿದ್ದರು. ಕೊರೊನಾ ವೈರಸ್ ಪಾಸಿಟಿವ್ ಎಂಬುದಾಗಿ ದೃಢಪಟ್ಟ ನಂತ್ರ, ತೀವ್ರ ಉಸಿರಾಟದ ತೊಂದರೆಯಿಂದಾಗಿ ಟ್ರಾಮಾ...
1 147 148 149 150 151 174
Page 149 of 174