Friday, June 19, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಪೊಲೀಸರ ತ್ಯಾಗ,ಸಾಹಸ ಹಾಗೂ ಸೇವೆ ಸದಾ ಸ್ಮರಣೀಯ : ಪ್ರಧಾನಿ ಮೋದಿ-ಕಹಳೆನ್ಯೂಸ್

ನವದೆಹಲಿ: ಪೊಲೀಸ್ ಸಂಸ್ಮರಣಾ ದಿನವನ್ನು ಬುಧವಾರ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪೊಲೀಸರ ಸಾಹಸ ಹಾಗೂ ತ್ಯಾಗವನ್ನು ಕೊಂಡಾಡಿದ್ದಾರೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದರಿಂದ ಹಿಡಿದು ಭಯಾನಕ ಅಪರಾಧ ಪ್ರಕರಣಗಳನ್ನು ಬಗೆಹರಿಸುವವರೆಗೆ, ವಿಪತ್ತು ನಿರ್ವಹಣೆಗೆ ಸಹಾಯ ಮಾಡುವುದರಿಂದ ಹಿಡಿದು ಕೋವಿಡ್-19 ವಿರುದ್ಧ ಹೋರಾಡುವವರೆಗೆ, ಯಾವುದೇ ಹಿಂಜರಿಕೆಯಿಲ್ಲದೆ ನಮ್ಮ ಪೊಲೀಸ್ ಸಿಬ್ಬಂದಿಗಳು ಅತ್ಯುತ್ತಮ ಕಾರ್ಯನಿರ್ವಹಿಸುತ್ತಿದ್ದಾರೆ. ಜನ ಸೇವೆಯತ್ತ ಅವರ ಸಮರ್ಪಣೆ ಮತ್ತು ಸರ್ವ ಸನ್ನದ್ಧತೆಯ ಬಗ್ಗೆ ನಮಗೆ ಹೆಮ್ಮೆ ಇದೆ...
ಹೆಚ್ಚಿನ ಸುದ್ದಿ

ಲಾಕ್‍ಡೌನ್ ಸಂದರ್ಭದಲ್ಲಿ ಪೊಲೀಸರು ಪಟ್ಟ ಶ್ರಮ ಶ್ಲಾಘನೀಯ : ಸಿಎಂ ಬಿಎಸ್‍ವೈ-ಕಹಳೆನ್ಯೂಸ್

ಬೆಂಗಳೂರು,ಅ.21- ರಾಜ್ಯದಲ್ಲಿ ಕಳೆದ ಆರು ತಿಂಗಳಿನಿಂದ ಮಹಾಮಾರಿ ಕೋವಿಡ್-19 ಸೋಂಕು ನಿಯಂತ್ರಿಸುವಲ್ಲಿ ಮತ್ತು ಲಾಕ್‍ಡೌನ್ ನಿಯಮಗಳನ್ನು ಜನರು ಕಟ್ಟುನಿಟ್ಟಾಗಿ ಪಾಲನೆ ಮಾಡಿಸುವಲ್ಲಿ ಪೊಲೀಸರು ಪಟ್ಟ ಶ್ರಮ ಶ್ಲಾಘನೀಯ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಪೊಲೀಸ್ ಸಂಸ್ಮರಣ ದಿನಾಚರಣೆ ಅಂಗವಾಗಿ ಇಂದು ನಗರ ಸಶಸ್ತ್ರ ಮೀಸಲು ಪಡೆಯ ಕೇಂದ್ರ ಸ್ಥಾನದ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಉತ್ತರಕರ್ನಾಟಕದ ಭಾಗದಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ...
ಹೆಚ್ಚಿನ ಸುದ್ದಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯ : ನಳೀನ್ ಕುಮಾರ್ ಕಟೀಲ್-ಕಹಳೆನ್ಯೂಸ್

ಮಸ್ಕಿ: ಜನಾದೇಶಕ್ಕೆ ವಿರುದ್ಧವಾಗಿ ರಾತ್ರೋ ರಾತ್ರಿ ಪ್ರೇಮ ವಿವಾಹ ಮಾಡಿಕೊಂಡ ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರ ರಚನೆ ಮಾಡಿದರು. ಆದರೆ, ಇದು ಸಿದ್ದರಾಮಯ್ಯ ಅವರಿಗೆ ಬೇಕಾಗಿರಲಿಲ್ಲ. ಈ ಸರ್ಕಾರ ಕೆಡವಿದ್ದು ಬಿಜೆಪಿ ಅಲ್ಲ. ಸಿದ್ಧರಾಮಯ್ಯ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು. ಪಟ್ಟಣದಲ್ಲಿ ಮಂಗಳವಾರ ಬಿಜೆಪಿ ಹಮ್ಮಿಕೊಂಡಿದ್ದ ಶಕ್ತಿ ಕೇಂದ್ರಗಳ ಹಾಗೂ ಮುಖಂಡರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, 'ಕುಟುಂಬ ಹಾಗೂ ವಂಶಾಡಳಿತ...
ಹೆಚ್ಚಿನ ಸುದ್ದಿ

ಬದಲಾಗಲಿದೆ ಸಿಲಿಂಡರ್ ವಿತರಣೆ ವ್ಯವಸ್ಥೆ – ನವೆಂಬರ್ 1 ರಿಂದಲೇ ಹೊಸ ನಿಯಮ ಜಾರಿ-ಕಹಳೆನ್ಯೂಸ್

ನವದೆಹಲಿ: ನವೆಂಬರ್ ನಿಂದ ಸಿಲಿಂಡರ್ ವಿತರಣೆ ನಿಯಮದಲ್ಲಿ ಬದಲಾವಣೆಯಾಗಲಿದೆ. ಗ್ರಾಹಕರಿಗೆ ಸಿಲಿಂಡರ್ ಗಳನ್ನು ಸಮರ್ಪವಾಗಿ ತಲುಪಿಸಲು ತೈಲ ಕಂಪನಿಗಳು ನವೆಂಬರ್ 1 ರಿಂದ ಹೊಸ ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯನ್ನು ಜಾರಿಗೆ ತರಲಿವೆ. ದೇಶೀಯ ಸಿಲಿಂಡರ್ ಕಳ್ಳತನವನ್ನು ತಡೆಯುವ ಉದ್ದೇಶ ಕೂಡ ಇದೆ ಎನ್ನಲಾಗಿದೆ. ಈ ಹೊಸ ವ್ಯವಸ್ಥೆಯನ್ನು ಡಿಎಸಿ ಅಂದರೆ ಡೆಲಿವರಿ ದೃಢೀಕರಣ ಕೋಡ್ ಎಂದು ಕರೆಯಲಾಗುತ್ತಿದೆ. ಸಿಲಿಂಡರ್ ಬುಕ್ ಆದ ನಂತರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕೋಡ್...
ಹೆಚ್ಚಿನ ಸುದ್ದಿ

ಪ್ರತಿಯೊಬ್ಬರಿಗೂ ನಿವೇಶನ, ಮನೆ ಒದಗಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ-ಬಿ.ಎಸ್.ಯಡಿಯೂರಪ್ಪ-ಕಹಳೆ ನ್ಯೂಸ್

ಶಿವಮೊಗ್ಗ: ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ನಮ್ಮ ಗುರಿಯಾಗಿದೆ. ಅಲ್ಲದೇ ಸರ್ಕಾರದಿಂದ ನಿವೇಶನ ನೀಡಿದ ಪ್ರತಿಯೊಬ್ಬರಿಗೂ ಮನೆ ಕಟ್ಟಿಕೊಡಬೇಕು ಎಂಬ ಆಪೇಕ್ಷೆ ಇದೆ. ಹಂತ ಹಂತವಾಗಿ ಮನೆಗಳನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಯಾವುದೇ ಒಬ್ಬ ವ್ಯಕ್ತಿಗೂ ರಾಜ್ಯದಲ್ಲಿ ಸೂರಿನ ಕೊರತೆ ಯಾಗಬಾರದು. ಪ್ರತಿಯೊಬ್ಬರಿಗೂ...
ಹೆಚ್ಚಿನ ಸುದ್ದಿ

ಹೆಲ್ಮೆಟ್ ಧರಿಸದಿದ್ದರೆ ಡಿಎಲ್ ಅಮಾನತು..!-ಕಹಳೆ ನ್ಯೂಸ್

ಸಾರ್ವಜನಿಕರೇ ಉದಾಸೀನ ಧೋರಣೆ ಬೇಡ. ಸರ್ಕಾರ ಎಷ್ಟೇ ನಿಯಮಗಳನ್ನು ಜಾರಿಗೊಳಿಸಲಿ ನಮಗೆ ನಮ್ಮ ಪ್ರಾಣ ಮುಖ್ಯವಾಗಿರುತ್ತದೆ. ಸುರಕ್ಷತಾ ನಿಯಮಗಳನ್ನು ಪಾಲಿಸುವುದರಿಂದ ನಾವು ಸುರಕ್ಷಿತವಾಗಿರುವುದರ ಜತೆಗೆ ನಮ್ಮ ಕುಟುಂಬದವರನ್ನೂ ಸುರಕ್ಷಿತವಾಗಿ ಇಡಬಹುದು. ಹೆಲ್ಮೆಟ್ ಧರಿಸಿ ವಾಹನ ಚಲಾಯಿ ಸುವುದರಿಂದ ಅಪಘಾತಗಳಿಂದಾಗುವ ಪ್ರಾಣಾಪಾಯ ಗಳಿಂದ ಪಾರಾಗ ಬಹುದು. ಸರ್ಕಾರಗಳು ಈ ಬಗ್ಗೆ ಸಾಕಷ್ಟು ಜಾಗೃ ತಿ ಮೂಡಿಸಿದರೂ ಜನ ನಿರ್ಲಕ್ಷ್ಯ ಧೋರಣೆ ಅನುಸರಿಸುವುದರಿಂದ ದಂಡ ವಿಧಿಸುವ ಪ್ರಯೋಗ ಮಾಡುತ್ತಿದ್ದ ಸರ್ಕಾರ ಈಗ ಚಾಲನಾ...
ಹೆಚ್ಚಿನ ಸುದ್ದಿ

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ : ನಟಿ ಸಂಜನಾ-ರಾಗಿಣಿ ಜಾಮೀನಿಗಾಗಿ ಬಾಂಬ್ ಬೆದರಿಕೆ ಪತ್ರ!-ಕಹಳೆ ನ್ಯೂಸ್

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ನಂಟು ಆರೋಪಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿರುವ ನಟಿ ರಾಗಿಣಿ ಹಾಗೂ ನಟಿ ಸಂಜನಾರನ್ನು ಬಿಡುಗಡೆ ಮಾಡದಿದ್ದರೆ ಬಾಂಬ್ ಹಾಕ್ತೀವಿ ಎಂದು ಎನ್ ಡಿ ಪಿ ಎಸ್ ಕೋರ್ಟ್ ನ್ಯಾಯಾಧೀಶರಿಗೆ ಬೆದರಿಕೆ ಕರೆ ಬಂದಿದೆ . ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಸಂಬಂಧ ಜೈಲಿನಲ್ಲಿರುವ ಮಾದಕ ನಟಿ ರಾಗಿಣಿ ಹಾಗೂ ಸಂಜನಾಗೆ ಜಾಮೀನು ನೀಡುವಂತೆ ಹಾಗೂ ಕೆಜಿ ಹಳ್ಳಿ ಡಿಜೆ ಹಳ್ಳಿ ಪ್ರಕರಣದಿಂದ...
ಹೆಚ್ಚಿನ ಸುದ್ದಿ

ಸ್ಯಾನಿಟೈಸರ್ ಮಿಶ್ರಿತ ಮದ್ಯ ಸೇವಿಸಿ 5 ಮಂದಿ ಸಾವು, 3 ಮಹಿಳೆಯರು ಸೇರಿ 9 ಜನ ಗಂಭೀರ-ಕಹಳೆ ನ್ಯೂಸ್

ಪಾಲಕ್ಕಾಡ್: ಕೇರಳದ ಪಾಲಕ್ಕಾಡ್ ನಲ್ಲಿ ಸ್ಯಾನಿಟೈಸರ್ ಮಿಶ್ರಣ ಮಾಡಿದ್ದ ಮದ್ಯ ಸೇವಿಸಿ ಐವರು ಸಾವನ್ನಪ್ಪಿದ್ದಾರೆ. ಕಾಂಜಿ ಕೋಡ್ ನ ಚೆಲ್ಲನಕಾವು ಬುಡಕಟ್ಟು ಸಮುದಾಯದ ಕಾಲೋನಿಯಲ್ಲಿ ಘಟನೆ ನಡೆದಿದ್ದು ರಾಮನ್(52), ಅಯ್ಯಪ್ಪನ್(55) ಆತನ ಮಗ ಅರುಣ್(22), ಶಿವನ್(45) ಮತ್ತು ಆತನ ಸಹೋದರ ಮೂರ್ತಿ(33) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೂವರು ಮಹಿಳೆಯರು ಸೇರಿದಂತೆ 9 ಮಂದಿಯ ಸ್ಥಿತಿ ಗಂಭೀರವಾಗಿದ್ದು ಪಾಲಕ್ಕಾಡ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಸ್ಯಾನಿಟೈಸರ್ ಮಿಶ್ರಿತವಾಗಿದ್ದ ಮದ್ಯವನ್ನು ಇವರು...
1 158 159 160 161 162 174
Page 160 of 174