Saturday, March 7, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

BIG BREAKING : ನಟಿ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಜಾ : ಜೈಲೇ ಗತಿ-ಕಹಳೆ ನ್ಯೂಸ್

ಬೆಂಗಳೂರು : ಸೆಪ್ಟೆಂಬರ್ 14ರಿಂದ ಜೈಲಿನಲ್ಲಿರುವಂತ ನಟಿ ರಾಗಿಣಿ ಹಾಗೂ ಸೆ.16ರಿಂದ ಜೈಲಿನಲ್ಲಿರುವ ನಟಿ ಸಂಜನಾ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಎನ್ ಡಿ ಪಿ ಎಸ್ ಕೋರ್ಟ್, ಇಬ್ಬರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಮತ್ತೆ ಜೈಲೇ ಗತಿ ಎಂಬಂತೆ ಆಗಿದೆ. ನಟಿ ರಾಗಿಣಿ, ನಟಿ ಸಂಜನಾ ಸೇರಿದಂತೆ ಐವರು ಸ್ಯಾಂಡಲ್ ವುಡ್ ಪ್ರಕರಣದ ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಇಂದು ಎನ್ ಡಿ...
ಹೆಚ್ಚಿನ ಸುದ್ದಿ

BREAKING : ಕರ್ನಾಟಕ ಬಂದ್ : ತುರ್ತು ಸುದ್ದಿಗೋಷ್ಠಿ ಕರೆದ ಸಿಎಂ ಬಿಎಸ್ ವೈ-ಕಹಳೆ ನ್ಯೂಸ್

ಬೆಂಗಳೂರು : ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಇಂದು ನಡೆಯುತ್ತಿರು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಕರ್ನಾಟಕ ಬಂದ್ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ಗುಪ್ತಚರ ಇಲಾಖೆ ಮುಖ್ಯಸ್ಥ ದಯಾನಂದ್ ರಿಂದ ಮಾಹಿತಿ ಪಡೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ಜೋರಾಗುತ್ತಿದ್ದು, ರೈತರಿಗೆ ಸಂದೇಶ ಕೊಡಲು ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ ಎನ್ನಲಾಗಿದೆ....
ಹೆಚ್ಚಿನ ಸುದ್ದಿ

ಕೊರೋನಾ ಆತಂಕದ ನಡುವೆ ನವೆಂಬರ್ 1 ರಿಂದ ಮಂಗಳೂರು ವಿವಿ ಪದವಿ, ಸ್ನಾತಕೋತ್ತರ ತರಗತಿಗಳ ಪ್ರಾರಂಭ….?-ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ವಿವಿ ಪದವಿ ಹಾಗೂ ಸ್ನಾತಕೋತ್ತರ ತರಗತಿಗಳು ನವೆಂಬರ್ ಮೊದಲ ವಾರದಿಂದ ಪ್ರಾರಂಭವಾಗುವ ಸಾಧ್ಯತೆ ಇದೆ. ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್‌. ಯಡಪಡಿತ್ತಾಯ ಅವರು, ಯುಜಿಸಿ ನಿರ್ದೇಶನದ ಪ್ರಕಾರ, ನವೆಂಬರ್ 1 ರಿಂದ ತರಗತಿಗಳನ್ನು ಪ್ರಾರಂಭಿಸಲು ನಾವು ಸಿದ್ಧತೆ ನಡೆಸಿಕೊಳ್ಳುತ್ತಿದ್ದೇವೆ ಅಂದಿದ್ದಾರೆ. ಪ್ರಸ್ತುತ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನಡೆಯುತ್ತಿದ್ದು ಸೆಪ್ಟೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳ್ಳುತ್ತವೆ. ಅಕ್ಟೋಬರ್ 20 ರ ಮೊದಲು...
ಹೆಚ್ಚಿನ ಸುದ್ದಿ

ವಾಹನ ಸವಾರರ ಗಮನಕ್ಕೆ: ಅ.1ರಿಂದ ಚಾಲನಾ ಪರವಾನಗಿಯ ಹೊಸ ನಿಯಮಗಳು ಜಾರಿ- ಕಹಳೆ ನ್ಯೂಸ್

ನವದೆಹಲಿ (ಸೆ.28): ಇದೇ ಅಕ್ಟೋಬರ್ 1ರಿಂದ ಚಾಲನಾ ಪರವಾನಗಿಯ ಹೊಸ ನಿಯಮಗಳು ಜಾರಿಯಾಗಲಿದ್ದು, ವಾಹನ ಸವಾರರು ಈ ಬಗ್ಗೆ ಗಮನ ಹರಿಸಬೇಕಿದೆ. ಮುಂದಿನ ದಿನಗಳಲ್ಲಿ ಜಾರಿಗೆ ಬರಲಿರುವ ಪರವಾನಗಿಯ ಹೊಸ ನಿಯಮಗಳಲ್ಲಿ ಸಾಕಷ್ಟು ಬದಲಾವಣೆಗಳು ಇರಲಿವೆ. ದಿನನಿತ್ಯ ಉಪಯೋಗವಾಗುವ ಈ ನಿಯಮಗಳು ಜನಸಾಮಾನ್ಯರ ಮೇಲೆ ಪರಿಣಾಮ ಬೀರಲಿವೆ. ಕೇಂದ್ರ ಸರ್ಕಾರವು ಇತ್ತೀಚೆಗೆ ವಾಹನ ನೋಂದಣಿ ಕಾರ್ಡ್​​ ವಿತರಣೆ ಹಾಗೂ ವಾಹನ ಪರವಾನಗಿ(ಡ್ರೈವಿಂಗ್​ ಲೈಸೆನ್ಸ್​​​)ಗಳಿಗೆ ಸಂಬಂಧಿಸಿದಂತೆ ಹಲವು ಬದಲಾವಣೆಗಳನ್ನು ಜಾರಿ ಮಾಡಿದೆ....
ಹೆಚ್ಚಿನ ಸುದ್ದಿ

ಹಿರಿಯ ಯಕ್ಷಗಾನ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇನ್ನಿಲ್ಲ- ಕಹಳೆ ನ್ಯೂಸ್

ವಿಟ್ಲ: ಕರೋಪಾಡಿ ಗ್ರಾಮದ ತೆಂಕಬೈಲು ನಿವಾಸಿ, ಹಿರಿಯ ಯಕ್ಷಗಾನ ಭಾಗವತ, ಯಕ್ಷಗುರು ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.27ರಂದು ನಿಧನ ಹೊಂದಿದರು. ಅವರು ಪುತ್ರ-ಹವ್ಯಾಸಿ ಭಾಗವತ-ಶಿಕ್ಷಕ ಮುರಳೀಕೃಷ್ಣ ಶಾಸ್ತ್ರಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ತನ್ನದೇ ಶೈಲಿಯ ಹಾಡುಗಾರಿಕೆಯಿಂದ ಕಲಾಭಿಮಾನಿಗಳ ಮನಗೆದ್ದಿದ್ದ ಅವರು ಉಡುಪಿ ಯಕ್ಷಗಾನ ಕಲಾರಂಗ, ದ.ಕ.ಜಿಲ್ಲಾ ರಾಜ್ಯೋತ್ಸವ, ಕುರಿಯ ವಿಟ್ಠಲ ಶಾಸ್ತ್ರಿ, ಸಂಪಾಜೆ ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಪದ್ಯಾಣ, ಪಟ್ಟಾಜೆ, ದಿವಾಣ...
ಹೆಚ್ಚಿನ ಸುದ್ದಿ

ನಾಳೆ ಕರ್ನಾಟಕ ಬಂದ್ : ಏನಿರುತ್ತೆ? ಏನಿರಲ್ಲ? ಇಲ್ಲಿದೆ ನೋಡಿ ಫುಲ್ ಡಿಟೇಲ್ಸ್- ಕಹಳೆ ನ್ಯೂಸ್

ಬೆಂಗಳೂರು : ಕೇಂದ್ರ ಸರ್ಕಾರದ ನಡೆ ವಿರೋಧಿಸಿ ರೈತಪರ ಸಂಘಟನೆಯಿಂದ ಸೆ . 28 ರ ಸೋಮವಾರ ಅಂದರೆ ನಾಳೆ ರೈತ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಎಪಿಎಂಸಿ ಹಾಗೂ ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತಪರ ಸಂಘಟನೆಗಳು ಹಾಗೂ ಕಾರ್ಮಿಕ ಸಂಘಟನೆಗಳಿಂದ ನಾಳೆ ರಾಜ್ಯ ಬಂದ್ ಗೆ ಕರೆ ನೀಡಲಾಗಿದೆ. ನಾಳೆಯ ಕರ್ನಾಟಕ ಬಂದ್ ಗೆ 40 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿದ್ದು, ಓಲಾ,...
ಹೆಚ್ಚಿನ ಸುದ್ದಿ

ದ್ವಿತೀಯ ಪಿಯುಸಿ ಪಠ್ಯ ಕಡಿತ? ಸಚಿವ ಸುರೇಶ್ ಕುಮಾರ್ ಹೇಳಿದ್ದೇನು?-ಕಹಳೆ ನ್ಯೂಸ್

ಬೆಂಗಳೂರು : ದ್ವಿತೀಯ ಪಿಯುಸಿ ಪಠ್ಯದಲ್ಲಿ ಶೇ. 40 ರಷ್ಟು ಕಡಿತ ಮಾಡಲಾಗುತ್ತದೆ ಎಂಬ ಸುದ್ದಿಗಳು ಬಂದ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು. ದ್ವಿತೀಯ ಪಿಯುಸಿ ಪಠ್ಯದಲ್ಲಿ ಶೇ. 40 ರಷ್ಟು ಕಡಿತ ಮಾಡಲಾಗುತ್ತದೆ ಎಂಬ ವಿಚಾರ ಮಾಧ್ಯಮಗಳಲ್ಲಿ ಬಂದಿದೆ. ಆದರೆ ಈ ವಿಚಾರ ನನ್ನ ಬಳಿ ಚರ್ಚೆಗೆ ಬಂದಿಲ್ಲ. ಈ ಬಗ್ಗೆ ನಾನು ಇಂದು ಶಿಕ್ಷಣ...
ಹೆಚ್ಚಿನ ಸುದ್ದಿ

ಗ್ರಾ.ಪಂ ಚುನಾವಣೆ : ಸೂಕ್ತ ಬಂದೋಬಸ್ತ್‌ಗೆ ಪೊಲೀಸರಿಗೆ ಆಯೋಗ ಪತ್ರ-ಕಹಳೆ ನ್ಯೂಸ್

ಬೆಂಗಳೂರು, ಸೆ.25- ಅಕ್ಟೋಬರ್- ನವೆಂಬರ್‍ನಲ್ಲಿ ನಡೆಯಲಿರುವ ಗ್ರಾಮ ಪಂಚಾಯತಿ ಚುನಾವಣೆಗೆ ಸೂಕ್ತ ಬಂದೋಬಸ್ತ್ ಏರ್ಪಡಿಸುವಂತೆ ರಾಜ್ಯ ಚುನವಣಾ ಆಯೋಗ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಕೊರೊನಾ ವೈರಾಣು ಸಂಕಷ್ಟದ ಕಾಲದಲ್ಲಿ ಪಂಚಾಯತ್ ಚುನಾವಣೆಯನ್ನು ಮುಂದೂಡಲು ರಾಜ್ಯ ಬಿಜೆಪಿ ಸರ್ಕಾರ ಕೋರಿರುವ ಮಧ್ಯೆಯೇ ಚುನಾವಣೆ ನಡೆಸಲು ಆಯೋಗ ಕಾರ್ಯೋನ್ಮುಖವಾಗಿರುವುದು ಮಹತ್ವ ಪಡೆದುಕೊಂಡಿದೆ. ರಾಜ್ಯಾದ್ಯಂತ 5800 ಗ್ರಾಮ ಪಂಚಾಯತಿಗಳಿಗೆ 2020ರ ಅಕ್ಟೋಬರ್ - ನವೆಂಬರ್‍ನಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಈ ಚುನಾವಣೆಗೆ...
1 166 167 168 169 170 174
Page 168 of 174