ಬೆಂಗಳೂರಿನಲ್ಲಿ ಘೋರ ದುರಂತ , ಮಣ್ಣು ಕುಸಿದು ಇಬ್ಬರು ಕಾರ್ಮಿಕರು ದುರ್ಮರಣ.-ಕಹಳೆ ನ್ಯೂಸ್
ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು., ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತರನ್ನು ಜೆ ಶಿವಾ, ಮಧು ಸೂಧನ್ ರೆಡ್ಡಿ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಯಲಹಂಕದಲ್ಲಿ ಎಂಬೆಸ್ಸಿ ಸಂಸ್ಥೆಯ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಕಾರ್ಮಿಕರು ಅಡಿಪಾಯಕ್ಕೆ ಗುಂಡಿ ತೆಗೆಯುತ್ತಿದ್ದರು. ಈ ವೇಳೆ ಧಾರಾಕಾರ ಮಳೆಯಾಗಿದ್ದರಿಂದ ಗುಂಡಿಯಲ್ಲಿ ನೀರು ತುಂಬಿಕೊಂಡು ಮಣ್ಣು ಸಡಿಲವಾಗಿ ಕುಸಿದು ಬಿದ್ದಿದೆ. ಕೆಲಸ...







