Friday, March 6, 2026

ಹೆಚ್ಚಿನ ಸುದ್ದಿ

ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ನಕಲಿ ‘ವೆಬ್ ಸೈಟ್’ ತೆರೆದು ವಂಚನೆ.! – ಕಹಳೆ ನ್ಯೂಸ್

ಕುಂದಾಪುರ : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ಓಪನ್ ಮಾಡಿ ವಂಚನೆ ಎಸಗಿರುವ ಘಟನೆ ನಡೆದಿದ್ದು, ದೂರು ದಾಖಲಾಗಿದೆ. ಹೌದು, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಕೊಠಡಿ ಕಾಯ್ದಿರಿಸಲು ನಕಲಿ ವೆಬ್ ಸೈಟ್ ತಯಾರಿಸಿ ವಂಚನೆ ಮಾಡಿರುವ ಘಟನೆ ನಡೆದಿದ್ದು, ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ದೇವಸ್ಥಾನದ ಅಧಿಕೃತ ವೆಬ್ ಸೈಟ್ https://karnatakatemplesaccommodation.com ಬದಲಿಗೆ karnatakatempleaccommodation ಎಂಬ ಹೆಸರಿನ ಅನಧಿಕೃತ...
ರಾಜ್ಯಸುದ್ದಿಹೆಚ್ಚಿನ ಸುದ್ದಿ

ನ 19 ರಂದು ಬಾಲ್ಯವಿವಾಹ, ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಅಕ್ಕ ಕಾರ್ಯಪಡೆಗೆ ಚಾಲನೆ – ಕಹಳೆ ನ್ಯೂಸ್

ಬೆಂಗಳೂರು. - ಬಾಲ್ಯವಿವಾಹ ತಡೆಗಟ್ಟುವ ಹಾಗೂ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ಹತ್ತಿಕ್ಕುವ ಉದ್ದೇಶದಿಂದ ರಚಿಸಲಾಗಿರುವ ಅಕ್ಕ ಪಡೆಗೆ ನ .19 ರಂದು ಚಾಲನೆ ನೀಡಲಾಗುತ್ತಿದ್ದು, ಪೂರ್ವಭಾವಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸದಾಶಿವನಗರದಲ್ಲಿರುವ ಡಾ.ಜಿ.ಪರಮೇಶ್ವರ್‌ ಅವರ ಮನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭೇಟಿ ನೀಡಿದರು....
ಜಿಲ್ಲೆಮಂಡ್ಯಸುದ್ದಿಹೆಚ್ಚಿನ ಸುದ್ದಿ

ಮಂಡ್ಯದಲ್ಲಿ ಅಕ್ರಮವಾಗಿ 50ಕ್ಕೂ ಹೆಚ್ಚು ದನದ ಕರುಗಳನ್ನು ಮಾರಾಟಕ್ಕೆ ಯತ್ನ – ಕಹಳೆ ನ್ಯೂಸ್

ಮಂಡ್ಯ: ಜಿಲ್ಲೆಯಲ್ಲಿ ಅಕ್ರಮವಾಗಿ ಕರುಗಳ ಮಾರಾಟಕ್ಕೆ ಗ್ಯಾಂಗ್ ಮುಂದಾಗಿತ್ತು. ವಿಷಯ ತಿಳಿದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹೋಗ್ತಿದ್ದಂತೆ ಕರುಗಳನ್ನ ಬಿಟ್ಟು ಎಸ್ಕೇಪ್ ಆಗಿರುವಂತ ಘಟನೆ ತೆಂಡೆಕೆರೆ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ‌ ತಾಲೂಕಿನ ತೆಂಡೆಕೆರೆ ಗ್ರಾಮದ ಸಂತೆಯಲ್ಲಿ 50 ಕ್ಕೂ ಹೆಚ್ಚು ಕರುಗಳನ್ನ ಖರೀದಿಸಿ ಕಟ್ಟಡವೊಂದರಲ್ಲಿ ಕೂಡಿಟ್ಟದದ್ದರು. ವಿಷಯ ತಿಳಿದ ಮೈಸೂರು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಹೀಗೆ ದಾಳಿ ಮಾಡ್ತಿದ್ದಂತೆ ಅಕ್ರಮ ಗೋ...
ಕೇರಳರಾಜ್ಯಹೆಚ್ಚಿನ ಸುದ್ದಿ

ಕೇರಳ: ಕ್ಯಾನ್ಸರ್ ರೋಗಿಗಳಿಗೆ ಉಚಿತ ಬಸ್‌ ಪ್ರಯಾಣ ಯೋಜನೆ ಘೋಷಿಸಿದ ಕೆಎಸ್‌ಆರ್‌ಟಿಸಿ – ಕಹಳೆ ನ್ಯೂಸ್

ತಿರುವನಂತಪುರ: ಕ್ಯಾನ್ಸರ್‌ ರೋಗಿಗಳಿಗೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು(ಕೆಎಸ್‌ಆರ್‌ಟಿಸಿ) ಉಚಿತ ಬಸ್‌ ಪ್ರಯಾಣ ಯೋಜನೆ ಘೋಷಿಸಿದೆ. ಕ್ಯಾನ್ಸರ್‌ ರೋಗಿಗಳು ಚಿಕಿತ್ಸೆಗಾಗಿ ರಾಜ್ಯದಲ್ಲಿನ ಯಾವುದೇ ಆಸ್ಪತ್ರೆಗೆಗಳಿಗೆ ಬಸ್‌ನಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಸಾಮಾನ್ಯ ಬಸ್‌ನಿಂದ ಹಿಡಿದು ವೇಗದ ಬಸ್‌ನಲ್ಲಿಯೂ ಕೀಮೊ ತೆರಪಿ, ರೇಡಿಯೇಶನ್ ಮುಂತಾದ ಕ್ಯಾನ್ಸರ್‌ ಚಿಕಿತ್ಸೆಗಾಗಿ ರೋಗಿಗಳು ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯಸ್ಥ ಪ್ರಮೋಜ್ ಶಂಕರ್ ಹೇಳಿದ್ದಾರೆ. ಯೋಜನೆಗೆ ಅರ್ಹರಾಗಿರುವ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಕಾರು ಮತ್ತು ಆಟೊ ರಿಕ್ಷಾ ನಡುವೆ ಭೀಕರ ಅಪಘಾತ : ಬಾಲಕಿ ಸಾವು – ಕಹಳೆ ನ್ಯೂಸ್

ಪುತ್ತೂರು: ಕಾರು ಮತ್ತು ಆಟೊ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಆಟೊದಲ್ಲಿದ್ದ ಬಾಲಕಿ ಮೃತಪಟ್ಟಿದ್ದಾಳೆ. ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಸಭಾಭವನದ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ನಡೆದ ಅಪಘಾತದಲ್ಲಿ ಚಾಲಕ, ಮೂವರು ಮಹಿಳೆಯರು, ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಅಟೊ ಚಾಲಕ ಪುತ್ತೂರು ನಗರದ ಹೊರವಲಯದ ಬನ್ನೂರಿನ ಮಹಮ್ಮದ್ ಹನೀಫ್ ಅವರ 6 ವರ್ಷ ವಯಸ್ಸಿನ ಪುತ್ರಿ ಫಾತಿಮತ್...
ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ಆರೆಸ್ಸೆಸ್ ಬ್ಯಾನ್ ಮಾಡಿ ಎಂದ ಖರ್ಗೆಗೆ ಅಮಿತ್ ಶಾ ತಿರುಗೇಟು -ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ ಆರ್‌ಎಸ್‌ಎಸ್ (RSS) ಈ ದೇಶಕ್ಕೆ ಇಬ್ಬರು ಜನಪ್ರಿಯ ಪ್ರಧಾನ ಮಂತ್ರಿಗಳನ್ನು ನೀಡಿದೆ. ಆದರೆ ಕಾಂಗ್ರೆಸ್‌  ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅದನ್ನು ಬ್ಯಾನ್‌ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಅವರು ಆರ್‌ಎಸ್‌ಎಸ್‌ ಬ್ಯಾನ್‌ ಮಾಡಲು ಏಕೆ ಕಾರಣ ನೀಡುತ್ತಿಲ್ಲ ಎಂದು ಗೃಹ ಸಚಿವ ಅಮಿತ್‌ ಶಾ ತಿರುಗೇಟು ನೀಡಿದ್ದಾರೆ. ಪಾಟ್ನಾದಲ್ಲಿ ನಡೆದ ಬಿಹಾರ ಪವರ್ ಪ್ಲೇ ಸಮಾವೇಶದಲ್ಲಿ ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿದ ಅಮಿತ್‌ ಶಾ, ಮಲ್ಲಿಕಾರ್ಜುನ...
ಜಿಲ್ಲೆಮಂಡ್ಯಸುದ್ದಿಹೆಚ್ಚಿನ ಸುದ್ದಿ

ಮಂಡ್ಯದ ಮನೆಯ ತುಂಬೆಲ್ಲಾ ರಕ್ತ: ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲು – ಕಹಳೆ ನ್ಯೂಸ್

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರಿನ ಹೊಂಬಾಳೆಗೌಡನ ದೊಡ್ಡಿವೆ. ಮನೆಯ ತುಂಬೆಲ್ಲ ರಕ್ತ ಚಲ್ಲಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಗ್ರಾಮದಲ್ಲಿ ಮನೆಯೊಂದರಲ್ಲಿ ರಕ್ತದ ಕಲೆಗಳು ಪತ್ತೆಯಾಗಿ ಹೊಂಬ್ವಾಳೆಗೌಡನ ದೊಡ್ದಿ ಗ್ರಾಮದ ಸತೀಶ್ ದಂಪತಿ ಎಂಬುವವರ ಮನೆಯ ಹಾಲ್, ಬಾತ್ ರೂಂ, ಮನೆಯ ಆವರಣ, ಮನೆಯಲ್ಲಿದ್ದ ಟಿವಿ, ಫ್ಯಾನ್ ಗಳು ಸೇರಿದಂತೆ ಎಲ್ಲೆಡೆ ರಕ್ತ ಬಿದ್ದಿದೆ. ಮನೆ ತುಂಬೆಲ್ಲ ಕಂಡುಬರುತ್ತಿರುವ ರಕ್ತದ ಕಲೆಗಳು ಗ್ರಾಮಸ್ಥರಲ್ಲಿ ಆತಂಕ, ಅನುಮಾನ ಮೂಡಿಸಿದೆ. ಮನೆಗೆ ದೌಡಾಯಿಸಿರುವ ಸೋಕೋ...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಶ್ರೀಶೈಲಂ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿರುವ ಶ್ರೀಶೈಲಂನ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನಿ ಅವರಿಗೆ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಅವರು ಸಾಥ್ ನೀಡಿದರು. ಮೋದಿ ಅವರು ಬೆಳಿಗ್ಗೆ ದೇವಸ್ಥಾನಕ್ಕೆ ತೆರಳಿ ಮಲ್ಲಿಕಾರ್ಜುನ ಸ್ವಾಮಿ ಸನ್ನಿಧಿಯಲ್ಲಿ ಪಂಚಾಮೃತದೊಂದಿಗೆ ವಿಶೇಷ ರುದ್ರಾಭಿಷೇಕ ಪೂಜೆ ನೆರವೇರಿಸಿದರು. ದೇಶದಲ್ಲಿರುವ 12 ಜ್ಯೋತೀರ್ಲಿಂಗಗಳಲ್ಲಿ ಮಲ್ಲಿಕಾರ್ಜುನ ಸ್ವಾಮಿ ದೇವಾಲಯವೂ ಒಂದು....
1 2 3 4 5 174
Page 3 of 174