Friday, March 13, 2026

ಹೆಚ್ಚಿನ ಸುದ್ದಿ

ಜಿಲ್ಲೆಬೆಳಗಾವಿಸುದ್ದಿಹೆಚ್ಚಿನ ಸುದ್ದಿ

3 ವರ್ಷದ ಮಗನನ್ನು ಮನಬಂದಂತೆ ದೊಣ್ಣೆಯಿಂದ ಹೊಡೆದು ಕೊಂದ ತಂದೆ-ಕಹಳೆ ನ್ಯೂಸ್

ಬೆಳಗಾವಿ: ದಿನದಿಂದ ದಿನಕ್ಕೆ ಮನುಷ್ಯ ಮನುಷತ್ವ, ಮಾನವೀಯತೆಯನ್ನೂ ಕಳೆದುಕೊಂಡು ವರ್ತಿಸುತ್ತಿರುವುದು ದುರ್ದೈವ. ಇಲ್ಲೋರ್ವ ತಂದೆ ತನ್ನ ಸ್ವಂತ ಮಗನನ್ನು ದೊಣ್ಣೆಯಿಂದ ಮನಬಂದತೆ ಹೊಡೆದು ಕೊಂದಿರುವ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಗಡಿ ಜಿಲ್ಲೆ ಬೆಳಗಾವಿಯ ಬೈಲಹೊಂಗಲ ತಾಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ಇಂತದ್ದೊಂದು ಅಮಾನವೀಯ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿ ತಂದೆಯೇ ತನ್ನ ಮೂರು ವರ್ಷದ ಮಗನನ್ನು ಒಲೆಯಲ್ಲಿದ್ದ ಸೌದೆಯಿಂದ ಮನಸೋ ಇಚ್ಚೆ ಥಳಿಸಿ ಸಾಯಿಸಿದ್ದಾನೆ. ಮಗುವಿನ ತಲೆ, ಕೈ-ಕಾಲು, ಬೆನ್ನು,...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಜೀವನದಲ್ಲಿ ಕನ್ನಡ ಮಾತನಾಡಲ್ಲ, ಹಿಂದಿ ಮಾತಾಡು : ಸೊಕ್ಕಿನಿಂದ ಹೇಳಿದ ಎಸ್‌ಬಿಐ ಮ್ಯಾನೇಜರ್- ಕಹಳೆ ನ್ಯೂಸ್

ಆನೇಕಲ್‌: ತಾಲೂಕಿನ ಸೂರ್ಯನಗರದ ಎಸ್‌ಬಿಐ ಬ್ಯಾಂಕ್‌ನ ಮ್ಯಾನೇಜರ್‌ ಕನ್ನಡ ಗ್ರಾಹಕರ ಜೊತೆ ಕನ್ನಡ ಮಾತನಾಡದೇ ಹಿಂದಿಯಲ್ಲಿ ಮಾತನಾಡಿ ಕನ್ನಡ ಮಾತನಾಡುವುದಿಲ್ಲ ಎಂದು ವಾಗ್ವಾದಕ್ಕಿಳಿದಿರುವ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ಮ್ಯಾನೇಜರ್‌ ಸೊಕ್ಕಿನ ಮಾತುಗಳನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ವಿಡಿಯೊದಲ್ಲಿ ವ್ಯಕ್ತಿ ಮೇಡಂ ಇದು ಕರ್ನಾ ಟಕ, ಬೆಂಗಳೂರು ಇಲ್ಲಿ ನೀವು ಕನ್ನಡದಲ್ಲಿ ಮಾತನಾಡಬೇಕು ಎಂದು ಮನವಿ ಮಾಡಿಕೊಂಡರೂ ಅಹಂನಿಂದಲೇ ಉತ್ತರಿಸಿದ ಮ್ಯಾನೇಜರ್‌ ಹಿಂದಿ...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಇಸ್ರೇಲ್ ಬಳಿಕ ಭಾರತಕ್ಕೆ ಬಂದಿಳಿದ ಅಮೆರಿಕಾದ ಯುದ್ಧ ವಿಮಾನ -ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್ ನಲ್ಲಿ ಅಮಾಯಕರ ಪ್ರಾಣವನ್ನು ಉಗ್ರರು ತೆಗೆದ ಬೆನ್ನಲ್ಲೇ ಭಾರತ ಆಕ್ರೋಶಗೊಂಡಿದ್ದು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಮುಂದಾಗಿದೆ. ಇದರ ಬೆನ್ನಲ್ಲೇ ಇಸ್ರೇಲ್ ಮತ್ತು ಅಮೆರಿಕಾ ಯುದ್ಧ ವಿಮಾನಗಳು ಭಾರತಕ್ಕೆ ಬಂದಿಳಿದಿವೆ. ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ಬಳಿಕ ಭಾರತ ರಾಜತಾಂತ್ರಿಕವಾಗಿ ಪಾಕಿಸ್ತಾನಕ್ಕೆ ಹೊಡೆತ ನೀಡಿದೆ. ವೀಸಾ ರದ್ದು, ಸಿಂಧೂ ನದಿ ಒಪ್ಪಂದ ಮುರಿದುಕೊಂಡಿದೆ. ಅತ್ತ ಪಾಕಿಸ್ತಾನವೂ ಶಿಮ್ಲಾ ಒಪ್ಪಂದವನ್ನು ಮುರಿದುಕೊಂಡಿದೆ. ಇದೀಗ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ-ಕಹಳೆ ನ್ಯೂಸ್

ಪುತ್ತೂರು:ಎಪ್ರಿಲ್ 24 ಸಂಜೆ 4 ಗಂಟೆಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಅಕ್ಷಯ ನದಿಗೆ ದಿನದಂದು ಜನ ಚಿನ್ನದ ಖರೀದಿ ಯಾಕೆ ಮಾಡುತ್ತಾರೆ . ಇದರ ಧಾರ್ಮಿಕ ಪರಂಪರೆ ಕಾರಣಗಳು ಎಂಬ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ . ಈ ಕಾರ್ಯಕ್ರಮದಲ್ಲಿ. ಕುಂಟಾರು ರವೀಶ್ ತಂತ್ರಿಗಳು , ಪಂಜ ಭಾಸ್ಕರ ಭಟ್ , ವಂದನಾಶಂಕರ್ ಇವರು ತಮ್ಮ ವಿಚಾರಧಾರೆಯನ್ನು ಮಂಡಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಹತೋಭಾರ...
ದೆಹಲಿರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ ಘೋಷಿಸಿದ ಜಮ್ಮು ಸರ್ಕಾರ -ಕಹಳೆ ನ್ಯೂಸ್

ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಜಮ್ಮು ಮತ್ತು ಕಾಶ್ಮೀರದ ಸರ್ಕಾರ ಘೋಷಣೆ ಮಾಡಿದೆ. ಈ ಕುರಿತು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮಾಹಿತಿ ನೀಡಿದ್ದಾರೆ. 'ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ತೀವ್ರ ಆಘಾತವಾಗಿದ್ದು ಹಾಗೂ ಅತೀವ ದುಃಖಿತನಾಗಿದ್ದೇನೆ. ಅಮಾಯಕ ನಾಗರಿಕರ ವಿರುದ್ಧದ ಇಂತಹ ಹೇಯ ಕೃತ್ಯಗಳಿಗೆ ಸಮಾಜದಲ್ಲಿ ಯಾವುದೇ ಸ್ಥಾನವಿಲ್ಲ. ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಭಯೋತ್ಪಾದಕ ದಾಳಿಯಲ್ಲಿ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಉಡುಪಿಯಲ್ಲಿ ಮಳೆಯ ನಡುವೆಯೂ ನಡೆಯಿತು ದೈವದ ನೇಮ -ಕಹಳೆ ನ್ಯೂಸ್

ಉಡುಪಿ : ಸುಡುಬಿಸಿಲಿನಿಂದ ಕಂಗೆಟ್ಟಿರುವ ಕರಾವಳಿಯಲ್ಲಿ ವರುಣಾಗಮನ ತಂಪೆರೆದಿದೆ. ಆದರೆ, ದಿಢೀರ್ ಆಗಿ ಸುರಿಯುವ ಮಳೆಯಿಂದಾಗಿ ಹಲವೆಡೆ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಪ್ರಮುಖವಾಗಿ ಜಾತ್ರೋತ್ಸವಗಳು ನಡೆಯುತ್ತಿರುವ ಊರುಗಳಲ್ಲಿ ಮಳೆಯಿಂದಾಗಿ ದೇವರ ಉತ್ಸವಕ್ಕೆ ಮಳೆ ಅಡ್ಡಿ ಪಡಿಸಿದ್ರೆ, ಜಾತ್ರೆಯ ವ್ಯಾಪಾರಿಗಳು ಪರದಾಡುವಂತೆ ಮಾಡಿದೆ. ಇದೀಗ ಅಂತಹುದೇ ಒಂದು ಘಟನೆ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ನಡೆದಿದೆ. ದೈವದ ನೇಮವೊಂದಕ್ಕೆ ಮಳೆ ವಿಘ್ನ ತಂದೊಡ್ಡಿದೆ. ಸಾಮಾನ್ಯವಾಗಿ ಮಳೆ ಸಂಜೆ ಸುರಿಯುತ್ತಿದ್ದಾದ್ರೂ ಇಂದು ಮುಂಜಾನೆಯೇ ಎಂಟ್ರಿ ಕೊಟ್ಟಿದ್ದಾನೆ....
ರಾಜ್ಯಸುದ್ದಿಹೆಚ್ಚಿನ ಸುದ್ದಿ

‘ಹಾಲ್ ಟಿಕೆಟ್’ ಕದ್ದ ಹದ್ದು : ವಿಡಿಯೋ ವೈರಲ್- ಕಹಳೆ ನ್ಯೂಸ್

ಹೈದರಾಬಾದ್: ಪರೀಕ್ಷೆ ಆರಂಭವಾಗುವ ಮೊದಲೆ ಪರೀಕ್ಷ ಕೊಠಡಿಗೆ5 ಹದ್ದು ನುಗ್ಗಿ ಹಾಲ್ ಟಿಕೆಟ್ ಕಸಿದುಕೊಂಡ ಹೋಗಿರುವ ವಿಡಿಯೋ ವೈರಲ್ ಆಗಿದೆ. ಕಾಸರಗೋಡಿನ ಸರ್ಕಾರಿ ಯುಪಿ ಶಾಲೆಯಲ್ಲಿ ಗುರುವಾರ ಬೆಳಿಗ್ಗೆ ಕೇರಳ ಲೋಕಸೇವಾ ಆಯೋಗದ (ಪಿಎಸ್ಸಿ) ಅಭ್ಯರ್ಥಿಯೊಬ್ಬರಿಗೆ ಪರೀಕ್ಷೆ ಆರಂಭವಾಗುವ ಮೊದಲು ಹದ್ದು ನುಗ್ಗಿ ಹಾಲ್ ಟಿಕೆಟ್ ಕಸಿದುಕೊಂಡಿದೆ. ಅಭ್ಯರ್ಥಿಯು ಪರಿಷ್ಕರಿಸಲು ಮುಂಚಿತವಾಗಿ ಸ್ಥಳಕ್ಕೆ ತಲುಪಿದ್ದನು ಹಾಗೂ ಹಾಲ್ ಟಿಕೆಟ್ ಅನ್ನು ಅವನ ಪಕ್ಕದಲ್ಲಿ ಇರಿಸಿದ್ದನು. ಒಂದು ಪಕ್ಷಿ ತನ್ನ ಕೊಕ್ಕಿನಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಮುಳಿಯ – ಹೊಸ ಲೋಗೋ- ಅನಾವರಣ ; ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ -ಕಹಳೆ ನ್ಯೂಸ್

ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊ ದೊಂದಿಗೆ ನಿಮ್ಮ ಮುಂದಿದೆ.ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ ಲಾಂಛನವನ್ನು ಬಿಡುಗಡೆ ಮಾಡಿದರು. ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ. "ಇದೇ ತಿಂಗಳು ಹೊಚ್ಚ ಹೊಸತನದೊಂದಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಎಂದು ಮರುನಾಮಕರಣಗೊಳ್ಳಲಿದೆ. ಗ್ರಾಹಕರಿಗೆ ಯಾವಾಗಲೂ ಹೊಸತನ ನೀಡುವುದು...
1 38 39 40 41 42 174
Page 40 of 174